Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ನಲ್ಲಿ ಯಕ್ಷಗಾನ ಪ್ರದರ್ಶನ | ನವೆಂಬರ್ 22

    November 21, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ | ನವೆಂಬರ್ 23ರಿಂದ 29

    November 21, 2025

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಸಾಧಕ ಪಂಡಿತ್ ಉಪೇಂದ್ರ ಭಟ್ ಅವರ 75 ನೇ ಜನ್ಮ ಸಂವತ್ಸರದ ಸನ್ಮಾನ ಪಂಚಸಪ್ತತಿ ಸಂಪನ್ನ
    Felicitation

    ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಸಾಧಕ ಪಂಡಿತ್ ಉಪೇಂದ್ರ ಭಟ್ ಅವರ 75 ನೇ ಜನ್ಮ ಸಂವತ್ಸರದ ಸನ್ಮಾನ ಪಂಚಸಪ್ತತಿ ಸಂಪನ್ನ

    May 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯೂತ್ ಆಫ್ ಜಿ. ಎಸ್. ಬಿ. ವಾಹಿನಿಯಿಂದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪರವಾಗಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಹಾನ್ ಸಾಧಕರಾದ ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ ಕಾರ್ಯಕ್ರಮವು ದಿನಾಂಕ 04-05-2024 ರಂದು ಟಿ. ವಿ. ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.
    ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪಂಡಿತ್ ಉಪೇಂದ್ರ ಭಟ್ ತಮ್ಮ ಗುರು ಭಾರತ್ ರತ್ನ ಭೀಮಸೇನ್ ಜೋಷಿಯವರು ತಮ್ಮ ಸಂಗೀತ ಬದುಕಿಗೆ ಹಾಕಿಕೊಟ್ಟ ಅಡಿಪಾಯವನ್ನು ಸ್ಮರಿಸಿ “ಯೂತ್ ಆಫ್ ಜಿ. ಎಸ್. ಬಿ. ವಾಹಿನಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ತಮ್ಮಂತಹ ಸರಸ್ವತಿ ಆರಾಧಕರನ್ನು ಗೌರವಿಸುತ್ತಿರುವುದು ನಿಜಕ್ಕೂ ಮಾದರಿಯಾಗಿದೆ.”‌ ಎಂದರು. ಪಂಡಿತ್ ಉಪೇಂದ್ರ ಭಟ್ ಅವರ ಸಾಧನೆಯ ಬಗ್ಗೆ ವಿದ್ವಾಂಸ ಪ್ರಭಾಕರ ಜೋಷಿ ಅಭಿನಂದನೆಯ ನುಡಿಗಳನ್ನಾಡಿದರು.
    ಸನ್ಮಾನ ಸ್ವೀಕರಿಸುವ ಪೂರ್ವಭಾವಿಯಾಗಿ ಪಂಡಿತ್ ಉಪೇಂದ್ರ ಭಟ್ ಅವರು ತಮ್ಮ ಜನಪ್ರಿಯ ಗೀತೆಗಳನ್ನು ಹಾಡಿ ನೆರೆದ ಅಸಂಖ್ಯಾತ ಸಂಗೀತಾಭಿಮಾನಿಗಳನ್ನು ರಂಜಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಖ್ಯಾತ ಪಿಟೀಲು ವಾದಕರಾದ ತೋನ್ಸೆ ರಂಗ ಪೈ ಪಿಟೀಲು ವಾದನ ಕಛೇರಿ ನಡೆಸಿಕೊಟ್ಟರು.
    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹ್ಯಾಂಗ್ಯೋ ಐಸ್ ಕ್ರೀಂನ ಪ್ರದೀಪ್ ಪೈ, ಎಕ್ಸಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರೋ. ನರೇಂದ್ರ ನಾಯಕ್, ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿ. ಎ. ಜಗನ್ನಾಥ್ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ರಂಗನಾಥ್ ಭಟ್, ಪಂಡಿತ್ ನರಸಿಂಹ ಆಚಾರ್ಯ, ಕಾಮತ್ ಕೇಟರರ್ಸ್ ಇದರ ಸುಧಾಕರ್ ಕಾಮತ್, ಮಿತ್ರವೃಂದ ಭಟ್, ದೀಪಾ ಪೈ, ತೋನ್ಸೆ ರಂಗ ಪೈ, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಕಿರಣ್ ಶೆಣೈ ಹಾಗೂ ಯೂತ್ ಆಫ್ ಜಿ. ಎಸ್. ಬಿ. ಸದಸ್ಯರು ಉಪಸ್ಥಿತರಿದ್ದರು. ವಿವಿಧ ಸಂಘಟನೆಯ ಪ್ರಮುಖರು ಪಂಡಿತ್ ಉಪೇಂದ್ರ ಭಟ್ ಅವರನ್ನು ಸನ್ಮಾನಿಸಿದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಎಡನೀರು ಕ್ಷೇತ್ರದಲ್ಲಿ ಕೃತಿಗಳ ಅನಾವರಣ | ಮೇ 19
    Next Article ಕನ್ನಡ ಸಾಹಿತ್ಯ ಪರಿಷತ್ತಿನ ‘ಚಾವುಂಡ ರಾಯ ದತ್ತಿ’ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಪ್ರೀತಿ ಶುಭಚಂದ್ರ ಆಯ್ಕೆ
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ | ನವೆಂಬರ್ 23ರಿಂದ 29

    November 21, 2025

    ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ‘ಮನರಂಜನೆಯ ಮಹಾ ಸಂಗಮ’ | ನವೆಂಬರ್ 22

    November 21, 2025

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025

    ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 23

    November 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.