Subscribe to Updates

    Get the latest creative news from FooBar about art, design and business.

    What's Hot

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026

    ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 20

    February 3, 2026

    ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭ | ಫೆಬ್ರುವರಿ 07

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭ | ಫೆಬ್ರುವರಿ 07
    Awards

    ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭ | ಫೆಬ್ರುವರಿ 07

    February 3, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಇದರ ವತಿಯಿಂದ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭವನ್ನು ದಿನಾಂಕ 07 ಫೆಬ್ರುವರಿ 2026ರಂದು ಅಪರಾಹ್ನ 2-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ವಹಿಸಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲ ಸಚಿವರಾದ ಡಾ. ಎ. ಸುಬ್ಬಣ್ಣ ರೈ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಪ್ರಕಟಿತ ಕವನ ಸಂಕಲನದ ಬಗ್ಗೆ ಕವಿ ಡಾ. ವಸಂತಕುಮಾರ್ ಪೆರ್ಲ ಹಾಗೂ ಸಂಶೋಧನಾತ್ಮಕ ಕೃತಿಯ ಬಗ್ಗೆ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಪಿ. ಇವರು ಅನಿಸಿಕೆಗಳನ್ನಾಡಲಿದ್ದಾರೆ.

    ಮುಂಬಯಿಯ ಸುನೀತಾ ಎಂ. ಶೆಟ್ಟಿ ಪ್ರಾಯೋಜಿಸುವ ‘ತೌಳವ ಸಿರಿ’ ಪ್ರಶಸ್ತಿಗೆ ತುಳು, ಕನ್ನಡ ಮತ್ತು ಕೊಂಕಣಿ ಭಾಷೆಯ ಹಿರಿಯ ಲೇಖಕಿ ಕ್ಯಾಥರಿನ್ ರಾಡ್ರಿಗಸ್ ಕಟಪಾಡಿ, ಲೇಖಕಿ ಚಂದ್ರಭಾಗಿ ರೈ ಇವರ ಹೆಸರಿನ ದತ್ತಿನಿಧಿ ಪುಸ್ತಕ ಬಹುಮಾನಕ್ಕೆ ಬಾಗಲಕೋಟೆಯ ಮುರ್ತುಜಾ ಬೇಗಂ ಕೊಡಗಲಿಯವರ ‘ಹಣತೆ ಹಚ್ಚಿ ಬಿಡಿ ಹೆಜ್ಜೆ ಹೆಜ್ಜೆಗೂ’ ಕೃತಿ ಹಾಗೂ ‘ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ’ಗೆ ಲೇಖಕಿ, ಸಂಘಟಕಿ ಸುಖಲಾಕ್ಷಿ ವೈ. ಸುವರ್ಣ ಇವರ ‘ಮುಂಬಯಿ ಮತ್ತು ಮಹಿಳೆ’ ಸಂಶೋಧನಾತ್ಮಕ ಕೃತಿ ಆಯ್ಕೆಯಾಗಿದೆ.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು
    Next Article ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 20
    roovari

    Add Comment Cancel Reply


    Related Posts

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026

    ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 20

    February 3, 2026

    ಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು

    February 3, 2026

    ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ಘೋಷಣೆ

    February 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.