Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಂಗಡಿಯಲ್ಲಿ ‘ಗಯಾಪದ ರಂಗ ಸಂಭ್ರಮ’
    Awards

    ಉಪ್ಪಿನಂಗಡಿಯಲ್ಲಿ ‘ಗಯಾಪದ ರಂಗ ಸಂಭ್ರಮ’

    March 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ‘ಗಯಾಪದ ರಂಗ ಸಂಭ್ರಮ’ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ದಿನಾಂಕ 25 ಮಾರ್ಚ್ 2025 ರಂದು ನಡೆಯಿತು.
    ಸಮಾರಂಭದ ಅಧ್ಯಕ್ಷತೆ ವಹಿಸಿದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ನಾಯ್ಕ ಮಾತನಾಡಿ “ಕಲಾವಿದರು ಮತ್ತು ಅವರಲ್ಲಿರುವ ಕಲೆಯನ್ನು ಗುರುತಿಸಿ ಗೌರವಿಸುವ ಮೂಲಕ ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಪೋಷಿಸಿದಂತಾಗುತ್ತದೆ” ಎಂದರು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ ಕಾರ್ಯಕ್ರಮ ಉದ್ಘಾಟಿಸಿದರು.

    ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಉಪ್ಪಿನಂಗಡಿ ಶ್ರೀರಾಮ ಶಾಲೆಯ ಸಂಚಾಲಕ ಯು. ಜಿ. ರಾಧಾ, ಪತ್ರಕರ್ತ ಸಂತೋಷ್ ಕುಮಾರ್ ಶಾಂತಿನಗರ, ಉಬಾರ್ ಗಯಾಪದ ಕಲಾವಿದೆರ್ ತಂಡದ ಮುಖ್ಯಸ್ಥರಾದ ಬಾಲಕೃಷ್ಣ ಪೂಜಾರಿ ಪೆರುವಾಯಿ ಮಾತನಾಡಿದರು. ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕೇಸರ ರಾಜೇಶ್ ಶಾಂತಿನಗರ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ವಿದ್ಯಾಧರ ಜೈನ್, ಕೈಲಾರು ರಾಜಗೋಪಾಲ ಭಟ್, ರಾಮಚಂದ್ರ ಮಣಿಯಾಣಿ, ಕಂಗ್ಲೆ ವಿಶ್ವನಾಥ ಶೆಟ್ಟಿ, ಗುಣಕರ ಅಗ್ನಾಡಿ ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ರಂಗಕರ್ಮಿ ರವಿಶಂಕರ ಶಾಸ್ತ್ರಿ ಮಣಿಲ ಇವರಿಗೆ ‘ಕಲಾ ಮಾಣಿಕ್ಯ’ ಬಿರುದು ಪ್ರದಾನ ಮಾಡಲಾಯಿತು. ಬಳಿಕ ಕಲಾ ಪೋಷಕರಿಗೆ ಮತ್ತು ನಾಟಕ ತಂಡದ ಕಲಾವಿದರನ್ನು ಸನ್ಮಾನಿಸಲಾಯಿತು.

    ಕಲಾವಿದ ರಂಗಯ್ಯ ಬಳ್ಳಾಲ್ ಕೆದಂಬಾಡಿಬೀಡು ಸ್ವಾಗತಿಸಿ, ಸುನೀಲ್ ಪೆರ್ನೆ ನಿರೂಪಿಸಿ, ಸಂಚಾಲಕ ಕಿಶೋರ್ ಕುಮಾರ್ ಜೋಗಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗಯಾಪದ ಕಲಾವಿದೆರ್ ಉಬಾರ್ ತಂಡದಿಂದ ‘ನಾಗಮಾಣಿಕ್ಯ’ ನಾಟಕ ಪ್ರದರ್ಶನಗೊಂಡಿತು.

     

    award baikady drama roovari theatre Tulu
    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರೊಂದಿಗೆ ಮಾತುಕತೆ ಸಂವಾದ ಕಾರ್ಯಕ್ರಮ
    Next Article ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ವೇಣೂರು ವಿಧಿವಶ
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.