Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಂದಟ್ಟು ಸೂರ್ಯನಾರಾಯಣ ಉರಾಳರವರಿಗೆ ಸನ್ಮಾನ ಕಾರ್ಯಕ್ರಮ | ಮೇ 1
    Felicitation

    ಹಂದಟ್ಟು ಸೂರ್ಯನಾರಾಯಣ ಉರಾಳರವರಿಗೆ ಸನ್ಮಾನ ಕಾರ್ಯಕ್ರಮ | ಮೇ 1

    April 26, 2024Updated:April 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಂದಟ್ಟು : ಮಯ್ಯ ಯಕ್ಷ ಬಳಗ ಹಾಲಾಡಿ, ವಿವಾಹ ಸಂಪರ್ಕ ವೇದಿಕೆ, ಗೆಳೆಯರ ಬಳಗ ಯುವಕ ಸಂಘ (ರಿ.), ದಾನಗುಂದು ಹಂದಟ್ಟು, ಬಾರಿಕೆರೆ ಯುವಕ ಮಂಡಲ (ರಿ.) ಮತ್ತು ಅಭಿಮಾನ್ ಫ್ರೆಂಡ್ಸ್ ನಾಗಬನ ಹಂದಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಸಮಾಜಮುಖಿ ಬದುಕಿನ ಸಂತೃಪ್ತ ಸಾಧಕ ಯಕ್ಷಾರಾಧಕ ಹಂದಟ್ಟು ಸೂರ್ಯನಾರಾಯಣ ಉರಾಳ ಇವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 01-05-2024ರಂದು ಸಂಜೆ 7.00ರಿಂದ ಉರಾಳರಕೇರಿ ಹಂದಟ್ಟು ಇಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವು ಉಪನ್ಯಾಸಕರಾದ ಶ್ರೀ ಬಾಲಕೃಷ್ಣ ನಕ್ಷತ್ರಿ ಮತ್ತು ನಿವೃತ್ತ ಅಧ್ಯಾಪಕರಾದ ಶ್ರೀ ಶ್ರೀಪತಿ ಹೇರ್ಳೆ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದ್ದು, ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಕೆ.ಎಸ್. ಕಾರಂತರು ಅಧ್ಯಕ್ಷತೆಯನ್ನು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕಲ್ಲೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕಲ್ಲೂರ, ಅಮೃತೇಶ್ವರೀ ದೇವಸ್ಥಾನ ಮತ್ತು ಮೇಳದ ವ್ಯವಸ್ಥಾಪಕರಾದ ಶ್ರೀ ಆನಂದ್ ಸಿ. ಕುಂದರ್, ಹಿರಿಯ ಕಲಾ ಸಾಹಿತಿಯಾದ ಶ್ರೀ ಜನಾರ್ಧನ ಹಂದೆ ಹಂದಟ್ಟು, ಗೋಳಿಗರಡಿ ಮೇಳದ ಮಾಜಿ ಯಜಮಾನರಾದ ಶ್ರೀ ಸುರೇಂದ್ರ ಪಣಿಯೂರು, ಹಾಲಿ ಯಜಮಾನರಾದ ಶ್ರೀ ವಿಠ್ಠಲ ಪೂಜಾರಿ ಮತ್ತು ಸಾಲಿಗ್ರಾಮ ಕೂಟ ಮಹಾಜಗತ್ತು (ರಿ.) ಇದರ ಅಧ್ಯಕ್ಷರಾದ ಶ್ರೀ ಸತೀಶ ಹಂದೆ ಇವರುಗಳು ಭಾಗವಹಿಸಲಿರುವರು.

    ಅಂದು ನಡೆಯಲಿರುವ ಇಡೀ ದಿನದ ಅದ್ದೂರಿ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12-00ರಿಂದ ‘ಯಕ್ಷ-ಗಾನ-ವೈಭವ’ದಲ್ಲಿ ಭಾಗವತರಾಗಿ ಚಂದ್ರಕಾಂತ್ ರಾವ್ ಮೂಡುಬೆಳ್ವೆ, ಪ್ರಸನ್ನ ಭಟ್ ಬಾಳ್ಕ್ಲ್, ಲಂಬೋದರ ಹೆಗಡೆ ನಿಟ್ಟೂರು, ಮದ್ದಳೆಯಲ್ಲಿ ರಾಘವೇಂದ್ರ ಹೆಗಡೆ ಯಲ್ಲಾಪುರ, ಚಂಡೆಯಲ್ಲಿ ಶಿವಾನಂದ ಕೋಟ, ಸುದೀಪ್ ಉರಾಳ ಭಾಗವಹಿಸಲಿದ್ದಾರೆ. ನಂತರ ಸಂಜೆ 7-30ರಿಂದ ಬೆಂಗಳೂರಿನ ಪ್ರಸಿದ್ಧ ತಂಡವಾದ ‘ಯಕ್ಷದೇಗುಲ’ ತಂಡದವರಿಂದ ‘ಪಾಂಚಜನ್ಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಲಾವಿದರಾಗಿ ರಾಘವೇಂದ್ರ ಮಯ್ಯ ಹಾಲಾಡಿ, ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಶಿವಾನಂದ ಕೋಟ, ಜನಾರ್ದನ ಆಚಾರ್, ತಮ್ಮಣ್ಣ ಗಾಂವ್ಕರ್, ಆದಿತ್ಯ ಭಟ್, ದಿನೇಶ ಕನ್ನಾರ್, ಸ್ಫೂರ್ತಿ ಭಟ್, ಜಯರಾಮ ಕೊಠಾರಿ, ಉದಯ ಭೋವಿ, ರಾಜು ಪೂಜಾರಿ ಇನ್ನೀತರರು ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮದ ನಿರೂಪಣೆ ಉಪನ್ಯಾಸಕ ರಾಘವೇಂದ್ರ ತುಂಗರವರು ಮಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಜನಪ್ರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
    Next Article ರಕ್ಷಿದಿಯಲ್ಲಿ ಪ್ರಾಕೃತಿಕ ‘ರಂಗ ಶಿಬಿರ’ | ಮೇ 1ರಿಂದ 15ರವರೆಗೆ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.