Subscribe to Updates

    Get the latest creative news from FooBar about art, design and business.

    What's Hot

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ‘ಗಮಕ ವಾಚನ-ವ್ಯಾಖ್ಯಾನ’
    Literature

    ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ‘ಗಮಕ ವಾಚನ-ವ್ಯಾಖ್ಯಾನ’

    June 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ಗಮಕ ವಾಚನ-ವ್ಯಾಖ್ಯಾನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 16-06-2024ರಂದು ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವೇದವ್ಯಾಸ ರಾಮಕುಂಜ ಇವರು ಮಾತನಾಡುತ್ತಾ “ಗಮಕ ಕಲೆಯು ಅತ್ಯಂತ ಪಾವಿತ್ರ್ಯತೆಯನ್ನು ಹೊಂದಿದ್ದು; ಸಾಮಾಜಿಕ, ಧಾರ್ಮಿಕ, ಬೌದ್ಧಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ನೆಲೆಗಳಲ್ಲಿ ಉನ್ನತ ಮೌಲ್ಯಗಳನ್ನು ಹೊಂದಿದೆ. ಮುಂದೆ ಮನೆ ಮನೆಗಳಲ್ಲಿ ಉತ್ತಮ ಆಶಯವುಳ್ಳ ಅತ್ಯಂತ ಕಡಿಮೆ ವೆಚ್ಚದಲ್ಲಿ ಆಗುವಂತಹ ಗಮಕ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕುಟುಂಬಗಳಲ್ಲಿ ಸಾಮರಸ್ಯ ಬೆಳೆಯುವಂತೆ ಮಾಡಬೇಕು” ಎಂಬ ಆಶಯ ವ್ಯಕ್ತಪಡಿಸಿದರು.

    ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯರು ದೀಪ ಬೆಳಗಿಸಿ ಉದ್ಘಾಟಿಸಿ ಶುಭನುಡಿಗಳನ್ನಾಡಿದರು. ಗೌರವಾಧ್ಯಕ್ಷರಾದ ಶ್ರೀಯುತ ಭಾಸ್ಕರ ಬಾರ್ಯರು ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಪರಿಚಯಿಸಿದರು. ಕಳೆದ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳನ್ನು ಸ್ವಾಗತಿಸಿ ಅಭಿನಂದಿಸಲಾಯಿತು.

    ಸಭಾ ಕಾರ್ಯಕ್ರಮದ ಬಳಿಕ ರಾಘವಾಂಕ ಕವಿ ವಿರಚಿತ ಸತ್ಯಹರಿಶ್ಚಂದ್ರ ಮಹಾಕಾವ್ಯದಿಂದ ಆಯ್ದುಕೊಂಡ ವಿಶ್ವೇಶ್ವರ ಸಾಕ್ಷಾತ್ಕಾರ ಎಂಬ ಭಾಗವನ್ನು ಗಮಕಿ ಶ್ರೀಮತಿ ಜಯಂತಿ ಹೆಬ್ಬಾರ್ ಅವರು ವಾಚಿಸಿ, ಪ್ರೊ. ಮಧೂರು ಮೋಹನ ಕಲ್ಲೂರಾಯರು ನಿರೂಪಣಾ ವ್ಯಾಖ್ಯಾನ ಗೈದು ಗಮಕ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಸಭಾಧ್ಯಕ್ಷರು ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸದಸ್ಯರಾದ ಶ್ರೀಮತಿ ಪ್ರೇಮಲತಾ ರಾವ್ ಸ್ವಾಗತಿಸಿ, ಜಯಲಕ್ಷ್ಮಿ ವಿ. ಭಟ್ ವಂದಿಸಿ, ಮಾಸ್ಟರ್ ಸನ್ಮಯ್ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಶಂಕರಿ ಶರ್ಮ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22
    Next Article ಪುಸ್ತಕ ವಿಮರ್ಶೆ | ಮೀನಾ ಹರೀಶ್‌ ಕೋಟ್ಯಾನ್‌ ಅವರ ‘ನಿನ್ನೊಲುಮೆ ನನಗಿರಲಿ’
    roovari

    Add Comment Cancel Reply


    Related Posts

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.