Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾ ವಿಮರ್ಶೆ – ವೃತ್ತಿಯಲ್ಲಿ ಉಪನ್ಯಾಸಕಿ ಪ್ರವೃತ್ತಿಯಲ್ಲಿ ಅನುಭವಿಸಿದ್ದನ್ನು ಕುಂಚದಲ್ಲಿ ಅರಳಿಸುವ ಚಿತ್ರಕಲಾವಿದೆ ಶ್ರೀಮತಿ ಜಯಶ್ರೀ ಶರ್ಮ
    Article

    ಕಲಾ ವಿಮರ್ಶೆ – ವೃತ್ತಿಯಲ್ಲಿ ಉಪನ್ಯಾಸಕಿ ಪ್ರವೃತ್ತಿಯಲ್ಲಿ ಅನುಭವಿಸಿದ್ದನ್ನು ಕುಂಚದಲ್ಲಿ ಅರಳಿಸುವ ಚಿತ್ರಕಲಾವಿದೆ ಶ್ರೀಮತಿ ಜಯಶ್ರೀ ಶರ್ಮ

    January 2, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲೆಯೆಂಬುದು ಯಾವ ರೀತಿಯಲ್ಲಿ ಬೇಕಾದರೂ ಪ್ರತಿಯೊಬ್ಬರನ್ನು ಆಕರ್ಷಿಸಬಹುದು. ಅದು ಹೇಗೆ ಯಾವಾಗ ಎಂದು ಹೇಳುವುದು ಅಸಾಧ್ಯ. ಅದಕ್ಕೆ ಮುಖ್ಯವಾಗಿ ಬೇಕಾಗಿರುವುದು ಆಸಕ್ತಿ ಗುರಿ ಮತ್ತು ಸಾಧಿಸುವ ಛಲ. ಕೆಲವರು ಕಲೆಯನ್ನು ನೋಡಿ ಕಲಿತರೆ ಕೆಲವರಿಗೆ ಬಾಲ್ಯದಿಂದಲೇ ಅದು ಕರಗತವಾಗಿರುತ್ತದೆ. ಚಿಕ್ಕವಯಸ್ಸಿನಲ್ಲಿ ಶಾಲೆಗೆ ಹೋದಾಗ ಅಲ್ಲಿ ಬಿಳಿಯ ಹಾಳೆಯ ಮೇಲೆ ಗೀಚಿದ ಗೆರೆಗಳಿಂದ ಹಿಡಿದು ಮುಂದಿನ ದಿನಗಳಲ್ಲಿ ತಮಗರಿವಿಲ್ಲದ ವಿಭಿನ್ನವಾದ ಕಲಾಕೃತಿಗಳ ಗುಚ್ಛವನ್ನು ಕಲಾಸಕ್ತರ ಮಡಿಲಿಗೆ ನೀಡಿದಾಗ, ಅದನ್ನು ನೋಡಿ ಅಭಿನಂದನೆಗಳ ಮಹಾಪೂರ ಬಂದಾಗ ಒಂದು ಕ್ಷಣ ತಮಗೆ ತಾವೇ ಹೆಮ್ಮೆ ಪಟ್ಟುಕೊಂಡಿದ್ದು ಇದ್ದೇ ಇರುತ್ತದೆ. ಹೀಗೆ ಬಾಲ್ಯದಿಂದಲೇ ಕಲೆಯ ಬಗ್ಗೆ ಅಪಾರ ಆಸಕ್ತಿ ಕೂಡ ಮೂಡಿಸಿಕೊಂಡು ಬಂದ ಕಲಾವಿದೆ ಶ್ರೀಮತಿ ಜಯಶ್ರೀ ಶರ್ಮ. ವೃತ್ತಿಯಲ್ಲಿ ಉಪನ್ಯಾಸಕರಾದರೂ ಕೂಡ ಕಲೆಯ ಬಲೆಗೆ ಸಿಲುಕಿ ತಮ್ಮದೇ ಆದ ಕಲಾ ಜಗತ್ತನ್ನು ಸೃಷ್ಟಿಸಿಕೊಂಡವರು ಜಯಶ್ರೀ ಶರ್ಮರವರು. ತಾನು ನೋಡಿದ್ದನ್ನು ಅನುಭವಿಸಿದ್ದನ್ನು ಕುಂಚದಲ್ಲಿ ಅರಳಿಸಿ ಎಲ್ಲರೂ ಮೆಚ್ಚುವ ಕಲಾತ್ಮಕ ಚಿತ್ರಗಳನ್ನು ನೀಡಿರುವುದು ಮೆಚ್ಚುಗೆ ವಿಷಯ.

    ಬಾಲ್ಯದಲ್ಲಿ ಶಾಲಾ ದಿನಗಳಿಂದಲೇ ಆರಂಭವಾದ ಕಲಾಪ್ರೀತಿ ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆಯಿತು. ಅಂದಿನಿಂದಲೇ ಅಪಾರವಾದ ಕಲಾಭಿಮಾನಿಯಾಗಿ ಕಲೆಯ ಬಗ್ಗೆ ವಿಶೇಷವಾದ ಕಾಳಜಿ ಹೊಂದಿ ಅದ್ಭುತವಾದ ಒಂದರ ಹಿಂದೊಂದು ಕಲಾಕೃತಿಗಳ ಗುಚ್ಛವನ್ನು ರಚಿಸಿರುವ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಪ್ರಸಾದ್ ಕಲಾಶಾಲೆಯಲ್ಲಿ ಚಿತ್ರಕಲೆಯ ಬಗ್ಗೆ ತರಬೇತಿಯನ್ನು ಪಡೆದುಕೊಂಡು ನಂತರ 1994ರಿಂದ 2015ರ ನಡುವೆ ಕರ್ನಾಟಕದ ಪುತ್ತೂರು ಮಡಿಕೇರಿ ವಿವಿಧ ಸಂಸ್ಥೆಗಳ ಮೂಲಕ ಐದು ಬಾರಿ ಕಲಾಪ್ರದರ್ಶನವನ್ನು ನೀಡಿದ ಹಿರಿಮೆ ಇವರದು. ಜಲವರ್ಣ ಮತ್ತು ತೈಲವರ್ಣದ ಕಲಾಕೃತಿಗಳು ನಿಜಕ್ಕೂ ಕೂಡ ಕಲಾಸಕ್ತರಿಗೆ ಅದ್ಭುತವಾದ ಅನುಭವವನ್ನು ನೀಡುವುದರಲ್ಲಿ ಸಂದೇಹವಿಲ್ಲ. ಒಂದಕ್ಕಿಂತ ಒಂದು ವಿಭಿನ್ನ ಕಲಾಕೃತಿಗಳು ವಿಶೇಷವಾದ ಅನುಭವದ ಜೊತೆಗೆ ಅದ್ಭುತವಾದ ವಿಚಾರಗಳನ್ನು ತಿಳಿಸುವ ಕಾರ್ಯವನ್ನು ಮಾಡುತ್ತವೆ. ಮೈಕ್ರೋಬಯಾಲಜಿ ಉಪನ್ಯಾಸಕರಾದರೂ ಕೂಡ ಕಲೆಯ ಬಗ್ಗೆ ಅಪಾರವಾದ ಆಸಕ್ತಿಯನ್ನು ಹೊಂದಿ ಒಂದಕ್ಕಿಂತ ಒಂದು ಅದ್ಭುತ ಕಲಾಕೃತಿಗಳನ್ನು ರಚಿಸಿರುವ ಕೀರ್ತಿ ಅವರಿಗೆ ಸಲ್ಲುತ್ತದೆ.

    ಇವರು ಮಂಗಳೂರಿನ ಪ್ರಸಾದ್ ಸ್ಕೂಲ್ ಆಫ್ ಆರ್ಟ್ ನಲ್ಲಿ ‘ಭಾವನಾ’ ಎಂಬ ಏಕವ್ಯಕ್ತಿ ಕಲಾ ಪ್ರದರ್ಶನ, ಮೂಡಬಿದರೆಯ ಆಳ್ವಾಸ್ ನಲ್ಲಿ ಸೃಜನ ಚಿತ್ರಕಲಾ ಚಾವಡಿಯ ನೊಂದಾಯಿತ ಸದಸ್ಯರಾಗಿದ್ದಾರೆ. ರಾಜ್ಯಮಟ್ಟದ ಚಿತ್ತಾರ ಸ್ಪರ್ಧೆಯಲ್ಲಿ ಬಹುಮಾನ ವಿಜೇತರು. ಇವರು ವರ್ಣ ಸಿಂಚನ ಸಮೂಹ ಕಲಾಪ್ರದರ್ಶನ ಇದರ ಜೊತೆಗೆ ಹಲವಾರು ಆನ್ಲೈನ್ ಕಲಾಪ್ರದರ್ಶನದಲ್ಲಿ ಭಾಗವಹಿಸಿರುವುದು ವಿಶೇಷ.

    ಇವರ ಉತ್ತಮ ಕಲಾ ಸೇವೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶದ ಝಾನ್ಸಿಯ ಮಣಿಕರ್ಣಿಕ ಆರ್ಟ್ ಗ್ಯಾಲರಿಯವರು ಮಹಿಳಾ ದಿನಾಚರಣೆಯ ನಿಮಿತ್ತ ಸಿದ್ದ ರಾಷ್ಟ್ರಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಇವರಿಗೆ ‘ಮಣಿಕರ್ಣಿಕ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗಿದೆ. ವೃತ್ತಿಯಲ್ಲಿ ಉಪನ್ಯಾಸಕರಾದರೂ ಇವರನ್ನು ಆಕರ್ಷಿಸಿತು ಕಲಾ ಜಗತ್ತು ಇನ್ನು ಮುಂದೆ ಇವರ ಕುಂಚದಿಂದ ಅದ್ಭುತ ಕಲಾಕೃತಿಗಳು ಹೊರಹೊಮ್ಮಲಿ ಅಂತರಾಷ್ಟ್ರೀಯ ಮಟ್ಟದ ಕಲಾವಿದರಾಗಿ ಗುರುತಿಸಿಕೊಳ್ಳಲಿ.

    ಬಳಕೂರು ವಿ.ಎಸ್. ನಾಯಕ, ದೂರವಾಣಿ ಸಂಖ್ಯೆ :9448687636

    ಪ್ರೊ. ವಿ.ಎಸ್. ನಾಯಕ ಬಳಕೂರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಳಕೂರಿನವರು. ಪ್ರಸ್ತುತ ಈಗ ಸುಮಾರು 20 ವರ್ಷಗಳಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ಸುಮಾರು 20 ವರ್ಷಗಳಿಂದ ಕಲೆ, ಪರಿಸರ ಶಿಕ್ಷಣ ಮತ್ತು ವಿಜ್ಞಾನ ಇದಕ್ಕೆ ಸಂಬಂಧಿಸಿದ ಅಂಕಣಗಳು, ಕಲಾ ಲೇಖನಗಳು, ಪ್ರತಿಭಾ ಅಂಕಣ ಸೇರಿದಂತೆ ನಮ್ಮ ನಾಡಿನ ಪ್ರಖ್ಯಾತ ದಿನ ಪತ್ರಿಕೆಗಳು, ವಾರಪತ್ರಿಕೆಗಳು ಮತ್ತು ಮಾಸಪತ್ರಿಕೆಗಳಲ್ಲಿ ಲೇಖನಗಳು ಪ್ರಕಟಗೊಂಡಿವೆ. ಇವರು ಬರೆದಿರುವ ಒಂದು ಕಲಾ ಲೇಖನವು ಬೆಂಗಳೂರು ನಗರ ವಿಶ್ವವಿದ್ಯಾಲಯ ಪದವಿಯ ಪಠ್ಯವಾಗಿದೆ. ಇವರ ಸೇವೆಯನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸೇವಾ ರತ್ನ ಪುರಸ್ಕಾರ, ಸ್ವಾಮಿ ವಿವೇಕಾನಂದ ಪ್ರಶಸ್ತಿ, ಸರ್ವೆಪಲ್ಲಿ ರಾಧಾಕೃಷ್ಣನ್ ಪುರಸ್ಕಾರ ಮತ್ತು ಕಾಯಕ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಬೊಳುವಾರು ಶ್ರೀ ಅಂಜನೇಯ ಯಕ್ಷಗಾನ ಕಲಾ ಸಂಘದ 55ರ ಸಂಭ್ರಮ ಕಾರ್ಯಕ್ರಮ
    Next Article ರಾಗತರಂಗ ಸಂಸ್ಥೆಯಿಂದ ‘ಬಾಲ ಪ್ರತಿಭೋತ್ಸವ’ | ಜನವರಿ 7
    roovari

    Add Comment Cancel Reply


    Related Posts

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಪುಸ್ತಕ ವಿಮರ್ಶೆ | ಡಾ. ಮೋಹನ ಕುಂಟಾರ್ ಇವರ ‘ಪುರಾಣ ಕಥಾಕೋಶ’

    May 28, 2025

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.