Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮನಸೂರೆಗೊಂಡ ದುಬೈ ಯಕ್ಷೋತ್ಸವ | ವಿಶ್ವ ಪಟ್ಲ ಸಂಭ್ರಮ
    Yakshagana

    ಮನಸೂರೆಗೊಂಡ ದುಬೈ ಯಕ್ಷೋತ್ಸವ | ವಿಶ್ವ ಪಟ್ಲ ಸಂಭ್ರಮ

    June 20, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದುಬೈ : ಒಂದು ಕಾಲದಲ್ಲಿ ಆರ್ಥಿಕವಾಗಿ ಬಡತನದ ಬೇಗೆಯಲ್ಲಿ ಬಳಲುತ್ತಿದ್ದ ಯಕ್ಷಗಾನ‌ ಕಲಾವಿದರಿಗೆ ಆಸರೆಯ ದ್ಯೋತಕವಾಗಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಮೂಲಭೂತ ಸಹಕಾರಗಳನ್ನು ನೀಡುತ್ತಾ ಜನ ಮಾನಸದಲ್ಲಿ ನೆಲೆಗೊಳ್ಳುತ್ತಿರುವ ನಡುವೆ ಈ ಪ್ರೋತ್ಸಾಹಕ ಸಂಘಟನೆಗೆ ಪೋಷಕವಾಗಿ ಹಲವಾರು ದಾನಿಗಳು ತಮ್ಮ ಕೈಲಾದ ಕೊಡುಗೆ ನೀಡುತ್ತಾ ಯಕ್ಷ ಕಲೆಯನ್ನು ಶ್ರೀಮಂತಗೊಳಿಸುತ್ತಿರುವುದು ವರ್ತಮಾನದಲ್ಲಿ ಕಾಣಬಹುದಾಗಿದೆ. ಇದಕ್ಕೊಂದು ಸ್ಪಷ್ಟ ನಿದರ್ಶನ ಎಂಬಂತೆ ಪ್ರಪ್ರಥಮ ಬಾರಿಗೆ ಗಲ್ಫ್ ರಾಷ್ಟ್ರದಲ್ಲಿ ನಡೆದ ವಿಶ್ವ ಪಟ್ಲ ಸಂಭ್ರಮವು ಸಾವಿರಾರು ಯಕ್ಷಾಭಿಮಾನಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿರುವುದಲ್ಲದೆ ವಿವಿದೆಡೆಯ ಗಣ್ಯರನ್ನು ವಿಶ್ವ ಮಟ್ಟದಲ್ಲಿ ಗುರುತಿಸಿ ಸಂಭ್ರಮಿಸಿರುವುದು ಈ ಬಾರಿ ದುಬೈಯಲ್ಲಿ ನಡೆದ ವಿಶ್ವ ಪಟ್ಲ ಸಂಭ್ರಮದ ಸವಿಶೇಷತೆಯಾಗಿದೆ.

    ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಪಟ್ಲ ಘಟಕ ದುಬೈಯ ಸಹಯೋಗದೊಂದಿಗೆ ಜೂನ್ 11ರಂದು ದುಬೈಯ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಸಭಾಂಗಣದಲ್ಲಿ ಜರಗಿದ ದುಬೈ ‘ಯಕ್ಷೋತ್ಸವ 2023 ಮತ್ತು ವಿಶ್ವ ಪಟ್ಲ ಸಂಭ್ರಮ’ಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿರುವುದಲ್ಲದೆ ವಿವಿಧ ಕೊಡುಗೆ ನೀಡುವ ಜತೆಗೆ ಅವಿಸ್ಮೆಣೀಯವಾಗಿ ಮೂಡಿ ಬಂದಿತ್ತು.

    ಮಧ್ಯಾಹ್ನ 2 ಗಂಟೆಯ ಬಳಿಕ ಪುತ್ತಿಗೆ ವೆಂಕಟೇಶ ಶಾಸ್ತ್ರೀಯವರ ಪೌರೋಹಿತ್ಯದಲ್ಲಿ ರಂಗಸ್ಥಳ ಪೂಜೆ ಹಾಗು ಚೌಕಿ ಪೂಜೆಯೊಂದಿಗೆ ಯಕ್ಷಗಾನದ ಪೂರ್ವರಂಗ ಆರಂಭಗೊಂಡು ನಂತರ ಗಣ್ಯಾತಿಗಣ್ಯರಿಂದ ವಿಶ್ವ ಪಟ್ಲ ಸಂಭ್ರಮದ ದೀಪ ಬೆಳಗಿಸುವ ಮೂಲಕ ಸಂಪ್ರದಾಯಿಕವಾಗಿ ಉದ್ಘಾಟನೆಗೊಂಡಿತು. ಯಕ್ಷ ಸಂಘಟಕ ದಿನೇಶ್ ಶೆಟ್ಟಿ ಕೊಟ್ಟಿಂಜರವರ ಸಂಯೋಜನೆಯಲ್ಲಿ ‘ದಶಾವತಾರ’ ಯಕ್ಷಗಾನ ಪ್ರಸಂಗ ಆರಂಭಗೊಂಡಿತು. ಯಕ್ಷಗಾನದಲ್ಲಿ ಊರಿನ ಸುಪ್ರಸಿದ್ಧ ಹಿಮ್ಮೇಳ ಕಲಾವಿದರು ಹಾಗೂ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ.ಯ ಆರು ವಯಸ್ಸಿನ ಬಾಲ ಕಲಾವಿದರಿಂದ ಅರುವತ್ತು ವರ್ಷದ ಕಲಾವಿದರು ಅಮೋಘವಾದ ಅಭಿನಯದಲ್ಲಿ ಸೇರಿದ್ದ ಕಲಾಭಿಮಾನಿಗಳಿಗೆ ರಸದೌತಣ ನೀಡಿದರು. ಶೇಖರ್ ಡಿ.ಶೆಟ್ಟಿಗಾರ್ ಮತ್ತು ಶರತ್ ಕುಡ್ಲ ನಿರ್ದೇಶನ ಮಾಡಿದ್ದರು.

    ವಿಶ್ವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ದುಬೈ ಮತ್ತು ಯು.ಎ.ಇ. ಇಲ್ಲಿನ ಕಲಾವಿದರನ್ನು ಗುರುತಿಸಿ ಕೊಡಮಾಡುವ “ಯಕ್ಷಶ್ರಿ ರಕ್ಷ” ಪ್ರಶಸ್ತಿಯನ್ನು ಕಲಾವಿದರಾದ ಪಟ್ಲಗುತ್ತು ಮಹಾಬಲ ಶೆಟ್ಟಿಯವರಿಗೆ ನೀಡಲಾಯಿತು. “ವಿಶ್ವ ಕಲಾಪೋಷಕ” ಪ್ರಶಸ್ತಿಯನ್ನು ಪಟ್ಲ ಪೌಂಡೇಷನ್ ನ ಕೇಂದ್ರೀಯ ಘಟಕದ ಗೌರವಾಧ್ಯಕ್ಷರಾದ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸಮರ್ಪಿಸಲಾಯಿತು. ಶ್ರೀಮತಿ ಶೈಲಜಾ ನಿತ್ಯಾನಂದ ಶೆಟ್ಟಿಯವರು ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ಮಹಾ ಪೋಷಕರಾದ ಉದ್ಯಮಿ ಹರೀಶ್ ಶೇರಿಗಾರ್ ದಂಪತಿಗಳನ್ನು ಮತ್ತು ಭೀಮ ಜ್ಯುವೇಲರ್ಸ್ ನ ಯು.ನಾಗರಾಜ ರಾವ್ ರವರನ್ನು ಮಹಾ ಗೌರವದೊಂದಿಗೆ ಸನ್ಮಾನಿಸಲಾಯಿತು. ಮಹಾ ಪೋಷಕರನ್ನು ಮತ್ತು ವಿವಿಧ ಘಟಕಗಳಿಂದ ಬಂದ ಪದಾಧಿಕಾರಿಗಳನ್ನು ಗೌರವಿಸಲಾಯಿತು.

    ವೇದಿಕೆಯಲ್ಲಿ ಯು.ಎ.ಇ. ಯ ಪಟ್ಲ ಘಟಕದ ಗೌರವಾಧ್ಯಕ್ಷರಾದ ಪುತ್ತಿಗೆ ವಾಸುದೇವ ಭಟ್, ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಸುಜಾತ ಶೆಟ್ಟಿ, ರಮಾನಂದ ಶೆಟ್ಟಿ, ಸಂದೀಪ್ ರೈ ನಂಜೆ, ದಿವಾಕರ ಶೆಟ್ಟಿ, ಪ್ರದೀಪ್ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ, ಕೇಂದ್ರೀಯ ಘಟಕದ ಕೋಶಾಧಿಕಾರಿ ಸಿ.ಎ. ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯಕ್ಷೆ ಶ್ರೀಮತಿ ಆರತಿ ರಾಮಚಂದ್ರ ಆಳ್ವ, ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಘಟಕದ ಟ್ರಸ್ಟಿಗಳಾದ ರಮಾನಂದ ಶೆಟ್ಟಿ ಓಮಾನ್, ನಿತ್ಯಾನಂದ ಶೆಟ್ಟಿ, ಸುಧಾಕರ ಪೂಂಜ, ಜಯರಾಮ ರೈ ಮಿತ್ರಂಪಾಡಿ ಅಬುಧಾಬಿ, ಕೃಷ್ಣ ಶೆಟ್ಟಿ, ತಾರನಾಥ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ, ಶ್ರೀಮತಿ ಅನಿತ ಪಿಂಟೊ, ನಾರಾಯಣ ಶೆಟ್ಟಿ ಸುರತ್ಕಲ್, ಲೀಲಾಧರ ಶೆಟ್ಟಿ ಸುರತ್ಕಲ್, ಯಕ್ಷಗಾನ ಸಂಘಟಕ ಭುಜಬಲಿ‌ ಧರ್ಮಸ್ಥಳ ಮತ್ತು ಯಕ್ಷಗಾನ ಅಭ್ಯಾಸ ಕೇಂದ್ರದ ದಿನೇಶ್ ಶೆಟ್ಟಿ ಕೊಟ್ಟಿಂಜೆ ಉಪಸ್ಥಿತರಿದ್ದರು.

    ಪಟ್ಲ ಫೌಂಡೇಷನ್ ದುಬೈ ಘಟಕದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ತಮ್ಮ ಪ್ರಾಸ್ತವಿಕ ಮಾತುಗಳೊಂದಿಗೆ ಘಟಕದ ಕಾರ್ಯ ಚಟುವಟಿಕೆಗಳನ್ನು ವಿಶ್ಲೇಷಿಸಿದರು. ಕೇಂದ್ರ ಘಟಕದ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಮತ್ತು ರಾಜೇಶ್ ಕುತ್ತಾರ್ ಕಾರ್ಯಕ್ರಮ ನಿರೂಪಿಸಿದರು.

    ಕಾರ್ಯಕ್ರಮದ ಕೊನೆಗೆ ಊರಿಂದ ಆಗಮಿಸಿದ ಹಿಮ್ಮೇಳ ಕಲಾವಿದರಾದ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯ ಪದ್ಯಾಣ, ಪದ್ಮನಾಭ ಉಪಾಧ್ಯಾಯ, ವಸ್ತ್ರಲಂಕಾರರಾದ ಗಂಗಾಧರ ಶೆಟ್ಟಿಗಾರ್, ನವೀನ್ ಕುಂಪಲ ಮತ್ತು ಮನೋಜ್ ಕುಮಾರ್ ಅವರನ್ನ ಸ್ಮರಣಿಕೆ ನೀಡಿ ಗೌರವಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleನಮ್ಮ ಕುಡ್ಲ – ವಿದ್ಯಾರ್ಥಿಗಳಿಗೆ ‘ನೃತ್ಯ ಭಜನೆ’ ಸ್ಪರ್ಧೆ | ಜುಲೈ 1 ಮತ್ತು 2ರಂದು
    Next Article ರಂಗಸ್ಪಂದನದ ಸಾಂಸ್ಕೃತಿಕ ರಂಗದಿಬ್ಬಣದಲ್ಲಿ ಪೌರಾಣಿಕ ತುಳು ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.