ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ದಿನಾಂಕ 09 ಮೇ 2026ರಂದು ‘ಸುಧನ್ವ ಮೋಕ್ಷ’ ಎಂಬ ಆಖ್ಯಾನದೊಂದಿಗೆ ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಇರ್ದೆ, ಆನಂದ ಸವಣೂರು, ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ತಾರಾನಾಥ ಸವಣೂರು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ (ಸುಧನ್ವ), ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ) ಸಹಕರಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಗೌರವ ಕಾರ್ಯದರ್ಶಿ ರಂಗನಾಥ ರಾವ್ ಸಹಕರಿಸಿದರು.
