Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುದ್ರಾಡಿ ಸರಕಾರಿ ಶಾಲೆಯಲ್ಲಿ ‘ಗಾನಯಾನ’ ಕನ್ನಡ ಗೀತಗಾಯನ
    Music

    ಮುದ್ರಾಡಿ ಸರಕಾರಿ ಶಾಲೆಯಲ್ಲಿ ‘ಗಾನಯಾನ’ ಕನ್ನಡ ಗೀತಗಾಯನ

    November 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಮತ್ತು ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್‌ ಹೆಬ್ರಿ ಇದರ ಜಂಟಿ ಸಹಯೋಗದೊಂದಿಗೆ ನವೆಂಬರ್ ತಿಂಗಳ ‘ಸಡಗರ 2023’ ಕಾರ್ಯಕ್ರಮದ ಅಂಗವಾಗಿ ‘ಗಾನಯಾನ’ ಕನ್ನಡ ಗೀತಗಾಯನವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುದ್ರಾಡಿ ಇಲ್ಲಿ ದಿನಾಂಕ 07-11-2023ರಂದು ಜರುಗಿತು.

    ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಇವರು “ಕನ್ನಡ ಗೀತ ಗಾಯನದ ಮೂಲಕ ವಿದ್ಯಾರ್ಥಿಗಳಲ್ಲಿ ಸದಭಿರುಚಿಯನ್ನು ಮೂಡಿಸಿ ಕನ್ನಡ ಕಂಪು ಮನೆಮನೆಗಳಲ್ಲಿ ಪಸರಿಸಲಿ” ಎಂದು ಹೇಳಿದರು. “ಚಾಣಕ್ಯ ಸಂಸ್ಥೆ ಹಮ್ಮಿಕೊಂಡ ಗೀತಗಾಯನ ಕಾರ್ಯಕ್ರಮ ಪ್ರತಿ ಹಳ್ಳಿಹಳ್ಳಿಗೂ ತಲುಪಲಿ. ವಿದ್ಯಾರ್ಥಿಗಳ ಬಾಯಲ್ಲಿ ಗೀತೆ ಸದಾ ನಲಿದಾಡಲಿ” ಎಂದು ಲಯನ್ಸ್ ಅಧ್ಯಕ್ಷರಾದ ರಘುರಾಮ ಶೆಟ್ಟಿ ಹೇಳಿದರು.

    ಮುಖ್ಯ ಅತಿಥಿಗಳಾಗಿ ಲಯನ್ಸ್ ಹೆಬ್ರಿ ಸಿಟಿ ಅಧ್ಯಕ್ಷರಾದ ಶ್ರೀ ರಘುರಾಮ ಶೆಟ್ಟಿ, ಸರಕಾರಿ ನೌಕರರ ಸಂಘ ಹೆಬ್ರಿ ತಾಲೂಕು ಇದರ ಅಧ್ಯಕ್ಷರಾದ ಹರೀಶ ಪೂಜಾರಿ, ಚಾಣಕ್ಯ ಸಂಸ್ಥೆಯ ಅಧ್ಯಕ್ಷರಾದ ಉದಯ ಶೆಟ್ಟಿ ಮತ್ತು ನಿವೃತ್ತ ಶಿಕ್ಷಕರಾದ ಗಣಪತಿ ಪೈ ಉಪಸ್ಥಿತರಿದ್ದರು. ಚಾಣಕ್ಯ ಸಂಸ್ಥೆಯಿಂದ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ರಘುರಾಮ ಶೆಟ್ಟಿಯವರಿಂದ ಸ್ವರಚಿತ ಕವನ ವಾಚನ ನಡೆಯಿತು. ಉದಯ ಶೆಟ್ಟಿ ಪ್ರಸ್ತಾಪಿಸಿ ಸ್ವಾಗತಿಸಿದರು. ಸತೀಶ ಬೇಳಂಜೆ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಗಾಯನದ ಸವಿಯನ್ನುಂಡರು.

    Share. Facebook Twitter Pinterest LinkedIn Tumblr WhatsApp Email
    Previous Articleಕೆ. ಷರೀಫಾ ಅವರ ‘ನೀರೊಳಗಣ ಕಿಚ್ಚು’ ಕೃತಿಗೆ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’
    Next Article ಮಂಗಳೂರು ಕಲಾಂಗಣದಲ್ಲಿ 19ನೇ ‘ಕಲಾಕಾರ್ ಪುರಸ್ಕಾರ’ ಪ್ರದಾನ
    roovari

    Add Comment Cancel Reply


    Related Posts

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10 

    May 29, 2025

    ಕಾಸರಗೋಡಿನ ಗಾಯಕರ ಧ್ವನಿ ಅಂತರ್ ಧ್ವನಿ – ಬಾ. ನಾ. ಸುಬ್ರಹ್ಮಣ್ಯ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications