Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ದ್ವಾದಶ ಹರಿಕಥಾ ಸತ್ಸಂಗ’ದ ಉದ್ಘಾಟನಾ ಸಮಾರಂಭ
    Cultural

    ‘ದ್ವಾದಶ ಹರಿಕಥಾ ಸತ್ಸಂಗ’ದ ಉದ್ಘಾಟನಾ ಸಮಾರಂಭ

    March 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಪ್ರವಚನಕಾರ ಹರಿದಾಸ ದಿ. ಪೇಜಾವರ ವಿಜಯಾನಂದ ರಾವ್ ಸಂಸ್ಮರಣಾರ್ಥ, ಹರಿಕಥಾ ಪರಿಷತ್, ಶೇಣಿ ಚಾರಿಟೇಬಲ್ ಟ್ರಸ್ಟ್, ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನ ಸಂಯುಕ್ತ ಆಶ್ರಯದಲ್ಲಿ ಕೊಲ್ಯ ಶ್ರೀ ರಮಾನಂದ ಸ್ವಾಮೀ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ‘ದ್ವಾದಶ ಹರಿಕಥಾ ಸತ್ಸಂಗ’ ಕಾರ್ಯಕ್ರಮವು ದಿನಾಂಕ 12-03-2024 ರಂದು ಉದ್ಘಾಟಣೆಗೊಂಡಿತು .
    ಕಾರ್ಯಕ್ರಮವನ್ನು ಉದ್ಘಾಟಿಸಿದ ಎಡನೀರು ಮಠಾಧೀಶರಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ “ಹರಿಕಥಾ ಕಾರ್ಯಕ್ರಮವು ಕೇವಲ ಮನೋರಂಜನೆಗಾಗಿರದೆ ಸಮಾಜದಲ್ಲಿ ಆಧ್ಯಾತ್ಮ ಹಾಗೂ ಪುರಾಣ ಚಿಂತನೆಗಳ ಒಂದು ಸಂಸ್ಕೃತಿ ಶಿಕ್ಷಣ ಕಲೆಯಾಗಿದೆ. ನಾಡಿನ ಎಲ್ಲ ಧಾರ್ಮಿಕ ಕ್ಷೇತ್ರಗಳು ನಡೆಸುವ ಉತ್ಸವಗಳ ಸಾಂಸ್ಕೃತಿಕ ಸರಣಿಯಲ್ಲಿ ಹರಿಕಥೆಯಂಥ ಕಲೆಗೆ ಪ್ರಾಶಸ್ತ್ಯ ನೀಡಿ ಪ್ರೋತ್ಸಾಹಿಸಬೇಕು.” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ “ಸಾಧಕರ ಸಂಸ್ಮರಣೆ, ಸನ್ಮಾನಗಳು ಸೇರಿದಂತೆ ಉಪಯುಕ್ತ ಚಟುವಟಿಕೆಗಳನ್ನು ಮಾಡುವಂತದ್ದು ಸಾಂಸ್ಕೃತಿಕ ಸಂಘಟನೆಗಳ ಕರ್ತವ್ಯ. ಈ ನಿಟ್ಟಿನಲ್ಲಿ ನಿರಂತರ ಕಾರ್ಯಶ್ರದ್ಧೆಯಲ್ಲಿರುವ ಶ್ರೀ ಮೂಕಾಂಬಿಕಾ ಕ್ಷೇತ್ರದ ಆಡಳಿತ ವರ್ಗ ಹಾಗೂ ಹರಿಕಥಾ ಪರಿಷತ್ತಿನ ಪದಾಧಿಕಾರಿಗಳು ಅಭಿನಂದನಾರ್ಹರು.” ಎಂದು ಹೇಳಿದರು.

    ಶೇಣಿ ಚಾರಿಟೇಬಲ್ ಟ್ರಸ್ಟ್ ಇದರ ಕೋಶಾಧಿಕಾರಿ ಜಿ. ಕೆ. ಭಟ್ ಅವರು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ದುಡಿದು ಅಕಾಲದಲ್ಲಿ ಕೀರ್ತಿ ಶೇಷರಾದ ಪ್ರವಚನಕಾರ, ಅರ್ಥದಾರಿ, ಹರಿದಾಸ ಪಿ.ವಿ. ರಾವ್ ಅವರ ಸಂಸ್ಮರಣ ಭಾಷಣಗೈದರು. ಮೂಕಾಂಬಿಕಾ ಕ್ಷೇತ್ರದ ಮಧುಸೂದನ ಅಯ್ಯರ್ , ರಾಧಾಕೃಷ್ಣ ಶೆಟ್ಟಿ, ಮಾತೃ ಮಂಡಳಿಯ ಸುಲೋಚನಾ ಟೀಚರ್, ಗುಣವತಿ ಟೀಚರ್, ಜನಾರ್ದನ ಹಂದೆ, ಹರಿದಾಸ್ ಸುಧಾಕರ ಕೋಟೆ ಕುಂಜತ್ತಾಯ, ಮತ್ತಿತರರು ಉಪಸ್ಥಿತರಿದ್ದರು. ಹರಿಕಥಾ ಪರಿಷತ್ ಇದರ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಸ್ವಾಗತಿಸಿ, ಸಂಚಾಲಕ ಸುಧಾಕರ್ ರಾವ್ ಪೇಜಾವರ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪಾವಂಜೆಯ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನೃತ್ಯಾಮೃತ-2’ ಸರಣಿ ಕಾರ್ಯಕ್ರಮದ ‘ನೃತ್ಯ ಲಹರಿ’
    Next Article ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸುಲೋಚನಾ ಪಚ್ಚಿನಡ್ಕ ನೇಮಕ
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.