ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ.) ಬೆಂಗಳೂರು ಹಾಗೂ ಶೇಷಾದ್ರಿಮರಂ ಸಂಜೆ ಪದವಿ ಕಾಲೇಜು, ಗೋಧೂಳಿ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ದ್ವಾರನಕುಂಟೆ ಪಾತಣ್ಣ 75ರ ಸಂಭ್ರಮ ಹಾಗೂ ‘ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 14 ಮಾರ್ಚ್ 2025ರ ಶುಕ್ರವಾರದಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಶಿಕ್ಷಣ ದತ್ತಿಯ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಕಾದಂಬರಿಕಾರರಾದ ಶ್ರೀ ದ್ವಾರನಕುಂಟೆ ಪಾತಣ್ಣ ಇವರ ಗೌರವ ಉಪಸ್ಥಿತಿ ಹಾಗೂ ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀ ಬಿ. ಎಂ. ಹನೀಫ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿದೇವಿ ಮಾಲಗತ್ತಿ ಇವರು ಶ್ರೀ ತುಂಬಾಡಿ ರಾಮಯ್ಯ ಹಾಗೂ ಶ್ರೀ ಗುರುಪ್ರಸಾದ್ ಕಂಟಲಗೆರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶೇಷಾದ್ರಿಪುರಂ ಶಿಕ್ಷಣ ದತ್ತಿ ಇದರ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಸಂಜೆ ಘಂಟೆ 4-30ರಿಂದ “ಶ್ರೀ ಕೃಷ್ಣಕಲಾ ಸಂಗಮ” ಇವರಿಂದ ಹಾಡುಗಾರಿಕೆ ಕಾರ್ಯಕ್ರಮ ನಡೆಯಲಿದೆ.
Subscribe to Updates
Get the latest creative news from FooBar about art, design and business.
Previous Article‘ಆಬೊಲಿಂ’ ಮಹಿಳಾ ಕವಿಗೋಷ್ಠಿ | ಮಾರ್ಚ್ 07