Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ರಂಗರಥ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಜುಲೈ 07ರಿಂದ 24

    July 1, 2025

    ಮಂಗಳೂರಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ‘ಸಾಹಿತ್ಯ ಕೃತಿ ಅವಲೋಕನ’ ಕಾರ್ಯಕ್ರಮ | ಜುಲೈ 05

    July 1, 2025

    ಬೋಳಾರದ ಪಾಲೆಮಾರ್ ಗಾರ್ಡನ್ ನಲ್ಲಿ ‘ಸ್ವರಾಲಯ ಸಾಧನಾ ಶಿಬಿರ’

    July 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಜಿರೆಯ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ‘ದೃಷ್ಟಿ – ಸೃಷ್ಟಿ’ ಕಾರ್ಯಕ್ರಮ
    Bharathanatya

    ಉಜಿರೆಯ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ‘ದೃಷ್ಟಿ – ಸೃಷ್ಟಿ’ ಕಾರ್ಯಕ್ರಮ

    September 21, 2024Updated:September 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ತಂಗಡಿ: ಮಂಗಳೂರಿನ ನಾಟ್ಯಾರಾಧನಾ ಸಂಸ್ಥೆಯ ತ್ರಿಂಶೋತ್ಸವದ ಅಂಗವಾಗಿ ಆಯೋಜಿಸಿದ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ – 9’ರ ‘ದೃಷ್ಟಿ – ಸೃಷ್ಟಿ’ ಕಾರ್ಯಕ್ರಮವು ಉಜಿರೆಯ ಶ್ರೀ ರಾಮಕೃಷ್ಣ ಸಭಾಭವನದಲ್ಲಿ 14 ಸೆಪ್ಟೆಂಬರ್ 2024ರ ಶನಿವಾರದಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ಆಡಳಿತ ಮೊಕ್ತಸರ ಶರತ್‌ಕೃಷ್ಣ ಪಡ್ಡೆಟ್ನಾಯ ಮಾತನಾಡಿ “ಹಿರಿಯರು ಬೆಳೆಸಿದ ಕಲಾಪರಂಪರೆಯನ್ನು ಉಳಿಸುವ ಕಾರ್ಯ ಮಂಗಳೂರಿನ ನಾಟ್ಯಾರಾಧನಾ ಕಲಾಕೇಂದ್ರ ಮಾಡುತ್ತಿರುವುದು ಶ್ಲಾಘನೀಯ. ಭಾರತೀಯ ಪರಂಪರೆಯಲ್ಲಿ ಕಲೆಗಳಿಗೆ ದೈವತ್ವದ ಸ್ಥಾನ ನೀಡಲಾಗಿದೆ.” ಎಂದರು.
    ಉಜಿರೆ ಎಸ್. ಡಿ. ಎಂ.ಕಾಲೇಜಿನ ಪ್ರಾಚಾರ್ಯ ಬಿ. ಎಂ. ಕುಮಾರ ಹೆಗ್ಡೆ, ಕಲಾನಿಕೇತನ ಕಲ್ಲಡ್ಕ ಇದರ ನಿರ್ದೇಶಕಿ ವಿದುಷಿ ವಿದ್ಯಾ ಮನೋಜ್, ನೀನಾಸಂ ಕಲಾವಿದೆ ಸಂಗೀತಾ ಭಿಡೆ, ಪುರೋಹಿತ ಗಣಪತಿ ಚಿಪಳೂಣ್ಕರ್, ಕಲಾಕೇಂದ್ರದ ಟ್ರಸ್ಟಿ ಬಿ. ರತ್ನಾಕರ ರಾವ್ ಉಪಸ್ಥಿತರಿದ್ದರು. ಸಂಯೋಜಕಿ ಚಿತ್ರಾ ಭಿಡೆ ಸ್ವಾಗತಿಸಿ, ಪ್ರಧಾನ ಟ್ರಸ್ಟಿ ವಿದುಷಿ ಸುಮಂಗಲಾ ರಾವ್ ಪ್ರಸ್ತಾವಿಕವಾಗಿ ಮಾತನಾಡಿದರು.

    ಸಭಾಕಾರ್ಯಕ್ರಮದ ಬಳಿಕ ವಿದುಷಿ ಸುಮಂಗಲಾ ರಾವ್, ವಿದ್ವಾನ್ ಶೋಧನ್ ಕುಮಾರ್, ಕುಮಾರಿ ವೃಂದಾ ಜಿ. ರಾವ್, ಕುಮಾರಿ ಧರಿತ್ರಿ ಭಿಡೆ ಹಾಗೂ ಕುಮಾರಿ ಹಂಸಿನಿ ಭಿಡೆ ನೃತ್ಯಗಳನ್ನು ಪ್ರಸ್ತುತಪಡಿಸಿದರು. ಇವರಿಗೆ ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ ದೀಪಕ್ ಪುತ್ತೂರು, ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಪುತ್ತೂರು ಹಾಗೂ ಕೊಳಲಿನಲ್ಲಿ ಕುಮಾರಿ ಮೇಧಾ ಮಂಗಳೂರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ | ಸೆಪ್ಟೆಂಬರ್ 21
    Next Article ವಿದ್ಯಾಗಿರಿಯಲ್ಲಿ ಲೋಕಾರ್ಪಣೆಗೊಂಡ ‘ಆಳ್ವಾಸ್ ಹೊಂಗಿರಣ’
    roovari

    Comments are closed.

    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.