Subscribe to Updates

    Get the latest creative news from FooBar about art, design and business.

    What's Hot

    ಬಿ. ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ

    June 18, 2025

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಲಂಕಾ ದಹನ’ ಯಕ್ಷಗಾನ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಮಟಾದಲ್ಲಿ 150ನೇ ‘ಘರ್ ಘರ್ ಕೊಂಕಣಿ’ ಕಾರ್ಯಕ್ರಮ
    Cultural

    ಕುಮಟಾದಲ್ಲಿ 150ನೇ ‘ಘರ್ ಘರ್ ಕೊಂಕಣಿ’ ಕಾರ್ಯಕ್ರಮ

    February 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಮಟಾ : ಖ್ಯಾತ ಚಲನಚಿತ್ರ ನಟ ನಿರ್ದೇಶಕ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಹಿಂದಿನ ಅಧ್ಯಕ್ಷ ಕಾಸರಗೋಡು ಚಿನ್ನಾ ಅವರ ಸಾರಥ್ಯದಲ್ಲಿ ದಿನಾಂಕ 04-02-2024ರಂದು ಸಹ 150ನೇ ‘ಘರ್ ಘರ್ ಕೊಂಕಣಿ’ ಕಾರ್ಯಕ್ರಮವು ಕುಮಟಾದ ಉದ್ಯಮಿ ಹಾಗೂ ಚಲನಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅವರ ಆತಿಥ್ಯದಲ್ಲಿ ನೆರವೇರಲಿದೆ.

    ಇಲ್ಲಿನ ಕೊಂಕಣ ಎಜ್ಯಕೇಶನ್ ಟ್ರಸ್ಟಿನ ಸಭಾಭವನದಲ್ಲಿ ಈ ನಿಮಿತ್ತ ವಿಶೇಷ ಕೊಂಕಣಿ ಮನೋರಂಜನಾ ಕಾರ್ಯಕ್ರಮ ಜರುಗಲಿದ್ದು, ಅಪರಾಹ್ನ 3.30 ಗಂಟೆಗೆ ತಾಲೂಕಿನ ಕಲ್ಪತರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹನುಮಂತ ಕೆ. ಶಾನಭಾಗ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಡಿ. ಶೇಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

    ಬಳಿಕ ಕೊಂಕಣಿ ಭಾಷಿಕ ವಿವಿಧ ಮತ್ಯ ಸಮುದಾಯದ ವತಿಯಿಂದ ಮನೋರಂಜನಾ ಕಾರ್ಯಕ್ರಮ ನೆರವೇರಲಿದೆ. ಇದೇ ವೇದಿಕೆಯಲ್ಲಿ ಸಂಜೆ 5.30 ಗಂಟೆಗೆ ಸಭಾಕಾರ್ಯಕ್ರಮ ಜರುಗಲಿದ್ದು, ಅಧ್ಯಕ್ಷತೆಯನ್ನು ತಾಲೂಕಿನ ಕೊಂಕಣಿ ಪರಿಷತ್ ಇದರ ಉಪಾಧ್ಯಕ್ಷ ಮುರಳೀಧರ ಪ್ರಭು ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ದಿನಕರ ಶೆಟ್ಟಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಮಾಜಿ ಶಾಸಕಿ ರೂಪಾಲಿ ನಾಯಕ, ಮಹೇಶ ಠಾಕೂರ್, ದೀಪಕ ಶೇಟ್ ಉಡುಪಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

    ಕಾರ್ಯಕ್ರಮದ ರೂವಾರಿಗಳಾದ ಕಾಸರಗೋಡು ಚಿನ್ನಾ ಇವರ ವಿಶೇಷ ಆಶಯ ನುಡಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯ್ಯುತ್ತಿರುವ ಕೊಂಕಣಿ ಭಾಷಿಕರನ್ನು ಸನ್ಮಾನಿಸುವುದು ಕಾರ್ಯಕ್ರಮದ ವಿಶೇಷತೆ ಆಗಿದೆ. ಅಂದು ಮುಂಜಾನೆ ಸುಬ್ರಾಯ ವಾಳ್ಕೆ ಅವರ ಸ್ವಗೃಹದಲ್ಲಿ ಕಾಸರಗೋಡು ಚಿನ್ನಾ ಅವರು ಫರ್ ಘರ್ ಕೊಂಕಣಿ ಕಾರ್ಯವನ್ನು ಸಾಂಕೇತಿಕವಾಗಿ ಉದ್ಘಾಟಿಸಲಿದ್ದು, ವಿನೋದ ಪ್ರಭು, ಧೀರೂ ಶಾನಭಾಗ, ಡಾ. ಎಂ.ವಿ. ಮೂಡಲಗಿರಿ, ಆನಂದು ನಾಯಕ, ಪ್ರೀತಿ ಭಂಡಾರಕರ್, ಪಲ್ಲವಿ ಮಡಿವಾಳ ಪಾಲ್ಗೊಳ್ಳಲಿದ್ದಾರೆ.

    ಕೊಂಕಣಿ ಭಾಷಿಕ ವಿವಿಧ ಸಮುದಾಯಗಳ ಸಂಗಮದ ಈ ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಿ ಕಾರ್ಯಕ್ರಮ ಚಂದಗಾಣಿಸಿ ಕೊಡಬೇಕೆಂದು ಸುಬ್ರಾಯ ವಾಳ್ಕೆ ಹಾಗೂ ಈ ಕಾರ್ಯಕ್ರಮದ ಸಂಯೋಜಕ ಚಿದಾನಂದ ಭಂಡಾರಿ ವಿನಂತಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗೋವಿಹಾರ ಧಾಮದಲ್ಲಿ ‘ಧರ್ಮಧೇನು’ ನೃತ್ಯ ರೂಪಕ | ಫೆಬ್ರವರಿ 4
    Next Article ‘ಕರುನಾಡ ಕಣ್ಮಣಿ’ ರಾಜ್ಯ ಪ್ರಶಸ್ತಿಗೆ ಸಾಲಿಗ್ರಾಮ ಗಣೇಶ್ ಶೆಣೈಯವರು ಆಯ್ಕೆ
    roovari

    Add Comment Cancel Reply


    Related Posts

    ಬಿ. ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ

    June 18, 2025

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    Book review | ‘Dharma Yuddha’ of Dr. N. Mogasale

    June 18, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.