Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ವಿಶೇಷ ಲೇಖನ – ಗ್ರಂಥಾಲಯ ವಿಜ್ಞಾನದ ಸಾಧಕ ಡಾ. ಎಸ್. ಆರ್. ಗುಂಜಾಳ

    June 25, 2025

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯ ಕಸಾಪದಿಂದ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರಿಗೆ ಸನ್ಮಾನ 
    Literature

    ಸುಳ್ಯ ಕಸಾಪದಿಂದ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರಿಗೆ ಸನ್ಮಾನ 

    September 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ‘ಗುರುಗಳೆಡೆ ನಮ್ಮ ನಡೆ’ ಕಾರ್ಯಕ್ರಮದಡಿ ತಾಲೂಕಿನ ಹಿರಿಯ ಶಿಕ್ಷಕ ಹಾಗೂ ಸಾಹಿತಿಗಳಾದ ಶ್ರೀ ಸುಬ್ರಾಯ ಚೊಕ್ಕಾಡಿ ಮತ್ತು ಶ್ರೀ ಲಕ್ಷ್ಮೀಶ ಚೊಕ್ಕಾಡಿ ಅವರನ್ನು ದಿನಾಂಕ 05-09-2023ರಂದು ಅವರ ನಿವಾಸಕ್ಕೆ ತೆರಳಿ ಗೌರವಿಸಲಾಯಿತು.

    ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯ ಸಾಹಿತಿಗಳನ್ನು ಶಿಕ್ಷಕರ ದಿನಾಚರಣೆಯಂದು ಗೌರವಿಸುವ ವಿನೂತನ ಸಂಪ್ರದಾಯವನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿದ್ದು, ಚೊಕ್ಕಾಡಿಯಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ. ಸಂಜೀವ ಕುದ್ಪಾಜೆ ಅಭಿನಂದನಾ ನುಡಿಗಳನ್ನಾಡಿದರು.

    ಸುಬ್ರಾಯ ಚೊಕ್ಕಾಡಿಯವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಿ 25 ವರ್ಷಗಳಾಗಿದ್ದು, 85ರ ಹರೆಯದಲ್ಲಿ ಇಂದಿಗೂ ಸಾಹಿತ್ಯದ ಕಾಯಕ ನಡೆಸುತ್ತಿದ್ದಾರೆ. ಅವರ ಸಹೋದರ ಲಕ್ಷ್ಮೀಶ ಚೊಕ್ಕಾಡಿ, 10 ವರ್ಷಗಳ ಹಿಂದೆ ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಿದ್ದು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಕೂಡ ವಹಿಸಿದ್ದರು. ಇವರು ಸಹಸ್ರಾರು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಿದ್ದಲ್ಲದೆ, ಈಗಲೂ ಸಾಹಿತ್ಯ ಕೃಷಿ ನಡೆಸುತ್ತಿದ್ದಾರೆ.

    ಕಸಾಪ ಪದಾಧಿಕಾರಿಗಳಾದ ಕೇಶವ ಸಿ.ಎ., ಲತಾಶ್ರೀ ಸುಪ್ರೀತ್ ಮೋಂಟಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದಗೈದರು.

    Share. Facebook Twitter Pinterest LinkedIn Tumblr WhatsApp Email
    Previous Articleದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಬಂಟರ ಸಂಘಗಳ ‘ಬಂಟ ಕಲಾ ಸಂಭ್ರಮ’
    Next Article ಕ.ಸಾ.ಪ. ಬಂಟ್ವಾಳ ತಾಲೂಕು ಘಟಕದಿಂದ ‘ಶ್ರೀ ಏರ್ಯ-ಒಂದು ನೆನಪು’ ಕಾವ್ಯ ವಾಚನ-ವ್ಯಾಖ್ಯಾನ 
    roovari

    Add Comment Cancel Reply


    Related Posts

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ಹಿರಿಯ ಸಾಹಿತಿ ಪ್ರಭಾ ಮಟಮಾರಿ ನಿಧನ

    June 24, 2025

    ಕ.ಸಾ.ಪ.ದ ಬೆಳ್ತಂಗಡಿ ತಾಲೂಕು ಘಟಕದಿಂದ ಉಪನ್ಯಾಸಮಾಲೆ | ಜೂನ್ 26

    June 24, 2025

    ಮಂಗಳೂರಿನಲ್ಲಿ ಉದ್ಘಾಟನೆಗೊಂಡ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ’

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.