Subscribe to Updates

    Get the latest creative news from FooBar about art, design and business.

    What's Hot

    ‘ಸಾಹಿತ್ಯ ಪುರಸ್ಕಾರ’ಕ್ಕೆ ಕವನ ಸಂಕಲನ ಆಹ್ವಾನ

    January 29, 2026

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ
    Awards

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ, ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಇವರ ಮಾತಾ-ಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2026ನೇ ಸಾಲಿನ ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರನ್ನು ಆಯ್ಕೆ ಮಾಡಲಾಗಿದೆ.

    ಸುಳ್ಯ ತಾಲೂಕಿನ ದೊಡ್ಡ ತೋಟದವರಾದ ಮಹೇಶ ಮಣಿಯಾಣಿ ಅವರು ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್, ಉಬರಡ್ಕ ಉಮೇಶ್ ಶೆಟ್ಟಿಯವರಿಂದ ಹೆಜ್ಜೆಗಾರಿಕೆ ಕಲಿತು ಮೇಳ ಸೇರಿದವರು. ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರ ಮಾರ್ಗದರ್ಶನದಲ್ಲಿ ಕಟೀಲು ಮೇಳ ಸೇರಿದ ಅವರು, ಆರಂಭದಲ್ಲಿ ಬಪ್ಪನಾಡು ಮೇಳ, ನಂತರ ಧರ್ಮಸ್ಥಳ ಮೇಳಗಳಲ್ಲಿ ಸ್ತ್ರೀವೇಷ, ಪುಂಡುವೇಷ ನಂತರ ಪೂರ್ಣಪ್ರಮಾಣದ ಹಾಸ್ಯಗಾರರಾಗಿ ಒಟ್ಟು 37 ವರ್ಷ ಯಕ್ಷ ಸೇವೆ ಮಾಡಿದವರು. ಮಳೆಗಾಲದ ತಿರುಗಾಟದಲ್ಲಿ ಏಳು ವರ್ಷದಿಂದ ಮಹಿಳಾ ಕಲಾವಿದೆ ವಿದ್ಯಾ ಕೋಳ್ಳೂರು ಮತ್ತು ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ತಂಡದೊಂದಿಗೆ ಅಮೇರಿಕಾ. ಯುರೋಪ್ ಯಕ್ಷ ಪ್ರವಾಸದ ಖಾಯಂ ಕಲಾವಿದರಾಗಿದ್ದಾರೆ. ವಿಶಿಷ್ಟ ಬಣ್ಣಗಾರಿಕೆ, ಆಂಗಿಕ ಚಲನೆ, ನಿಖರ ಹೆಜ್ಜೆಗಾರಿಕೆ, ವೇಷಭೂಷಣ, ಸ್ಪಷ್ಟ ಮಾತುಗಾರಿಕೆಯಿಂದ ಪುರಾಣದ ಎಲ್ಲ ಪಾತ್ರಗಳಿಗೆ ಜೀವ ತುಂಬುವ ಅಪರೂಪದ ಕಲಾವಿದರೆನಿಸಿಕೊಂಡಿದ್ದಾರೆ. ಯಕ್ಷಗಾನದ ಪರಂಪರೆಯ ಚೌಕಟ್ಟು ಮೀರದ, ಚೌಕಿಯ ಶಿಸ್ತಿಗೆ ಬದ್ಧರಾದ ಮಹೇಶ್ ಮಣಿಯಾಣಿ ರಾಜ್ಯಾದ್ಯಂತ ತನ್ನದೇ ಆದ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 25 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಪ್ರಧಾನ ಹಾಸ್ಯಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಪ್ರಶಸ್ತಿಯು ಸನ್ಮಾನ ಪತ್ರ, ರೇಷ್ಮೆ ಶಾಲು, ಫಲಕ, ರೂ.15,555/- ನಗದನ್ನೂ ಹೊಂದಿದೆ. ದಿನಾಂಕ 14 ಮತ್ತು 15 ಫೆಬ್ರುವರಿ 2026ರಂದು ರಂಗಮನೆಯಲ್ಲಿ ನಡೆಯುವ ರಂಗಸಂಭ್ರಮ-2026 ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಮನೆ ಅಧ್ಯಕ್ಷರಾದ ಡಾ. ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

    award baikady roovari theatre yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಬಾವಿ ಸಭೆ
    Next Article ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30
    roovari

    Add Comment Cancel Reply


    Related Posts

    ‘ಸಾಹಿತ್ಯ ಪುರಸ್ಕಾರ’ಕ್ಕೆ ಕವನ ಸಂಕಲನ ಆಹ್ವಾನ

    January 29, 2026

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಬಾವಿ ಸಭೆ

    January 29, 2026

    ವಿಮರ್ಶಕಿ ತಾರಿಣಿ ಮತ್ತು ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.