Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಕ.ಸಾ.ಪ.ದಿಂದ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರಿಗೆ ಗೌರವ ಅಭಿನಂದನೆ
    Felicitation

    ಉಡುಪಿಯ ಕ.ಸಾ.ಪ.ದಿಂದ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರಿಗೆ ಗೌರವ ಅಭಿನಂದನೆ

    March 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಅಂಬಲಪಾಡಿಯ ನಿವಾಸಿ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರು ಕನ್ನಡ ಮತ್ತು ತುಳು ಬರಹಗಾರ್ತಿಯಾಗಿ ಪ್ರಸಿದ್ಧಿ ಪಡೆದವರು. ಬಿ.ಎಡ್. ಹಾಗೂ ಪತ್ರಿಕೋದ್ಯಮದಲ್ಲಿ ಡಿಪ್ಲೋಮೋ ಪದವಿ ಪಡೆದಿರುವ ವಸಂತಿ ಶೆಟ್ಟಿಯವರು ಸುಮಾರು 15ಕ್ಕೂ ಹೆಚ್ಚು ಕನ್ನಡ ಮತ್ತು ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿರುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿದ್ದು ಪ್ರಸ್ತುತ ಸ್ವಯಂ ನಿವೃತ್ತಿ ಪಡೆದಿದ್ದು, ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ಸುಮಾರು 30 ವರ್ಷಗಳಿಂದ ಕಲಾವಿದೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಾಧಿಕಾರದ ಉಪಾಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕವಿ ಸಮ್ಮೇಳನಗಳಲ್ಲಿ ಇವರು ಭಾಗವಹಿಸಿರುತ್ತಾರೆ. ಉಡುಪಿ ನಗರಸಭೆಯಲ್ಲಿ ಮೂರು ಬಾರಿ ಚುನಾಯಿತ ಪ್ರತಿನಿಧಿಯಾಗಿ ಆಯ್ಕೆಗೊಂಡಿರುತ್ತಾರೆ.

    ಇವರು ಕನ್ನಡ ನಾಡು ನುಡಿ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಉಡುಪಿ ಜಿಲ್ಲಾ ‘ರಾಜ್ಯೋತ್ಸವ ಪ್ರಶಸ್ತಿ’, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ದತ್ತಿ ಬಹುಮಾನ, ಮುಂಬೈಯ ಸುಶೀಲಾ ಶೆಟ್ಟಿ ಸ್ಮಾರಕ ಪ್ರಶಸ್ತಿ, ಲಯನ್ಸ್, ರೋಟರಿ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಹಲವು ಬಾರಿ ಗೌರವ ಸನ್ಮಾನಗಳನ್ನು ಪಡೆದುಕೊಂಡಿರುತ್ತಾರೆ. ವಸಂತಿ ಶೆಟ್ಟಿ ಬ್ರಹ್ಮಾವರ ಇವರ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 08 ಮಾರ್ಚ್ 2025ರಂದು ಸಂಜೆ 3-30 ಗಂಟೆಗೆ ಉಡುಪಿ ಅಂಬಲಪಾಡಿಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬಹಳ ಪ್ರೀತಿ ಗೌರವದಿಂದ ಅಭಿನಂದಿಸುತಿದ್ದೇವೆ.

    felicitation Literature
    Share. Facebook Twitter Pinterest LinkedIn Tumblr WhatsApp Email
    Previous Articleಮಹಿಳಾ ಸಾಧಕಿಯರು | ಅಪ್ರತಿಮ ಪ್ರೌಢಿಮೆಯ ತಬಲಾ ವಾದಕಿ ಶ್ರೀಮತಿ ಶ್ರೀಲತಾ ದೇವದತ್ತ ಪ್ರಭು
    Next Article ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಸಿ.ಎನ್. ಜಯಲಕ್ಷ್ಮೀದೇವಿ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.