Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ
    Literature

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸವು ದಿನಾಂಕ 12 ಮೇ 2025ರಂದು ಮಂಗಳೂರಿನ ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿತು.

    ಈ ಕಾರ್ಯಕ್ರಮದಲ್ಲಿ ‘ವಿವೇಕಾನಂದರ ಕನಸಿನ ಭಾರತ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕರಾದ ಶ್ರೀ ಪ್ರಶಾಂತ್ ನೀಲಾವರ “ಸ್ವಾಮಿ ವಿವೇಕಾನಂದರು ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಹಲವು ಕನಸುಗಳನ್ನು ಕಂಡಿದ್ದರು. ಅವರು ಮೌಲ್ಯಾಧಾರಿತ, ನೈತಿಕತೆ ಹಾಗೂ ಸಾಂಸ್ಕೃತಿಕ ಪರಂಪರೆಗಳಲ್ಲಿ ಬೆಳೆದು ಬಂದ ದೇಶವನ್ನೇ ತಮ್ಮ ಕನಸಿನ ಭಾರತವೆಂದು ಪರಿಗಣಿಸಿದ್ದರು. ಅವರ ದೃಷ್ಟಿಯಲ್ಲಿ ಭಾರತವೆಂದರೆ ಧರ್ಮ, ಆತ್ಮಜ್ಞಾನ, ತಪಸ್ಸು ಮತ್ತು ಮಾನವಸೇವೆಗೂ ಆದ್ಯತೆ ನೀಡುವ ದೇಶ. ಅವರು ಬಡವರು, ಶೋಷಿತರು ಮತ್ತು ದುರ್ಬಲರನ್ನು ಸಹಾನುಭೂತಿಯೊಂದಿಗೆ ನೋಡಬೇಕು ಮತ್ತು ಅವರ ಸೇವೆಯನ್ನು ದೇವರ ಸೇವೆಯೆಂದು ಪರಿಗಣಿಸಬೇಕು ಎಂದು ಸಾರಿದರು. ವಿವೇಕಾನಂದರು ಯುವಕರನ್ನು ರಾಷ್ಟ್ರ ನಿರ್ಮಾಣದ ಶಕ್ತಿ ಎಂದು ಭಾವಿಸಿದ್ದರು. ಯುವಜನತೆಗೆ ಶಕ್ತಿಯುತ, ಆತ್ಮವಿಶ್ವಾಸದಿಂದ ಕೂಡಿದ, ಜವಾಬ್ದಾರಿಯುತ ಜೀವಿಗಳಾಗಬೇಕು ಎಂದು ಉಪದೇಶಿಸಿದರು. ಅವರು ಶಿಕ್ಷಣವನ್ನು ದೇಶದ ಪ್ರಗತಿಯ ಮೂಲ ಅಸ್ತ್ರವೆಂದು ಭಾವಿಸಿದರು. ಅಕ್ಷರಜ್ಞಾನಕ್ಕಿಂತ ಬದುಕಿಗೆ ಬೇಕಾದ ಮೌಲ್ಯಗಳ ಶಿಕ್ಷಣ ಮುಖ್ಯವೆಂದು ಒತ್ತಾಯಿಸಿದರು. ಧರ್ಮ, ಜಾತಿ, ಭಾಷೆ, ಲಿಂಗದ ಹೆಸರಿನಲ್ಲಿ ಬಿಟ್ಟು ಎಲ್ಲರೂ ಸಮಾನರಾಗಿ ಬೆಳೆವ ಭಾರತ ಅವರ ಕನಸು. ಇಂದಿನ ಯುವಕರು ವಿವೇಕಾನಂದರ ಈ ತತ್ವಗಳನ್ನು ಅಳವಡಿಸಿಕೊಂಡರೆ, ಅವರ ಕನಸಿನ ಭಾರತವನ್ನು ನಿಜವಾಗಿ ರೂಪಿಸಬಹುದಾಗಿದೆ” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ., ಮಾಜಿ ಸೈನಿಕರಾದ ಬೆಳ್ಳಾಲ ಗೋಪಿನಾಥ್ ರಾವ್‌ ಹಾಗೂ ಉಪನ್ಯಾಸಕರು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಲೋಕೇಶನಾಥ್ ಬಿ. ವಂದಿಸಿ, ವಿದ್ಯಾರ್ಥಿನಿಯಾದ ನವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ
    Next Article ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15
    roovari

    Add Comment Cancel Reply


    Related Posts

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಯುವ ಸಂಗೀತೋತ್ಸವ 2025’ | ಮೇ 25

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications