Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ | ಕೊನೆಯ ದಿನಾಂಕ ಸೆಪ್ಟೆಂಬರ್ 28
    Competition

    ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ | ಕೊನೆಯ ದಿನಾಂಕ ಸೆಪ್ಟೆಂಬರ್ 28

    September 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗೋಣಿಕೊಪ್ಪಲು : ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕ.ಸಾ.ಪ. ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ದಿನಾಂಕ 11 ಅಕ್ಟೋಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಗೋಣಿಕೊಪ್ಪಲು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ.

    ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿಯ ಅಧ್ಯಕ್ಷರಾಗಿರುವ ಕೋಳೆರ ದಯಾ ಚಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ದಿನಾಂಕ 28 ಸೆಪ್ಟೆಂಬರ್ 2024ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು. ಈ ಬಾರಿ ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.

    ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ : ಅಧ್ಯಕ್ಷರು, ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ಕಾಮತ್ ನವಮಿ, ಗೋಣಿಕೊಪ್ಪಲು.-571213. (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು).

    ಹೆಚ್ಚಿನ ಮಾಹಿತಿಗೆ ಸಮಿತಿಯ ಸಂಚಾಲಕಿ ಶ್ರೀಮತಿ ಎಸ್.ಎಂ. ರಜನಿ -94838 26120, ಕಾರ್ಯದರ್ಶಿ ಶ್ರೀಮತಿ ಶೀಲಾ ಬೋಪಣ್ಣ-9945794414, ಸದಸ್ಯರಾದ ಚಂದನಾ ಮಂಜುನಾಥ್ -9986939357 ಇವರುಗಳನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಚಂದ್ರಹಾಸ ಕಣಂತೂರು ಇವರ ‘ಪಡಿಯಕ್ಕಿ’ ಕೃತಿ ಲೋಕಾರ್ಪಣೆ ಸಮಾರಂಭ | ಸೆಪ್ಟೆಂಬರ್ 28
    Next Article ಭಾವಗೀತೆಗಳ ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ
    roovari

    Comments are closed.

    Related Posts

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026

    ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ‘ಜನ ಗಣ ಮನ’ | ಜನವರಿ 24

    January 23, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.