Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಗೋಡೆಗೆ ನೇತುಬಿದ್ದ ಭೂಪಟ’ ಕವನ ಸಂಕಲನ ಆಯ್ಕೆ
    Awards

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಗೋಡೆಗೆ ನೇತುಬಿದ್ದ ಭೂಪಟ’ ಕವನ ಸಂಕಲನ ಆಯ್ಕೆ

    April 27, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮಣಿಪಾಲ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನಲ್ಲಿ ವೈದ್ಯರಾಗಿರುವ ಡಾ. ಲಕ್ಷ್ಮಣ ವಿ.ಎ. ಇವರ ‘ಗೋಡೆಗೆ ನೇತುಬಿದ್ದ ಭೂಪಟ’ ಕವನಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿಯು 10,000/- ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

    ಡಾ. ಲಕ್ಷ್ಮಣ ವಿ.ಎ. ಮೂಲತಃ ಬೆಳಗಾವಿ ಜಿಲ್ಲೆ ಅಥಣಿ (ಈಗಿನ ಕಾಗವಾಡ) ತಾಲೂಕಿನ ಮೋಳೆ ಗ್ರಾಮದವರು. ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಓದು, ಕವನಸಂಕಲನ, ಗದ್ಯ ಮತ್ತು ಅಂಕಣ ಬರಹಗಳಲ್ಲಿ ವಿಶೇಷ ಆಸಕ್ತಿಯನ್ನು ಹವ್ಯಾಸವಾಗಿಸಿಕೊಂಡಿರುವ ಲಕ್ಷ್ಮಣ್ ಇವರು ಹಲವಾರು ಕವನ ಸಂಕಲವನ್ನು ಪ್ರಕಟಿಸಿದ್ದಾರೆ. ‘ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ” ಇವರ ಪ್ರಥಮ ಕವನ ಸಂಕಲನ. ‘ಅಪ್ಪನ ಅಂಗಿ’, ‘ಗರ್ದಿ ಗಮ್ಮತ್ತು’, ‘ನೋಡಾ ಗೋಳ ಗುಮ್ಮಟ ನೋಡಾ’, ‘ಮಿಲ್ಟ್ರಿ ಟ್ರಂಕು’, ‘ಕಾಯಿನ್ ಬೂತ್’, ‘ಪರಿಮಳದ ಬಾಕಿ ಮೊತ್ತ’ ಮುಂತಾದುವು ಇವರ ಪ್ರಕಟಿತ ಕವನ ಸಂಕಲನಗಳು. ‘ಬಂಡೆ ಬಸಪ್ಪನ ದೊಡ್ಡಿ’ ಎಂಬ ಕಥೆಯು ಬೆಳಗಾವಿಯ ರಾಣಿ ಚೆನ್ನಮ್ಮ ಮಹಿಳಾ ವಿ.ವಿ. ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿದೆ. ‘ಬಸಣ್ಣನ ಸರ್ತಿ ಸೈಕಲ್’ ಕಥೆ ಮಂಗಳೂರು ವಿ.ವಿ., ಆಳ್ವಾಸ್ ವಿ.ವಿಯ ಪದವಿ ವಿದ್ಯಾರ್ಥಿಗಳಿಗೆ ಪಠ್ಯವಾಗಿದೆ. ಇವರ ಕವನಸಂಕಲನಗಳಿಗೆ ಕಣವಿ ಕಾವ್ಯ ಪ್ರಶಸ್ತಿ, ವೀಚಿ ಪ್ರಶಸ್ತಿ, ವಿಭಾ ಕಾವ್ಯ ಪ್ರಶಸ್ತಿ, ಅಡ್ವೈಜರ್ ಪ್ರಶಸ್ತಿ, ಸವದತ್ತಿ ಸಹೃದಯ ಕಾವ್ಯ ಪ್ರಶಸ್ತಿ, ಈ ಹೊತ್ತಿಗೆ ಕಾವ್ಯ ಪುರಸ್ಕಾರಗಳಲ್ಲದೆ ಹಲವಾರು ದತ್ತಿ ಬಹುಮಾನಗಳು ಲಭಿಸಿವೆ. ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಅಂಕಣ ಬರಹ, ಕತೆ, ಕವನ, ವೈಚಾರಿಕ ಬರಹ, ಪ್ರಬಂಧ ಬರಹ ಹಾಗೂ ಅನುಭವ ಕಥನಗಳು ಪ್ರಕಟವಾಗಿವೆ. ಪಿ.ಎಚ್.ಸಿ. ಕವಲುಗುಡ್ಡ ಅವರ ಇತ್ತೀಚಿನ ಕಾದಂಬರಿ, ಅಲ್ಲದೆ ‘ನಸುಕು’ (nasuku.com) ವೆಬ್‌ಸೈಟ್‌ನ ಸಂಪಾದಕತ್ವದಲ್ಲಿ ಸಕ್ರಿಯರಾಗಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ಕಲೋತ್ಸವ 2026’ | ಏಪ್ರಿಲ್ 26
    Next Article ರಂಗ ನಿರ್ದೇಶಕ ಯಶವಂತ ಡಿ.ಎಸ್. ಶಕ್ತಿನಗರ ಇವರಿಗೆ ಸಮ್ಮಾನ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.