Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳಗಾವಿಯಲ್ಲಿ ‘ಈ ಹೊತ್ತಿಗೆ’ಯಿಂದ ‘ನಾಟಕ ರಚನಾ ಕಮ್ಮಟ’ | ಕೊನೆಯ ದಿನಾಂಕ ಜನವರಿ 7
    Drama

    ಬೆಳಗಾವಿಯಲ್ಲಿ ‘ಈ ಹೊತ್ತಿಗೆ’ಯಿಂದ ‘ನಾಟಕ ರಚನಾ ಕಮ್ಮಟ’ | ಕೊನೆಯ ದಿನಾಂಕ ಜನವರಿ 7

    December 20, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳಗಾವಿ : ಈ ಹೊತ್ತಿಗೆ ಟ್ರಸ್ಟ್ ಇದರ ‘ದಶಮಾನೋತ್ಸವ ಸಂಭ್ರಮ’ದ ಪ್ರಯುಕ್ತ ‘ನಾಟಕ ರಚನಾ ಕಮ್ಮಟ’ವನ್ನು 2024ರ ಜನವರಿ 26,27 ಮತ್ತು 28ರವರೆಗೆ ಬೆಳಗಾವಿಯ ‘ನಮ್ಮವರೊಂದಿಗೆ’ ಬಳಗದ ಸಹಯೋಗದೊಂದಿಗೆ ನಡೆಸುತ್ತಿದೆ. ನಾಟಕ ರಚನೆಯಲ್ಲಿ ಉತ್ಸುಕರಾಗಿರುವವರಿಗೆ ಇದೊಂದು ಸುವರ್ಣಾವಕಾಶ. ಕನ್ನಡ ಸಾಹಿತ್ಯಲೋಕದ ಮಹತ್ವದ ವಿಮರ್ಶಕರಾದ ಡಾ. ಎಂ.ಎಸ್. ಆಶಾದೇವಿ ಕಮ್ಮಟದ ನಿರ್ದೇಶಕರು.

    ನಾಟಕವು ಅತ್ಯಂತ ಪ್ರಭಾವಶಾಲಿ ಸಾಹಿತ್ಯ ಪ್ರಕಾರ. ಸಮುದಾಯದ ಆಗುಹೋಗುಗಳಷ್ಟೇ ಅದರ ಚಲನೆಗಳನ್ನು ಮುನ್ನೋಟದಲ್ಲಿ ಕೊಡಬಲ್ಲ ಶಕ್ತಿಯೂ ಇದಕ್ಕಿದೆ. ಸಾಹಿತ್ಯ ಪ್ರಕಾರವಲ್ಲದೆ ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಹೋರಾಟಗಳ ಮಾಧ್ಯಮವಾಗಿಯೂ ನಾಟಕ ತನ್ನ ಬಹು ಪಾತ್ರಗಳನ್ನು ನಿಭಾಯಿಸುತ್ತಾ ಬಂದಿದೆ. ಆದ್ದರಿಂದಲೇ ಸಾಹಿತ್ಯ ಚರಿತ್ರೆಯಲ್ಲಿ ನಾಟಕಕ್ಕೆ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ಈ ಹಿನ್ನೆಲೆಯಲ್ಲಿ ನಾಟಕ ರಚನೆಯ ತಾತ್ವಿಕ ತಾಂತ್ರಿಕ ಹಾಗೂ ಸೌಂದರ್ಯಾತ್ಮಕ ನೆಲೆಗಳನ್ನು ಪರಿಚಯಿಸುವ ಮತ್ತು ಕನ್ನಡದ ಸಮೃದ್ಧ ನಾಟಕ ಪರಂಪರೆಯನ್ನು ಅರಿಯುವ ಶಿಬಿರವನ್ನು ಈ ಹೊತ್ತಿಗೆಯಿಂದ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ನಾಟಕ ರಚನೆಯ ಕುರಿತ ಸಂವಾದಗಳು ಹಾಗೂ ಕಮ್ಮಟದ ಮೊದಲ ಮತ್ತು ಎರಡನೇ ದಿನ ಕಮ್ಮಟದ ಭಾಗವಾಗಿ ಎರಡು ನಾಟಕಗಳ ಪ್ರದರ್ಶನಗಳೂ ಇವೆ.

    ಡಾ. ಕೆ.ವೈ. ನಾರಾಯಣಸ್ವಾಮಿ, ಡಾ. ಶ್ರೀಪಾದ ಭಟ್, ಡಾ.ಹೇಮಾ ಪಟ್ಟಣಶೆಟ್ಟಿ, ಡಾ. ರಾಮಕೃಷ್ಣ ಮರಾಠೆ, ಡಾ. ಪ್ರಕಾಶ ಗರುಡ, ರಜನಿ ಗರುಡ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಈ ಮೂರು ದಿನಗಳ ಈ ಕಮ್ಮಟದಲ್ಲಿ ಭಾಗವಹಿಸಲು ಬಯಸುವವರು ನಿಮ್ಮ ಪರಿಚಯ, ಸಂಪರ್ಕ ಸಂಖ್ಯೆ, ಭಾವಚಿತ್ರವನ್ನು [email protected] ಈ ಮಿಂಚಂಚೆಗೆ ಕಳುಹಿಸಿಕೊಡಿ.

    ಕಮ್ಮಟದ ಪ್ರವೇಶ ಶುಲ್ಕ ರೂ.2,000/-
    ಪ್ರವೇಶ ಶುಲ್ಕವನ್ನು ಮರಳಿಸಲಾಗುವುದಿಲ್ಲ.
    ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.
    ಮೂವತ್ತು ಜನರಿಗೆ ಮಾತ್ರ ಅವಕಾಶ.
    ಅರ್ಜಿ ತಲುಪಲು ಕೊನೆಯ ದಿನಾಂಕ 07-01-2024

    Share. Facebook Twitter Pinterest LinkedIn Tumblr WhatsApp Email
    Previous Articleಪುರಭವನದಲ್ಲಿ ಶ್ರೀ ನಾಟ್ಯಾoಜಲಿ ಕಲಾ ಅಕಾಡೆಮಿಯ ‘ನಾಟ್ಯಾಂಜಲಿ ಕಲೋತ್ಸವ’
    Next Article ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ‘ಅರೆಭಾಷೆ ದಿನಾಚರಣೆ’
    roovari

    Add Comment Cancel Reply


    Related Posts

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.