Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ವತಿಯಿಂದ ಪ್ರಬಂಧ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ
    Competition

    ಕ.ಸಾ.ಪ. ವತಿಯಿಂದ ಪ್ರಬಂಧ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ

    August 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ದಿನಾಂಕ 02-08-2024ರಂದು ಪ್ರಬಂಧ ಸ್ಪರ್ಧೆ ಮತ್ತು ದೇಶ ಭಕ್ತಿ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುಶಾಲನಗರದ ಜೂನಿಯರ್ ಕಾಲೇಜು ದೈಹಿಕ ಶಿಕ್ಷಕ ಡಾ. ಸದಾಶಿವ ಪಲ್ಯದ ಇವರು  ಮಾತನಾಡಿ “ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ಜಾನಪದ ಸಾಹಿತ್ಯ ಇತ್ತೀಚಿಗೆ ಮರೆಯಾಗುತ್ತಿರುವುದು ಬೇಸರದ ವಿಚಾರ. 1911ರಲ್ಲಿ ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಂಘ ಎನ್ನುವ ಹೆಸರಿನಲ್ಲಿ ಸ್ಥಾಪನೆಯಾಗಿತ್ತು. ಆಗಲೇ ಸಾಹಿತ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಾರಂಭವಾಯಿತು. ಅನಂತರ ಮೈಸೂರು ಸಂಸ್ಥಾನದಿಂದ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾಗಿದ್ದು. ಈಗ ಕುಶಾಲನಗರ ತಾಲೂಕು ಘಟಕ ಸಾಹಿತ್ಯ ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ಲಾಘನೆಗೆ ಪಾತ್ರವಾಗುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಮುಖ್ಯ ಶಿಕ್ಷಕ ಎ.ಸಿ. ಮಂಜುನಾಥ್ ಮಾತನಾಡಿ, “ಸ್ಪರ್ಧೆಗಳಲ್ಲಿ ಒಬ್ಬರು ಸೋತಾಗ ಮಾತ್ರ ಮತ್ತೊಬ್ಬರು ಗೆಲ್ಲಲು ಸಾಧ್ಯವಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದವರು ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ” ಎಂದರು. ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, “ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮಲ್ಲಿ ಅಡಗಿರುವ ಪ್ರತಿಭೆ ಅನಾವರಣ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು. ಸಾಹಿತ್ಯ ಪರಿಷತ್ತು ಕಾರ್ಯದರ್ಶಿಗಳಾದ ಎಸ್. ನಾಗರಾಜ್, ಟಿ.ವಿ. ಶೈಲಾ, ಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೆಶಕರಾದ ಬಿ.ಬಿ. ಹೇಮಾಲತಾ, ಡಿ.ಆರ್. ಸೋಮಶೇಖರ್ ಮತ್ತು  ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿ
    Next Article ಕರ್ನಾಟಕ ನಾಟಕ ಅಕಾಡೆಮಿಯಿಂದ ಕೊಡಮಾಡುವ ವಿವಿಧ ಪ್ರಶಸ್ತಿಗಳು ಪ್ರಕಟ 
    roovari

    Comments are closed.

    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.