Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ‘ಓಣಂ ಸಂಧ್ಯಾ’ದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ಐದು ಕೃತಿಗಳ ಅನಾವರಣ | ಆಗಸ್ಟ್ 26ರಂದು
    Book Release

    ಕಾಸರಗೋಡಿನಲ್ಲಿ ‘ಓಣಂ ಸಂಧ್ಯಾ’ದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ಐದು ಕೃತಿಗಳ ಅನಾವರಣ | ಆಗಸ್ಟ್ 26ರಂದು

    August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ರಂಗಚಿನ್ನಾರಿ ಕಾಸರಗೋಡು (ರಿ) ಇದರ ಮಹಿಳಾ ಘಟಕ ನಾರಿಚಿನ್ನಾರಿಯ 8ನೇ ಸರಣಿ ಕಾರ್ಯಕ್ರಮ ‘ಓಣಂ ಸಂಧ್ಯಾ’ವು ಕಾಸರಗೋಡಿನ ‘ಪದ್ಮಗಿರಿ ಕಲಾ ಕುಟೀರ’ದಲ್ಲಿ ದಿನಾಂಕ 26-08-2023 ಶನಿವಾರದಂದು ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಿಚಿನ್ನಾರಿಯ ಗೌರವಧ್ಯಕ್ಷರು ಹಾಗೂ ಖ್ಯಾತ ಲೆಕ್ಕ ಪರಿಶೋಧಕರಾದ ಶ್ರೀಮತಿ ತಾರಾ ಜಗದೀಶ್ ಇವರು ವಹಿಸಲಿದ್ದು, ಕಾಸರಗೋಡಿನ ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜ ಸೇವಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮೀ ಇವರು ಉದ್ಘಾಟಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಮತ್ತು ನಾಟ್ಯ ಗುರುಗಳಾದ ವಿದುಷಿ ಶಶಿಕಲಾ ಟೀಚರ್ ಇವರಿಗೆ ಗೌರವಾರ್ಪಣೆ ಮಾಡಲಾಗುವುದು. ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇವರ ಐದು ಕೃತಿಗಳಾದ ಏಕತಾರಿ ಸಂಚಾರಿ (ಕವನ ಸಂಕಲನ), ಕೊಕ್ಕೊ ಕೋಕೋ (ಮಕ್ಕಳ ನಾಟಕ), ಶಿವರಾಮ ಕಾರಂತರ ಕನ್ನಡ ಪ್ರಜ್ಞೆ (ಸಂಪಾದಿತ), ಕನಕದಾಸೆರ್ನ ರಾಮಧಾನ್ಯ ಚರಿತೆ (ಅನುವಾದ) ಮತ್ತು ಮೊಗೇರಿ ಗೋಪಾಲಕೃಷ್ಣ ಅಡಿಗ (ವಾಚಿಕೆ) ಅನಾವರಣಗೊಳ್ಳಲಿವೆ.

    ಈ ಐದು ಕೃತಿಗಳನ್ನು ಅನಾವರಣಗೊಳಿಸುವವರು ವಿಜಯಲಕ್ಷ್ಮೀ ಶ್ಯಾನ್ ಭೋಗ್, ಸರ್ವಮಂಗಳ ಜಯ್ ಪುಣಿಚಿತ್ತಾಯ, ದಿವ್ಯಾ ಗಟ್ಟಿ ಪರಕ್ಕಿಲ, ಸ್ನೇಹಲತಾ ದಿವಾಕರ್ ಮತ್ತು ಡಾ.ಮಹೇಶ್ವರಿಯವರು ಹಾಗೂ ಲಕ್ಷ್ಮೀ ಕೆ. ಇವರು ಕೃತಿ ವಿಮರ್ಶೆ ಮಾಡಲಿದ್ದಾರೆ. ಇವರೆಲ್ಲರೂ ಗಡಿನಾಡಿನ ಮಹತ್ವದ ಮಹಿಳಾ ಬರಹಗಾರರು. ಪ್ರಕೃತಿ ಸ್ತ್ರೀಗೇ ನೀಡಿರುವ ಬಸಿರು, ಬಾಣಂತನ, ಮಕ್ಕಳ ಮತ್ತು ಮೊಮ್ಮಕ್ಕಳ ಲಾಲನೆ ಪಾಲನೆಯ ಜತೆಜತೆಗೇ ಮನೆ – ಕೃಷಿ, ಮನೆಯೊಳಗಿನ ವೃತ್ತಿ ಹಾಗೂ ಮನೆಯ ಹೊರಗಿನ ವೃತ್ತಿ ಉದ್ಯೋಗ ಹೀಗೆ ಎಲ್ಲವನ್ನೂ ನನ್ನ ಮನೆ, ನನ್ನ ಸಂಗಾತಿ, ನನ್ನ ಮಕ್ಕಳು, ನನ್ನ ಕಛೇರಿ ಎಂಬ ಮಮತೆಯಿಂದಲೇ ಮಾಡುತ್ತಾರೆ. ಇದರ ನಡುವೆ ಬರಹ, ನೃತ್ಯ, ಸಂಗೀತ, ಚಿತ್ರಕಲೆ, ನಾಟಕ ಹೀಗೆ ತನ್ನ ಕಲಾತ್ಮಕ ವ್ಯಕ್ತಿತ್ವವನ್ನು ಪ್ರಕಟಿಸುವ ಸ್ತ್ರೀಯರ ಆತ್ಮಶಕ್ತಿ ಅಸಾಧಾರಣವಾದುದು. ಆದುದರಿಂದ ತಮ್ಮ ಕೆಲಸಗಳ ನಡುವೆಯೇ ಬಿಡುವು ಮಾಡಿಕೊಂಡ ಇಂತಹ ಅಗಣಿತ ಸ್ತ್ರೀಶಕ್ತಿಗಳು ಒಟ್ಟು ಗೂಡಿ ವಿಭಿನ್ನ-ವಿಶಿಷ್ಟ ಕಾರ್ಯಕ್ರಮ ಮಾಡುತ್ತಿರುವುದು ವಿಶೇಷ ಸಂಗತಿ.

    ಇದೇ ಸಂದರ್ಭದಲ್ಲಿ ನಾರಿಚಿನ್ನಾರಿಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಮನೋಜ್ಞವಾಗಿ ಪ್ರದರ್ಶನಗೊಂಡ ‘ಕೃಷ್ಣ ಗಾರುಡಿ’ ಮತ್ತು ಸನ್ಮಾನ 
    Next Article ಮಂಡ್ಯದಲ್ಲಿ ‘ಕುಂದಾನಗರಿ’ಯ ‘ಪುಸ್ತಕ ಪ್ರೀತಿ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.