Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಸಾಹಿತಿ ನಾ’ಡಿಸೋಜ ನಿಧನ
    Kannada

    ಹಿರಿಯ ಸಾಹಿತಿ ನಾ’ಡಿಸೋಜ ನಿಧನ

    January 6, 2025Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಾ’ಡಿಸೋಜ ಎಂದೇ ಪ್ರಖ್ಯಾತರಾಗಿರುವ ಹಿರಿಯ ಸಾಹಿತಿ ನಾಬರ್ಟ್ ಡಿ’ಸೋಜ ಇವರು ವಯೋ ಸಹಜ ಅನಾರೋಗ್ಯದಿಂದ ದಿನಾಂಕ 05 ಜನವರಿ 2025ರ ಭಾನುವಾರ ಸಂಜೆ ನಿಧನರಾದರು. ಇವರಿಗೆ 88ವರ್ಷ ವಯಸ್ಸಾಗಿತ್ತು.
    ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರಾದ ಇವರು ತಮ್ಮ ಜೀವನದ ಸಿಂಹ ಪಾಲನ್ನು ಸಾಹಿತ್ಯ ಸೇವೆಗಾಗಿ ಮುಡುಪಾಗಿಟ್ಟವರು. ಇವರು ಪರಿಸರ ಕಾಳಜಿಯುಳ್ಳ ಮಹತ್ವದ ಕಾದಂಬರಿಕಾರರಲ್ಲಿ ಒಬ್ಬರಾಗಿದ್ದರು.
    ಡಿ’ಸೋಜರು ಮೊದಲಿಗೆ ‘ಪ್ರಪಂಚ’ ಪತ್ರಿಕೆಗೆ ಕಥೆಗಳನ್ನು ಬರೆಯತೊಡಗಿದರು. ನಂತರ ಎಲ್ಲಾ ಪ್ರಮುಖ ಪತ್ರಿಕೆಗಳಲ್ಲೂ ಇವರ ಕಥೆಗಳು ಪ್ರಕಟವಾಗತೊಡಗಿದವು. ಡಿ’ಸೋಜ ಅವರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾದದ್ದು 1964ರಲ್ಲಿ. ನಂತರ ‘ಮಂಜಿನ ಕಾನು’, ‘ಈ ನೆಲ ಈಜಲ’, ‘ಕೆಂಪು ತ್ರಿಕೋನ’, ‘ನೆಲೆ’, ‘ಮಾನವ’ ಹೀಗೆ ಇವರು ಬರೆದಿರುವ ಕಾದಂಬರಿಗಳು ಸುಮಾರು 40. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹತ್ತು ಹಲವು ವಿಷಯಗಳನ್ನು ಒಳಗೊಂಡ ಇವರ ಕಾದಂಬರಿಗಳು ಓದುಗರ ಮನಸೂರೆಗೊಂಡಿವೆ. ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳು 9 ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು 2 ಸಂಪುಟಗಳಲ್ಲಿ ಪ್ರಕಟವಾಗಿವೆ.

    ನಾಡಿಗೆ ಬೆಳಕನ್ನು ನೀಡಲು ಪ್ರಾರಂಭಿಸಿದ ವಿದ್ಯುಚ್ಛಕ್ತಿ ಯೋಜನೆಯ ಅಡಿಯಲ್ಲಿ ಬಹಳಷ್ಟು ಜನರ ಬದುಕುಗಳು ಕತ್ತಲೆಯಲ್ಲಿ ಕರಗಿ ಹೋಗುವ ವಸ್ತುವಾಗಿರುವ ‘ಮುಳುಗಡೆ’ ಕಾದಂಬರಿಯು ‘ಮುಳುಗಡೆ’ ಪ್ರದೇಶದ ಜನರು ಪುನಃ ಬದುಕು ಕಟ್ಟಿಕೊಳ್ಳಲು ಹೆಣಗಾಡುವ ಕಷ್ಟಗಳು ಮನಸ್ಸಿಗೆ ತಟ್ಟುವಂತೆ ಬರೆದಿದ್ದಾರೆ.ಇದು ‘ಸುಧಾ’ ವಾರಪತ್ರಿಕೆಯ ‘ಯುಗಾದಿ ಕಾದಂಬರಿ ಸ್ಪರ್ಧೆ’ಯಲ್ಲಿ ಪ್ರಥಮ ಬಹುಮಾನ ಪಡೆದಿತ್ತು. ಸುರೇಶ್ ಹೆಬ್ರೀಕರ್ ಅವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿ ಅವರ ನಿರ್ದೇಶನದಲ್ಲಿ ‘ದ್ವೀಪ’, ಸಿರಿಗಂಧ ಶ್ರೀನಿವಾಸಮೂರ್ತಿ ಅವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣ ಅವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನು ಅವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ ಮತ್ತು ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನು ಗಳಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ. ದೂರದರ್ಶನ ಮಾಧ್ಯಮದಲ್ಲಿ ಇವರ ಮಕ್ಕಳ ಧಾರವಾಹಿ, ಕಥೆಗಳು, ಹಲವಾರು ಕಾದಂಬರಿಗಳು ನಾಟಕಕ್ಕೆ ರೂಪಾಂತರವಾಗಿ ಪ್ರದರ್ಶಿತವಾಗಿವೆ.

    ಕಥೆ, ಕಾದಂಬರಿ, ನಾಟಕ, ಕವನ, ಪ್ರಬಂಧ, ಮಕ್ಕಳ ಸಾಹಿತ್ಯ ಹೀಗೆ ಸಾಹಿತ್ಯದ ನಾನಾ ಮಗ್ಗುಲುಗಳಲ್ಲಿ ಕೈಯ್ಯಾಡಿಸಿದ ನಾ’ಡಿಸೋಜಾರವರು ಒಬ್ಬ ದಣಿವಿಲ್ಲದ ಸಾಹಿತಿ. ಸಂಘರ್ಷ, ಸಮಸ್ಯೆ, ಮನಸ್ಸಿನ ಗೊಂದಲಗಳಿಗೆ ಇವರು ತಮ್ಮ ಸಾಹಿತ್ಯದ ಮೂಲಕ ಕನ್ನಡಿ ಹಿಡಿದವರು. ಒಬ್ಬ ಶ್ರೇಷ್ಠ ಕಾದಂಬರಿಕಾರ, ಶಿಶು ಸಾಹಿತಿ ಒಟ್ಟಿನಲ್ಲಿ ಒಬ್ಬ ಕ್ರಿಯಾಶೀಲ ಸಾಹಿತಿಯನ್ನು ಸಾಹಿತ್ಯ ಲೋಕ ಕಳೆದುಕೊಂಡಿದೆ.

    kannada Literature
    Share. Facebook Twitter Pinterest LinkedIn Tumblr WhatsApp Email
    Previous Articleವ್ಯಂಗ್ಯಚಿತ್ರ ಕಲಾವಿದ ವೆಂಕಟ್ ಭಟ್ ಎಡನೀರು ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Next Article ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ‘ಉತ್ತುಂಗ’ ವಾರ್ಷಿಕ ಸಂಚಿಕೆ ಬಿಡುಗಡೆ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.