Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಂದಾಪುರದಲ್ಲಿ ಗಮಕ ವಾಚನ ವ್ಯಾಖ್ಯಾನ
    Cultural

    ಕುಂದಾಪುರದಲ್ಲಿ ಗಮಕ ವಾಚನ ವ್ಯಾಖ್ಯಾನ

    January 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 30-11-2023ರಂದು ಕುಂದಾಪುರದ ‘ನುಡಿ’ಯಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರದ ಖ್ಯಾತ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ಮಾತನಾಡಿ “ಪುರಾಣ ಹಾಗೂ ಆಧುನಿಕ ಕಾವ್ಯಗಳ ಸುಲಭ ಅರ್ಥೈಸುವಿಕೆಗೆ ಗಮಕ ಕಲೆ ಪೂರಕವಾದುದು. ಕಾವ್ಯಗಳಲ್ಲಿನ ಸಾಂದರ್ಭಿಕವಾದ ಸಾಹಿತ್ಯ ಶ್ರೀಮಂತಿಕೆಗೆ ರಸಬದ್ಧವಾದ ರಾಗಗಳ ಸಂಯೋಜನೆಯು ಶೋತೃಗಳಿಗೆ ಹೃದ್ಯವಾಗುತ್ತದೆ. ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು ಯುವ ಮನಸುಗಳನ್ನು ಅರಳಿಸಬೇಕು.” ಎಂದು ಅವರು ಅಭಿಪ್ರಾಯಪಟ್ಟರು.

    ಗಮಕಿಯಾಗಿ ಶ್ರೀಮತಿ ಮಂಜುಳಾ ಸುಬ್ರಮಣ್ಯ ಮಂಚಿ ಹಾಗೂ ವ್ಯಾಖ್ಯಾನಕಾರರಾಗಿ ಸಂಸ್ಕೃತ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರೆ ಇವರು ದ.ರಾ. ಬೇಂದ್ರೆಯವರ ಮೇಘದೂತ ಕಾವ್ಯ ಭಾಗವನ್ನು ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು ಅಧ್ಯಕ್ಷತೆ ವಹಿಸಿ, ಶ್ರೀಮತಿ ಸುಧಾ ಹೆಬ್ಬಾರ್ ಉಪಸ್ಥಿತರಿದ್ದರು.

    ಉಡುಪಿ ತಾಲೂಕು ಗಮಕ ಕಲಾಪರಿಷತ್ ಅಧ್ಯಕ್ಷರಾದ ಎಂ.ಎಲ್. ಸಾಮಗ ಸ್ವಾಗತಿಸಿ, ಗಮಕ ಕಲಾ ಪರಿಷತ್ ಕುಂದಾಪುರ ಘಟಕದ ಅಧ್ಯಕ್ಷರಾದ ಎಚ್. ಸುಜಯೀ0ದ್ರ ಹಂದೆ ಕಾರ್ಯಕ್ರಮವನ್ನು ನಿರ್ವಹಿಸಿ, ಕಾರ್ಯದರ್ಶಿ ವಿಶ್ವನಾಥ ಕರಬ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನಕದಾಸ ಅಧ್ಯಯನ ಸಂಶೋಧನಾ ಪೀಠದಿಂದ ವಿಸ್ತರಣಾ ಉಪನ್ಯಾಸ ಮಾಲಿಕೆ-6
    Next Article ಸೋಮವಾರಪೇಟೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಸಮಾರೋಪ ಸಮಾರಂಭ ಮತ್ತು ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಆಲಾಪ್’ ಶಾಸ್ತ್ರೀಯ ಸಂಗೀತ ಕಛೇರಿ | ಮೇ 10

    May 7, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.