ಶಿರಸಿ : ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ (ರಿ.) ಶಿರಸಿ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು ಇವರ ಸಹಯೋಗದೊಂದಿಗೆ 14ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 01 ಜೂನ್ 2025ರಂದು ಸಂಜೆ 4-00 ಗಂಟೆಗೆ ಶಿರಸಿಯ ನೆಮ್ಮದಿ ಆವರಣದ ರಂಗಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭಾ ಕಾರ್ಯಕ್ರಮವನ್ನು ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಎನ್. ಹೆಗಡೆ ಹಿರೇಸರ, ಧಾರವಾಡ ಹಾಲು ಒಕ್ಕೂಟ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ನನೆ ಮತ್ತು ರಾಜದೀಪ ಟ್ರಸ್ಟ್ ಶಿರಸಿ ಅಧ್ಯಕ್ಷ ದೀಪಕ ದೊಡ್ಡರು ಇವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಲೆಕ್ಕಪತ್ರ ಪರಿಶೋಧಕ ಉದಯ ಸ್ವಾದಿ ವಹಿಸಲಿದ್ದಾರೆ.
ಯಕ್ಷಗಾನದ ಹಿರಿಯ ಭಾಗವತರಾದ ರವೀಂದ್ರ ಭಟ್ ಅಚವೆ ಇವರನ್ನು ಸನ್ಮಾನಿಸಲಾಗುವುದು ಹಾಗೂ ಕುಮಾರಿ ಅಭಿಜ್ಞಾ ಹೆಗಡೆ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನಡೆಯುವ ‘ಸುದರ್ಶನ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ರವೀಂದ್ರ ಭಟ್ಟ ಅಚವೆ, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ ಮತ್ತು ಚಂಡೆಯಲ್ಲಿ ಪ್ರಶಾಂತ ಹೆಗಡೆ ಕೈಗಡಿ ಹಾಗೂ ಮುಮ್ಮೇಳದಲ್ಲಿ ಸನ್ಮಯ ಭಟ್ಟ ಮಲವಳ್ಳಿ, ಮಾರುತಿ ನಾಯ್ಕ ಬೈಲಗದ್ದೆ, ಪ್ರವೀಣ ಹೆಗಡೆ ತಟ್ಟೀಸರ, ಮಂಜುನಾಥ ಹೆಗಡೆ ಹಿಲ್ಲೂರು, ರಮಾನಂದ ಹೆಗಡೆ ಹಲ್ಲೆಕೊಪ್ಪ ಇವರುಗಳು ಸಹಕರಿಸಲಿದ್ದಾರೆ.