ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ಕೂಟ ದಿನಾಂಕ 14 ಫೆಬ್ರವರಿ 2026ರ ಶನಿವಾರ ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥಿಸುಬ್ಬ ವಿರಚಿತ ‘ಭರತ ಆಗಮನ’ ಪ್ರಸಂಗದೊಂದಿಗೆ ನಡೆಯಿತು.
ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀರಾಮ (ಗುಂಡ್ಯಡ್ಕ ಈಶ್ವರ ಭಟ್), ಭರತ (ಶುಭ ಅಡಿಗ), ವಶಿಷ್ಠ (ಹರಿಣಾಕ್ಷಿ ಜೆ. ಶೆಟ್ಟಿ), ಲಕ್ಷ್ಮಣ (ಪ್ರೇಮಲತಾ ಟಿ. ರಾವ್) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ಭಾಸ್ಕರ್ ಬಾರ್ಯ ವಂದಿಸಿದರು. ಶ್ರೀ ಹರ್ಷ ಪುಣಚ ಪ್ರಾಯೋಜಿಸಿದ್ದರು. ಕಿಶೋರಿ ದುಗ್ಗಪ್ಪ ನಡುಗಲ್ಲು ಹಾಗೂ ಭಾರತೀ ರೈ ಅರಿಯಡ್ಕ ಸಹಕರಿಸಿದರು.
