Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆ ಹಯಗ್ರೀವದಲ್ಲಿ ಸಂಭ್ರಮದಿಂದ ನಡೆದ 2ದಿನಗಳ ನಾಟಕೋತ್ಸವ

    June 11, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಎಂ. ಲಕ್ಷ್ಮೀನಾರಾಯಣ ಭಟ್ ಇವರಿಗೆ ನುಡಿನಮನ

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಗಮಕ ವಾಚನ- ವ್ಯಾಖ್ಯಾನ
    Literature

    ಪುತ್ತೂರಿನಲ್ಲಿ ಗಮಕ ವಾಚನ- ವ್ಯಾಖ್ಯಾನ

    September 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ದ.ಕ.ಜಿಲ್ಲೆ ಹಾಗೂ ಪುತ್ತೂರು ತಾಲೂಕು ಘಟಕದ ವತಿಯಿಂದ ಆಯೋಜಿಸಿದ ಗಮಕ ವಾಚನ – ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 17 ಸೆಪ್ಟೆಂಬರ್ 2024ರಂದು ನಿವೃತ್ತ ಪ್ರಾಂಶುಪಾಲರು ಹಾಗೂ ಘಟಕದ ಅಧ್ಯಕ್ಷರಾದ ಪ್ರೊ. ವೇದವ್ಯಾಸ ರಾಮಕುಂಜ ಇವರ ಸ್ವಗೃಹ, ಪುತ್ತೂರಿನ ನೆಹರು ನಗರದ ‘ಶ್ರೀಮಾ’ದಲ್ಲಿ ನಡೆಯಿತು.


    ಅನಂತಪದ್ಮನಾಭ ವ್ರತದ ಸಮಾರೋಪ ಪೂಜಾಕಾರ್ಯದ ಅಂಗವಾಗಿ ‘ಗುರು ಚರಿತಾಮೃತ’ದಿಂದ ಆಯ್ದ ‘ಅನಂತಪದ್ಮನಾಭ ವ್ರತ ಮಹಾತ್ಮೆ’ ಎಂಬ ಕಥಾಭಾಗವನ್ನು ಪ್ರಸ್ತುತಪಡಿಸಲಾಯಿತು. ಗಮಕಿ ಮಂಜುಳಾ ಸುಬ್ರಹ್ಮಣ್ಯ ಭಟ್ ಇವರು ಗಮಕ ವಾಚನಗೈದು, ಶ್ರೀಯುತ ಮುಳಿಯ ಶಂಕರ ಭಟ್ ವ್ಯಾಖ್ಯಾನಗೈದರು. ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮವು ನೆರೆದ ಕಲಾಪ್ರಿಯರನ್ನು ರಂಜಿಸಿತು.
    ಗಮಕ ಕಲಾ ಪರಿಷತ್ತು ಬಂಟ್ವಾಳ ಘಟಕದ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ ಸ್ವಾಗತಿಸಿ, ನಿವೃತ್ತ ಕನ್ನಡ ಪ್ರಾಚಾರ್ಯರಾದ ವಸಂತ ಕುಮಾರ್ ತಾಳ್ತಜೆ ಧನ್ಯವಾದ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಕಲಾವಿದರನ್ನು ಶಾಲು ಹೊದಿಸಿ ಗೌರವಿಸಲಾಯಿತು.
    ಘಟಕದ ಗೌರವಾಧ್ಯಕ್ಷರಾದ ಭಾಸ್ಕರ ಬಾರ್ಯ, ಕಾರ್ಯದರ್ಶಿ ಶಂಕರಿ ಶರ್ಮ, ಸದಸ್ಯರಾದ ಮಹಾಲಿಂಗ ಭಟ್, ಜಯಲಕ್ಷ್ಮೀ ವಿ. ಭಟ್ ಮತ್ತು ಆಗಮಿಸಿದ ಅತಿಥಿಗಳು ಹಾಗೂ ಮನೆಮಂದಿಯೆಲ್ಲರೂ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ – ಸಂಪ್ರೀತಿಯ ಶಿಮುಂಜೆ ಪರಾರ
    Next Article ಕರ್ನಾಟಕ ನಾಟಕ ಅಕಾಡೆಮಿಯ ಮಹತ್ವದ ಯೋಜನೆ ‘ಕಾಲೇಜು ವಿದ್ಯಾರ್ಥಿಗಳ ನಾಟಕ ಶಿಬಿರ – ಪ್ರದರ್ಶನ’ | ಸೆಪ್ಟೆಂಬರ್ 26
    roovari

    Comments are closed.

    Related Posts

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ

    June 11, 2025

    ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ

    June 11, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.