Subscribe to Updates

    Get the latest creative news from FooBar about art, design and business.

    What's Hot

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಇವರಿಗೆ ‘ಗೌರಮ್ಮ ದತ್ತಿನಿಧಿ ಪ್ರಶಸ್ತಿ’ ಪ್ರದಾನ
    Awards

    ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಇವರಿಗೆ ‘ಗೌರಮ್ಮ ದತ್ತಿನಿಧಿ ಪ್ರಶಸ್ತಿ’ ಪ್ರದಾನ

    November 3, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ 19ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ದಿನಾಂಕ 27-10-2023ರ ಶುಕ್ರವಾರ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧಾ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

    ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್ ಅವರು ಮಾತನಾಡಿ “ಕತೆಗಾರ್ತಿ ಕೊಡಗಿನ ಗೌರಮ್ಮ ಅವರು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ. ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಬಡ ವರ್ಗದವರು ಮುಖ್ಯವಾಹಿನಿಗೆ ಬರುವಂತಾಗಲು ತಮ್ಮಲ್ಲಿದ್ದ ಒಡವೆಗಳನ್ನು ಮಹಾತ್ಮ ಗಾಂಧೀಜಿಯವರಿಗೆ ನೀಡಿದ್ದರು. ಜೀವನದಲ್ಲಿ ಸರಳ ಸಜ್ಜನ ಬದುಕು ನಡೆಸಿದ್ದ ಗೌರಮ್ಮ ಅವರು ಸಂವೇದನಾಶೀಲ ಹಾಗೂ ಕ್ರೀಯಾಶೀಲ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜಮುಖಿ ಕಾರ್ಯಗಳಿಗಾಗಿ ಸದಾ ಮುಂಚೂಣಿಯಲ್ಲಿದ್ದರು. ಗೌರಮ್ಮನವರ ಸಣ್ಣ ಕತೆಗಳು ಪ್ರಸ್ತುತವಾಗಿದ್ದು ಸಮಾಜಮುಖಿಯಾಗಿ ಬೆಳಕು ಚೆಲ್ಲುತ್ತದೆ. ವೈಚಾರಿಕ, ವೈಜ್ಞಾನಿಕತೆ, ಜೀವನ ಮೌಲ್ಯವನ್ನು ಗೌರಮ್ಮನವರ ಸಾಹಿತ್ಯದಲ್ಲಿ ಕಾಣಬಹುದಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಗೌರಮ್ಮನವರ ಕೊಡುಗೆ ಅಪಾರ” ಎಂದು ವರ್ಣಿಸಿದರು.

    ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ “ಗೌರಮ್ಮ ದತ್ತಿನಿಧಿ ಪ್ರಶಸ್ತಿಯಿಂದ ಕೊಡಗು ಜಿಲ್ಲೆಯಲ್ಲಿ ಹಲವು ಮಹಿಳಾ ಬರಹಗಾರರನ್ನು ಗುರುತಿಸುವಂತಾಗಿದೆ. ಸಾಹಿತ್ಯ ಲೋಕದಲ್ಲಿ ಗೌರಮ್ಮ ದತ್ತಿನಿಧಿ ಪ್ರಶಸ್ತಿ ರಾಜ್ಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಗೌರಮ್ಮ ಅವರು ಬರೆದಿರುವ 21 ಸಣ್ಣ ಕತೆಗಳು ಸಾರ್ವಕಾಲಿಕವಾಗಿವೆ. ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆಯಿಂದ ವಿದ್ಯಾರ್ಥಿಗಳಿಗೆ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ” ಎಂದು ಹೇಳಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ ಪ್ರಸನ್ನ ಅವರು ಮಾತನಾಡಿ “ಹೃದಯದ ಬದುಕನ್ನು ಹತ್ತಿರಕ್ಕೆ ಬೆಸೆಯುವುದು ಸಾಹಿತ್ಯವಾಗಿದೆ. ಜಾತಿ, ಧರ್ಮವನ್ನು ಮೀರುವಂತದ್ದು ಸಾಹಿತ್ಯ. ಬದುಕನ್ನು ಅರ್ಥೈಸಿಕೊಳ್ಳಲು ಸಾಹಿತ್ಯ ಸಹಕಾರಿ. ಗೌರಮ್ಮ ಅವರು ಮಹಿಳಾ ಕಥೆಗಾರ್ತಿಯಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದರು. ಗೌರಮ್ಮ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಟ್ರತನ ಲಲಿತ ಅಯ್ಯಣ್ಣ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಕುಟುಂಬದವರ ಪ್ರೇರಣೆ ಹೆಚ್ಚಿನದ್ದಾಗಿದೆ ಎಂದರು.

    ಈರಮಂಡ ಹರಿಣಿ ವಿಜಯ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಮುನೀರ್ ಅಹ್ಮಮದ್ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎ.ಸಂಪತ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ (ಮಡಿಕೇರಿ), ಎಸ್.ಡಿ.ವಿಜೇತ (ಸೋಮವಾರಪೇಟೆ), ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಸಂಗೀತ ರವಿರಾಜ್, ಡಾ. ಕೋರನ ಸರಸ್ವತಿ, ಡಾ.ಕಾವೇರಿ ಪ್ರಕಾಶ್, ಸುನೀತಾ ಲೋಕೇಶ್, ಸಹನಾ ಕಾಂತಬೈಲು, ಕೆ.ಟಿ.ಬೇಬಿ ಮ್ಯಾಥ್ಯೂ, ನವೀನ್ ಅಂಬೆಕಲ್ಲು, ಕುಡೆಕಲ್ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ರೇವತಿ ರಮೇಶ್ ಸ್ವಾಗತಿಸಿದರು. ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಕೆ.ಜಿ.ರಮ್ಯಾ, ಪ್ರೇಮ ರಾಘವಯ್ಯ ಮತ್ತು ತಂಡದವರು ನಾಡಗೀತೆ ಹಾಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದ ಜನತೆಗೆ ಒಂದೇ ಕಡೆಯಲ್ಲಿ ಸಿಗಲಿದೆ ಸಾಹಿತ್ಯ ಕೃತಿ ಭಂಡಾರ – ಪುಸ್ತಕ ಮನೆ
    Next Article ‘ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣಾ’ ಕಾರ್ಯಕ್ರಮದಲ್ಲಿ ಶ್ರೀ ಪೆರುವಾಯಿ ನಾರಾಯಣ ಭಟ್‌ ಸನ್ಮಾನ
    roovari

    Add Comment Cancel Reply


    Related Posts

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.