Subscribe to Updates

    Get the latest creative news from FooBar about art, design and business.

    What's Hot

    ನೃತ್ಯಾಂತರಂಗದಲ್ಲಿ ಮಿಂಚಿದ ದುಬೈಯ ಬಾಲಪ್ರತಿಭೆ ಕು. ನಿತಾರಾ ನಾಯರ್

    July 29, 2025

    ಪುತ್ತೂರಿನಲ್ಲಿ ಶಿಕ್ಷಕ ಕವಿಗಳಿಗಾಗಿ ರಾಜ್ಯ ಮಟ್ಟದ ಕವಿಗೋಷ್ಠಿ | ಆಗಸ್ಟ್ 04

    July 29, 2025

    ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಜಗದೀಶ್ ಪೈ ನಿಧನ

    July 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಗೌರವ ಪ್ರಶಸ್ತಿ’ ಪ್ರದಾನ
    Awards

    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಗೌರವ ಪ್ರಶಸ್ತಿ’ ಪ್ರದಾನ

    September 11, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ದಿನಾಂಕ 6 ಸೆಪ್ಟೆಂಬರ್ 2024ರಂದು ಪುರಭವನದಲ್ಲಿ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಿತು.

    ವಿಧಾನಸಭೆ ಸ್ಪೀಕರ್ ಕಾರ್ಯಕ್ರಮದಲ್ಲಿ ಭಾಗವಹಿಸದ ಹಿನ್ನೆಲೆ ಅವರ ಸಂದೇಶ ವಾಚಿಸಲಾಯಿತು. ಅವರ ಸಂದೇಶದಲ್ಲಿ “ಮಂಗಳೂರು ಆಕಾಶವಾಣಿಯಲ್ಲಿ ಬ್ಯಾರಿ ಭಾಷೆ ಕಾರ್ಯಕ್ರಮ ಪ್ರಸಾರವಾಗಬೇಕು, ಶಾಲಾ ಪಠ್ಯಪುಸ್ತಕದಲ್ಲಿ ಬ್ಯಾರಿ ಭಾಷೆ ಅಳವಡಿಸಬೇಕು, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನೀಡಬೇಕೆಂಬ ಬೇಡಿಕೆ ಇದೆ. ಅಕಾಡೆಮಿ ಈ ನಿಟ್ಟಿನಲ್ಲಿ ಪ್ರಯತ್ನಿಸಿದರೆ ತಾನು ಎಲ್ಲ ರೀತಿಯಲ್ಲೂ ಸಹಕರಿಸಲು ಬದ್ಧನಿದ್ದೇನೆ” ಎಂದು ತಿಳಿಸಿದ್ದಾರೆ.

    2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಂಝತುಲ್ಲಾ ವೈ. ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಯಿಲ್ ಉಳ್ಳಾಲ, ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೋಲೊ ಕಲ್ಲಡ್ಕ ಇವರುಗಳಿಗೆ ಪದ್ಮಶ್ರೀ ಹರೇಕಳ ಹಾಜಬ್ಬ ಇವರು ಪ್ರದಾನಿಸಿದರು. ಮಂಗಳೂರು ವಿಶ್ವವಿದ್ಯಾಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಬೆಲ್ಕಿರಿ ಇವರು ದ್ವೈಮಾಸಿಕ ಸಂಚಿಕೆ ಬಿಡುಗಡೆಗೊಳಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಭಾಷಣ ಮಾಡಿದರು.

    ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಿದ್ದರು. ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಪ್ಯಾನಿ ಜೋಕಿಂ ಅಲ್ವಾರಿಸ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ರಹೀಮ್ ಉಚ್ಚಿಲ್, ಬಿ.ಎ. ಮುಹಮ್ಮದ್ ಹನೀಫ್, ಕರಂಬಾರ್ ಮುಹಮ್ಮದ್, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಅಸ್ಲಂ, ಮೂಡಿಗೆರೆ ತಾಲೂಕು ಬ್ಯಾರಿ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೂಡಿಗೆರೆ, ಮೈಸೂರಿನ ದಿ ಬ್ಯಾರೀಸ್ ವೆಲ್ವೇರ್ ಅಸೋಸಿಯೇಶನ್ ಅಧ್ಯಕ್ಷ ಯು.ಕೆ. ಹಮೀದ್ ಹಾಜಿ, ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್ ಗೌರವಾಧ್ಯಕ್ಷ ಯೂಸುಫ್ ವಖ್ತಾರ್, ಮೇಲ್ತನೆಯ ಗೌರವಾಧ್ಯಕ್ಷ ಆಲಿಕುಂಞ ಪಾರೆ, ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ಅಧ್ಯಕ್ಷ ಹುಸೈನ್‌ ಕಾಟಿಪಳ್ಳ, ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಬಡ್ಡೂರು ಬಳಗದಿಂದ ವಿನೂತನ ಪ್ರಹಸನ ‘ಮೂರ್ತಿಗಳು’ ಹಾಗೂ ಎಂ.ಜಿ.ಎಂ. ತಾಲೀಮು ಸ್ಪೋರ್ಟ್ಸ್ ಗುರುಪುರ ಅವರಿಂದ ತಾಲೀಮು ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಕಲಾಮಂದಿರದಲ್ಲಿ ‘ಗಾಂಪರ ಗುಂಪು’ ನಾಟಕ ಪ್ರದರ್ಶನ | ಸೆಪ್ಟೆಂಬರ್ 14
    Next Article ಬೆಂಗಳೂರಿನ ಯಕ್ಷಕಲಾ ಅಕಾಡೆಮಿಯಲ್ಲಿ ಯಕ್ಷಗಾನ ತಾಳಮದ್ದಳೆ | ಸೆಪ್ಟೆಂಬರ್ 14
    roovari

    Comments are closed.

    Related Posts

    ಪುತ್ತೂರಿನಲ್ಲಿ ಶಿಕ್ಷಕ ಕವಿಗಳಿಗಾಗಿ ರಾಜ್ಯ ಮಟ್ಟದ ಕವಿಗೋಷ್ಠಿ | ಆಗಸ್ಟ್ 04

    July 29, 2025

    ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಜಗದೀಶ್ ಪೈ ನಿಧನ

    July 29, 2025

    ಸಂದೇಶ ಸಭಾಂಗಣದಲ್ಲಿ ಗ್ಲೇಡಿಸ್ ರೇಗೊರವರಿಗೆ ಶ್ರದ್ಧಾಂಜಲಿ ಸಭೆ

    July 29, 2025

    ಯಶಸ್ವಿಯಾಗಿ ಜರಗಿದ ‘ಮನೆ ಮನೆ-ಕನ್ನಡ ಜಾಗೃತಿ ಅಭಿಯಾನ’ದ ದ್ವಿತೀಯ ಕಾರ್ಯಕ್ರಮ

    July 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.