Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡುಬಿದಿರೆಯಲ್ಲಿ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ
    Folk

    ಮೂಡುಬಿದಿರೆಯಲ್ಲಿ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ದ.ಕ. ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಆಶ್ರಯದಲ್ಲಿ 3 ದಿನಗಳ ಕಾಲ ನಡೆಯುವ ‘ಮೈಸೂರು ವಿಭಾಗ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರ’ ದಿನಾಂಕ 02-11-2023 ರ ಗುರುವಾರದಂದು ಉದ್ಘಾಟನೆಗೊಂಡಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಮೈಸೂರು ವಿಭಾಗದ ಆರೋಗ್ಯ, ಕುಟುಂಬ ಕಲ್ಯಾಣ ಸೇವೆ ವಿಭಾಗೀಯ ಜಂಟಿ ನಿರ್ದೇಶಕಿ ಡಾ| ರಾಜೇಶ್ವರಿ ದೇವಿ “ಆಧುನಿಕತೆಯ ಬಿರುಗಾಳಿಯಲ್ಲಿ ಜಾನಪದ ಕಲೆಗಳು ಎಲ್ಲೋ ಸಾಗುತ್ತಿವೆ. ಆದರೆ ದ.ಕ., ಉಡುಪಿ ಜಿಲ್ಲೆಯ ಮಣ್ಣಿನ ಗಟ್ಟಿತನದಿಂದಾಗಿ 5 ಸಾವಿರ ವರ್ಷಗಳಿಂದಲೂ ಇಲ್ಲಿಯ ಜಾನಪದ ಕಲೆಗಳು ಜೀವಂತವಾಗಿವೆ. ಸಿನೆಮಾದ ಮೂಲಕ ಜಾನಪದ ಕಲೆಗಳನ್ನು ಜೀವಂತವಾಗಿ ಉಳಿಸುವ ಕೆಲಸ ನಡೆಯುತ್ತಿದೆ” ಎಂದು ಹೇಳಿದರು.
    ವಿದ್ಯಾಗಿರಿಯಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ವಹಿಸಿದ್ದರು. ಬೆಂಗಳೂರು ಆರೋಗ್ಯ ಸೌಧ ಆ.ಕು.ಕ.ಸೇವೆಗಳ ಉಪ ನಿರ್ದೇಶಕ ಡಾ.ಧನಂಜಯ ಟಿ.ಎನ್., ಮೈಸೂರು ವಿಭಾಗೀಯ ಉಪನಿರ್ದೇಶಕಿ ಡಾ. ಮಲ್ಲಿಕಾ, ದ.ಕ.ಜಿಲ್ಲಾ ತರಬೇತಿ ಸಂಸ್ಥೆ ಸುರತ್ಕಲ್‌ನ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಂ. ಆರ್. ದುರ್ಗಾಪ್ರಸಾದ್ ಹಾಗೂ ಬೆಂಗಳೂರು ಆ. ಸೌಧದ ಆ. ಶಿಕ್ಷಣಾಧಿಕಾರಿ ಜ್ಞಾನೇಶ್ವರ್ ಅತಿಥಿಗಳಾಗಿ ಭಾಗವಹಿಸಿದ್ದರು.
    ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಪ್ರಸಾದ್, ನಾಗೇಂದ್ರ ಪ್ರಸಾದ್, ಡಾ.ದೀಪಿಕಾ ಉಪಸ್ಥಿತರಿದ್ದರು. ಜಿ.ಆ. ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿ, ಮೈಸೂರು ವಿಭಾಗೀಯ ಆ. ಶಿಕ್ಷಣಾಧಿಕಾರಿ ಪ್ರಕಾಶ್ ಪ್ರಸ್ತಾವನೆಗೈದು, ಆಕಾಶವಾಣಿ ಉದ್ಘೋಷಕಿ ಮಲ್ಲಿಕಾ ಶೆಟ್ಟಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಸಿಂಫನಿ’ – ಶಾಂತಿ ಸೌಹಾರ್ದಕ್ಕಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ
    Next Article ಜನವರಿಯಲ್ಲಿ ನಾರೀ ಶಕ್ತಿ ಪ್ರಸಂಗ ಲೋಕಾರ್ಪಣೆ
    roovari

    Add Comment Cancel Reply


    Related Posts

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಧಾರವಾಡ ರಂಗಾಯಣದಲ್ಲಿ ‘ಚಿಣ್ಣರಮೇಳ 2025’ ಸಮಾರೋಪ ಸಮಾರಂಭ | ಮೇ 03ರಿಂದ 05

    May 2, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಮೇ 05

    April 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.