Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂತ ಎಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಗಾಂಧಿ ಸ್ಮೃತಿ’ ಕಾರ್ಯಕ್ರಮ
    Book Release

    ಸಂತ ಎಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಗಾಂಧಿ ಸ್ಮೃತಿ’ ಕಾರ್ಯಕ್ರಮ

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವು ಜಂಟಿಯಾಗಿ ಆಯೋಜಿಸಿದ ‘ಗಾಂಧಿ ಸ್ಮೃತಿ’ ಕಾರ್ಯಕ್ರಮವು ದಿನಾಂಕ 30 ಜನವರಿ 2025 ರಂದು ಮಂಗಳೂರಿನ ಸಂತ ಎಲೋಶಿಯಸ್ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಎಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ “ಗಾಂಧೀಜಿಯವರ ತತ್ವಗಳು ನಮ್ಮ ಜೀವನದ ಎಲ್ಲಾ ಹಂತಗಳಲ್ಲಿ ಮಾರ್ಗದರ್ಶನ ನೀಡುವಂತಹವು” ಎಂದು ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಗೌಡ ಇವರು ಗಾಂಧೀಜಿಯವರ ಜೀವನ ಸಿದ್ಧಾಂತ ಮತ್ತು ಸಾಹಿತ್ಯದ ಕುರಿತು ವಿಸ್ತ್ರತವಾದ ಪ್ರಬಂಧ ಮಂಡನೆ ಮಾಡಿದರು. ಇದೇ ಸಂದರ್ಭದಲ್ಲಿ ಸ್ವೀವನ್ ಕ್ವಾಡ್ರಸ್ ಪೆರ್ಮುದೆ ಇವರು ಮಹಾತ್ಮ ಗಾಂಧೀಜಿಯವರ ಕುರಿತು ಬರೆದ ಪುಸ್ತಕದ ಲೋಕಾರ್ಪಣೆ ನಡೆಯಿತು.

    ಪುಸ್ತಕದ ತಯಾರಿಯಲ್ಲಿ ಧನಸಹಾಯ ಮಾಡಿದ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಜಾರ್ಜ್ ಎನ್. ಫರ್ನಾಂಡಿಸ್ ಮಾತನಾಡಿ “ಗಾಂಧೀಜಿಯವರ ಜೀವನ ಆದರ್ಶಗಳು ನಮಗೆ ಸದಾ ಮಾರ್ಗದರ್ಶಿ” ಎಂದು ತಿಳಿಸಿದರು. ಪುಸ್ತಕ ಪರಿಚಯವನ್ನು ಮಾಡಿಕೊಟ್ಟ ಡಾ. ಅಲ್ವಿನ್ ಡೆಸಾರವರು ಈ ಪುಸ್ತಕದ ಬಳಕೆ ಹೆಚ್ಚೆಚ್ಚು ಅಗುವ ಅಗತ್ಯ ಇದೆ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಮ್ ಸ್ಟ್ಯಾನಿ ಆಲ್ವಾರಿಸ್ ಮಾತನಾಡಿ “ಇಂದಿನ ಸಮಾಜದಲ್ಲಿ ವಿಭಜನಕಾರಿ ಚಿಂತನೆಗಳು ಹೆಚ್ಚುತ್ತಿದ್ದು, ನಮ್ಮ ದೇಶೀಯ ಐಕ್ಯಭಾವ ಮತ್ತು ಭ್ರಾತೃತ್ವದ ಭಾವಗಳು ಹೆಚ್ಚಾಗಲು ಗಾಂಧೀಜಿಯವರ ಪ್ರೇರಣೆ ಅತ್ಯಗತ್ಯ” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಅಕಾಡಮಿಯ ರಿಜೆಸ್ಟರ್ ಶ್ರೀಯುತ ರಾಜೇಶ್ ಜಿ. ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಫ್ಲೋರಾ ಕಾಸ್ತೆಲಿನೊ ಕಾರ್ಯಕ್ರಮ ಸಂಯೋಜಿಸಿ, ಪುಸ್ತಕದ ಲೇಖಕರಾದ ಪ್ರೊಫೆಸರ್ ಸ್ಟೀವನ್ ಕ್ವಾಡ್ರಸ್ ಧನ್ಯವಾದ ಸಲ್ಲಿಸಿದರು. ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು.

    Book release kannada Literature
    Share. Facebook Twitter Pinterest LinkedIn Tumblr WhatsApp Email
    Previous Articleಆಲಿಸ್ ಫೆರ್ನಾಂಡಿಸ್ ಇವರಿಗೆ ‘ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ’ | ಫೆಬ್ರವರಿ 15
    Next Article ವಿಶೇಷ ಲೇಖನ – ಶಬ್ದ ಗಾರುಡಿಗ ದ. ರಾ. ಬೇಂದ್ರೆ
    roovari

    Add Comment Cancel Reply


    Related Posts

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.