Subscribe to Updates

    Get the latest creative news from FooBar about art, design and business.

    What's Hot

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ, ವ್ಯಂಗ್ಯಚಿತ್ರಗಾರ, ಅಂಕಣಬರಹಗಾರ ವಿರಾಜ್ ಅಡೂರು ಇವರಿಗೆ ‘ಗಡಿನಾಡ ಚೈತನ್ಯ -2024’ ಪ್ರಶಸ್ತಿ
    Awards

    ಸಾಹಿತಿ, ವ್ಯಂಗ್ಯಚಿತ್ರಗಾರ, ಅಂಕಣಬರಹಗಾರ ವಿರಾಜ್ ಅಡೂರು ಇವರಿಗೆ ‘ಗಡಿನಾಡ ಚೈತನ್ಯ -2024’ ಪ್ರಶಸ್ತಿ

    April 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಜೇಶ್ವರ : ಸಾಹಿತಿ, ವ್ಯಂಗ್ಯಚಿತ್ರಗಾರ, ಪತ್ರಕರ್ತ, ಅಂಕಣಬರಹಗಾರ, ಸಂಘಟಕ, ಕೃಷಿಕ, ಶಿಬಿರ ಸಂಪನ್ಮೂಲ ವ್ಯಕ್ತಿಯಾಗಿ ಸಮಾಜದ ವಿವಿಧ ಉನ್ನತ ಕ್ಷೇತ್ರಗಳಲ್ಲಿ ಸದಾ ತೊಡಗಿಸಿಕೊಂಡಿರುವ ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದ ಪ್ರಶಾಂತ ರಾಜ ವಿ ತಂತ್ರಿ (ವಿರಾಜ್ ಅಡೂರು) ಅವರಿಗೆ ದಿನಾಂಕ 01-04-2024ರ ಸೋಮವಾರದಂದು ‘ಗಡಿನಾಡ ಚೈತನ್ಯ -2024’ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ವರ್ಕಾಡಿ ಕಾವಿ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮಕಲಶದ ಸಂದರ್ಭದಲ್ಲಿ ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕಂತಿಕ ಸಂಘದ ವತಿಯಿಂದ ನಡೆದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿರಾಜ್ ಅಡೂರು ಅವರ ಗಡಿನಾಡಿನಲ್ಲಿ ಕನ್ನಡ ಭಾಷೆಯ ಕುರಿತ ಕಾಳಜಿ ಹಾಗೂ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿಲಾಯಿತು. ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ಕಾಸರಗೋಡು, ಕಾರ್ಯದರ್ಶಿ ಗುರುರಾಜ್ ಕಾಸರಗೋಡು, ಜಯಂತಿ ಪಿ. ರಾಜ್, ಆದ್ಯಂತ್ ಅಡೂರು, ಉಷಾ ಸುಧಾಕರನ್, ವಿದುಷಿ ರೇಖಾ ದಿನೇಶ್ ಮಂಜೇಶ್ವರ, ಕಾವಿ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮಂಡಳಿಯ ಮುಖಂಡರಾದ ಪ್ರಭಾಕರ ರೈ, ವಿಕ್ರಂ ದತ್ತ, ಡಾ. ಶಂಕರ್ ಕೆ. ಎಸ್. ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ‘ವೀರಮಣಿ ಕಾಳಗ’ ಯಕ್ಷಗಾನ ಪ್ರದರ್ಶನ
    Next Article ಉಡುಪಿಯ ಶ್ರೀ ರಾಮ್ ಜಾನಪದ ಕಲಾ ತಂಡದವರಿಂದ ‘ಜಾನಪದ ವೈಭವ’ | ಏಪ್ರಿಲ್ 7
    roovari

    Add Comment Cancel Reply


    Related Posts

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.