Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ‘ಪ್ರಥಮ ವಾರ್ಷಿಕೋತ್ಸವ’
    Felicitation

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ‘ಪ್ರಥಮ ವಾರ್ಷಿಕೋತ್ಸವ’

    May 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಿ.ಸಿ. ರೋಡ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಬಂಟ್ವಾಳ ತಾಲೂಕು ಘಟಕದ ಪ್ರಥಮ ವಾರ್ಷಿಕೋತ್ಸವು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ 07-05-2024ರಂದು ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಬಿ.ಸಿ. ರೋಡ್, ರಂಗಭೂಮಿ ಕಲಾವಿದ ರಮಾ ಬಿ.ಸಿ. ರೋಡ್, ನಾಟಿವೈದ್ಯೆ ಶ್ರೀಮತಿ ಮೀನಾಕ್ಷಿ ಆಚಾರ್ಯ ಇವರನ್ನು ಗೌರವ ಧನದೊಂದಿಗೆ ಸಂಮಾನಿಸಲಾಯಿತು.

    ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವರಾದ ಬಿ. ರಮಾನಾಥ ರೈ ಮುಖ್ಯ ಅಭ್ಯಾಗತರಾಗಿದ್ದರು. ಬಂಟ್ವಾಳ ಘಟಕದ ವತಿಯಿಂದ ಪಟ್ಲ ಫೌಂಡೇಶನ್’ನ ಕೇಂದ್ರೀಯ ಸಮಿತಿಗೆ ರೂ. 50,000/- ದೇಣಿಗೆಯಾಗಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಒಂದು ಮನೆ ನಿರ್ಮಾಣದ ವೆಚ್ಚವನ್ನು ನೀಡುವುದಾಗಿ ಘೋಷಿಸಿದರು. ಘಟಕದ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಪ್ರೊ. ಪವನ್ ಕಿರಣ್ ಕೆರೆ ವಿರಚಿತ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೇಕಲ ಗೋಕುಲಂ ಗೋಶಾಲೆಯ ಪರಂಪರಾ ವಿದ್ಯಾಪೀಠದಲ್ಲಿ ನೃತ್ಯೋತ್ಸವ | ಮೇ 8ರಿಂದ 16
    Next Article ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್ ಇವರು ‘ಸರಸ್ವತಿ ಪ್ರಭಾ ಪುರಸ್ಕಾರ -2024’ಕ್ಕೆ ಆಯ್ಕೆ
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    ಕಾಂತಾವರ ಕನ್ನಡ ಭವನದಲ್ಲಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.