Subscribe to Updates

    Get the latest creative news from FooBar about art, design and business.

    What's Hot

    ಕಲ್ಲಹಳ್ಳಿಯ ‘ಸುಮ್ಮನೆ’ಯಲ್ಲಿ ‘ಗಣೇಶ ದರ್ಶನ’ | ಅಕ್ಟೋಬರ್ 20

    October 18, 2025

    ವಿಶ್ವಶಾಂತಿ ಸೇವಾ ಟ್ರಸ್ಟ್ ವತಿಯಿಂದ ಮೂವರು ಸಾಧಕರಿಗೆ ‘ನಮ್ಮನೆ ಪ್ರಶಸ್ತಿ’ ಪ್ರಕಟ

    October 18, 2025

    ಆಳ್ವಾಸ್ ಕಾಲೇಜಿನಲ್ಲಿ ಡಾ. ಎಸ್.ಎಲ್. ಭೈರಪ್ಪರವರಿಗೆ ‘ನುಡಿನಮನ’ ಕಾರ್ಯಕ್ರಮ

    October 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ | ಫೆಬ್ರವರಿ 11
    Yakshagana

    ವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ | ಫೆಬ್ರವರಿ 11

    February 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನ ಕಲಾವಿದ, ಯಕ್ಷಗುರು ವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ವು ದಿನಾಂಕ 11-02-2024ರಂದು ಬೆಳಿಗ್ಗೆ 9 ಗಂಟೆಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

    ಅಂದು ಬೆಳಗ್ಗೆ 9ರಿಂದ ಪೊರ್ಕೋಡಿಯ ಶ್ರೀ ಸೋಮನಾಥೇಶ್ವರ ಯಕ್ಷನಿಧಿ ತಂಡದಿಂದ ಯಕ್ಷಗಾನ ಬಯಲಾಟ ‘ಶ್ರೀ ಮಾತೇ ಭದ್ರಕಾಳಿ’, 11ರಿಂದ ಕೊಮೆ ತೆಕ್ಕಟ್ಟೆಯ ಯಶಸ್ವಿ ಕಲಾವೃಂದ ಮಕ್ಕಳ ಮೇಳದಿಂದ ‘ಕೃಷ್ಣಾರ್ಜುನ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 12ರಿಂದ ಕದ್ರಿಯ ಯಕ್ಷ ಮಂಜುಳಾ ಮಹಿಳಾ ಯಕ್ಷಗಾನ ತಾಳಮದ್ದಳೆ ಬಳಗದಿಂದ ‘ಮೋಕ್ಷ ಸಂಗ್ರಾಮ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 1ರಿಂದ ರಥಬೀದಿಯ ನವಭಾರತ ಯಕ್ಷಗಾನ ಅಕಾಡೆಮಿಯಿಂದ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 2.30ರಿಂದ ಅತಿಥಿ ಕಲಾವಿದರು ಹಾಗೂ ಸರಯೂ ಯಕ್ಷವೃಂದ ಕಲಾವಿದರ ಕೂಡುವಿಕೆಯಿಂದ ರವಿ ಅಲೆವೂರಾಯ ವರ್ಕಾಡಿ ವಿರಚಿತ ‘ಇಳಾರಜತ’ ಯಕ್ಷಗಾನ ಬಯಲಾಟ ನಡೆಯಲಿರುವುದು.

    ಸಂಜೆ 5.30ರಿಂದ ಅಲೆವೂರಾಯಾಭಿನಂದನಮ್ 60 ಸಭಾ ಕಾರ್ಯಕ್ರಮ ನಡೆಯಲಿದ್ದು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಗಳವರು ಆಶೀರ್ವಚನ ನೀಡಲಿದ್ದಾರೆ. ಕಲಾ ಪೋಷಕ ಶ್ರೀ ಟಿ.ಆರ್. ಶ್ಯಾಮ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾಂತ ಕಾರ್ಯಕಾರಿಣಿ ಸದಸ್ಯ ಡಾ. ಪಿ.ವಿ. ಶೆಣೈ, ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿ, ಕಲಾ ಸಂಘಟಕ ಶಿವಾನಂದ ಹೆಗಡೆ ಕೆರೆಮನೆ ಭಾಗವಹಿಸುವರು.

    ರವಿ ಅಲೆವೂರಾಯ ಇವರು ಸ್ತ್ರೀ ಪಾತ್ರಧಾರಿಯಾಗಿ ಪ್ರಸಿದ್ಧಿ ಗಳಿಸಿದ್ದು, 8 ಭಾಷೆಗಳಲ್ಲಿ ಯಕ್ಷಗಾನದಲ್ಲಿ ಭಾಗವಹಿಸಿದ್ದಾರೆ. 130 ಏಕವ್ಯಕ್ತಿ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ‘ಸರಯೂ’ ಸಹಿತ ಅನೇಕ ಯಕ್ಷಗಾನ ತಂಡಗಳಿಗೆ ಗುರುವಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ನಾಟ್ಯಾರಾಧನಾ ತ್ರಿಂಶೋತ್ಸವ – 1994-2024’ | 10 ಫೆಬ್ರವರಿ
    Next Article ಕಾಸರಗೋಡಿನಲ್ಲಿ ‘ಸಾಹಿತ್ಯ ಹಬ್ಬ 2024’ ನೋಂದಾವಣೆಗೆ ಕೊನೆಯ ದಿನಾಂಕ ಮಾರ್ಚ್ 5
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಮಾಧವ ಕೊಳತ್ತಮಜಲು ಇವರಿಗೆ ‘ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ’

    October 18, 2025

    ಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’

    October 17, 2025

    ಖ್ಯಾತ ತೆಂಕುತಿಟ್ಟು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

    October 16, 2025

    ಶ್ರೀ ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 19

    October 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.