Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗಾನ ನೃತ್ಯ ಅಕಾಡೆಮಿ ಮಂಗಳೂರು ವತಿಯಿಂದ ಸುಳ್ಯದಲ್ಲಿ ‘ಆರೋಹಣ 2023’
    Bharathanatya

    ಗಾನ ನೃತ್ಯ ಅಕಾಡೆಮಿ ಮಂಗಳೂರು ವತಿಯಿಂದ ಸುಳ್ಯದಲ್ಲಿ ‘ಆರೋಹಣ 2023’

    June 29, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಗಾನ ನೃತ್ಯ ಅಕಾಡೆಮಿ ಮಂಗಳೂರು ಇದರ ಸುಳ್ಯ ಶಾಖೆಯ ವಾರ್ಷಿಕ ನೃತ್ಯೋತ್ಸವ ‘ಆರೋಹಣ 2023’ ಕಾರ್ಯಕ್ರಮವು ಸುಳ್ಯದ ರಂಗ ಮನೆಯಲ್ಲಿ ಮೇ 27 ಶನಿವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿಯ ಕಿರಿಯ ಹಿರಿಯ ವಿದ್ಯಾರ್ಥಿನಿಯರು ನೃತ್ಯ ಪ್ರಸ್ತುತಿ ಜೊತೆಗೆ ಮಂಗಳೂರು ಶಾಖೆಯ ಮಾಧ್ಯಮಿಕ ಹಂತದ ವಿದ್ಯಾರ್ಥಿನಿಯರಿಂದ ನೃತ್ಯ ಪ್ರದರ್ಶನವು ನಡೆಯಿತು.

    ಸುಳ್ಯದಂತಹ ಪ್ರದೇಶದಲ್ಲಿ ಭರತನಾಟ್ಯದಂತಹ ಕಲೆಯನ್ನು ಕಲಿಯುತ್ತಿರುವ ವಿದ್ಯಾರ್ಥಿನಿಯರಿಗೆ ವೇದಿಕೆಯೇರಲು ಅವಕಾಶ ನೀಡಿದ್ದು ಶ್ಲಾಘನೀಯ. ಪ್ರಥಮ ಬಾರಿ ವೇದಿಕೆ ಏರಿದ ಪುಟಾಣಿ ಕಲಾವಿದೆಯರ ಜೊತೆಗೆ ಮಾಧ್ಯಮಿಕ ಹಂತದ ಕಲಾವಿದೆಯರ ನೃತ್ಯ ಕಾರ್ಯಕ್ರಮವು ಅತ್ಯಂತ ಮನೋಜ್ಞವಾಗಿ ಮೂಡಿ ಬಂತು. ಜೊತೆಗೆ ಕರ್ನಾಟಕ ಸರಕಾರದಿಂದ ನಡೆಸಲ್ಪಟ್ಟ ಜೂನಿಯರ್, ಸೀನಿಯರ್ ಹಾಗೂ ವಿದ್ವತ್ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿತ್ತು. ನೃತ್ಯ ಗುರುಗಳ ಪೋಷಕರಾದ ಶ್ರೀಮತಿ ಜಯಲಕ್ಷ್ಮಿ ಭಟ್ ಹಾಗೂ ಪದ್ಮನಾಭ ಭಟ್ ದಂಪತಿಗಳ ವತಿಯಿಂದ ದತ್ತಿ ಪ್ರಶಸ್ತಿಯನ್ನು ವಿತರಿಸಲಾಯಿತು. ಜೊತೆಗೆ ಸುಳ್ಯ ಶಾಖೆಯ ಸಹ ಶಿಕ್ಷಕಿಯರಾದ ವಿದುಷಿ ಅಂಕಿತಾ ರೈ, ವಿದುಷಿ ಮಂಜುಶ್ರೀ ರಾಘವ್, ಕು. ಅನ್ವಿತಾ ಎನ್, ಕು. ಅನಘ ಆರ್.ಯು. ಮತ್ತು ಕು. ಜಯಶ್ರೀ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಮಂಗಳೂರಿನ ಮಯೂರ ತಂಡದ ಕಲಾವಿದೆಯರಿಂದ ಪ್ರಸ್ತುತ ಪಡಿಸಲಾದ ನಾಲ್ಕು ನೃತ್ಯಬಂಧಗಳು ಪ್ರೇಕ್ಷಕರನ್ನು ಮೈ ನವಿರೇಳಿಸುವಂತಿತ್ತು.

    ಕಾರ್ಯಕ್ರಮದಲ್ಲಿ ಗಾನ ನೃತ್ಯ ಅಕಾಡೆಮಿಯ ನಿರ್ದೇಶಕಿಯಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಕಾರ್ಯದರ್ಶಿಗಳಾದ ರಾಧಾಕೃಷ್ಣ ಭಟ್ ಹಾಗೂ ರಂಗಮನೆಯ ರೂವಾರಿ ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು. ಕು. ಮಹಿಮಾ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಪುರಭವನದಲ್ಲಿ ‘ಸೀನು ಸೀನರಿಯ ಯಕ್ಷಗಾನ’ | ಜುಲೈ 3ರಂದು
    Next Article ಮಂಗಳೂರು ಪುರಭವನದಲ್ಲಿ ‘ಬೋಲಾವ ವಿಠಲ’ ಸಂಗೀತ ಕಾರ್ಯಕ್ರಮ | ಜುಲೈ 1ರಂದು
    roovari

    Add Comment Cancel Reply


    Related Posts

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 129’ | ಜೂನ್ 07

    June 12, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.