Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜಿಲ್ಲಾ ಕ.ಸಾ.ಪ. ವತಿಯಿಂದ ಕವಿಯಿತ್ರಿ ಕೆ.ಜಿ. ರಮ್ಯರಿಗೆ ‘ಗೌರಮ್ಮ ದತ್ತಿ ಪ್ರಶಸ್ತಿ’ ಪ್ರದಾನ
    Awards

    ಜಿಲ್ಲಾ ಕ.ಸಾ.ಪ. ವತಿಯಿಂದ ಕವಿಯಿತ್ರಿ ಕೆ.ಜಿ. ರಮ್ಯರಿಗೆ ‘ಗೌರಮ್ಮ ದತ್ತಿ ಪ್ರಶಸ್ತಿ’ ಪ್ರದಾನ

    May 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ದಿನಾಂಕ 21-05-2024ರಂದು ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ ಕವಿಯಿತ್ರಿ, ಶಿಕ್ಷಕಿ ಕೆ.ಜಿ. ರಮ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಈ ಕಾರ್ಯಕ್ರಮದಲ್ಲಿ ಕವಿತೆ-ಕಾವ್ಯ ರಚನೆ ಕುರಿತು ಮಾತನಾಡಿದ ಮಡಿಕೇರಿ ತಾಲೂಕಿನ ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕರೂ ಆದ ಸಾಹಿತಿ ಮಾರುತಿ ದಾಸಣ್ಣನವ‌ರ್ “ಕವಿತೆ ರಚನೆಗೆ ಯಾವುದೇ ಛಂದ, ಬಂಧ, ಪ್ರಾಸ, ದೋರಣೆ, ವಸ್ತು, ಆಶಯಗಳಂತಹ ಸಿದ್ಧ ರಚನೆ ಇರಬೇಕಿಲ್ಲ. ವಾಸ್ತವಿಕ ನೆಲೆಗಟ್ಟಿನಲ್ಲಿ ಭಾವನಾತ್ಮಕ ಸನ್ನಿವೇಶದಲ್ಲಿ ಸ್ವಾಭಾವಿಕವಾಗಿ ಹುಟ್ಟಿಕೊಳ್ಳುವ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ. ಕವಿಯಿತ್ರಿ ಕೆ.ಜಿ. ರಮ್ಯ ಅವರ ‘ದಾಹಗಳ ಮೈ ಸವರುತ್ತಾ’ ಕವನ ಸಂಕಲನದ ಕವನಗಳಲ್ಲಿ ಕವನಗಳು ಶೋಷಿತ ಮಹಿಳೆಯರ ನೋವು-ನಲಿವುಗಳ ಬಗ್ಗೆ ಬೆಳಕು ಚೆಲ್ಲುತ್ತವೆ” ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ “ಗೌರಮ್ಮ ದತ್ತಿ ಪ್ರಶಸ್ತಿ ಆರಂಭದ ಹಂತದಲ್ಲಿ ಜಿಲ್ಲೆಯಲ್ಲಿದ್ದ ಮಹಿಳಾ ಬರಹಗಾರರ ಕೊರತೆ ಇದೀಗ ನೀಗಿದ್ದು, ಇಂದು ಜಿಲ್ಲೆಯಲ್ಲಿ ಹೆಚ್ಚಿನ ಮಹಿಳಾ ಸಾಹಿತಿಗಳು ಬೆಳೆದಿರುವುದು ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ” ಎಂದರು.

    ಮುಖ್ಯ ಭಾಷಣ ಮಾಡಿದ ಸಾಹಿತಿ, ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕೃತರಾದ ಸುನೀತಾ ಲೋಕೇಶ್ “ಮಹಿಳಾ ಸಾಹಿತ್ಯದ ಬೆಳವಣಿಗೆ ಹಾಗೂ ಕೊಡಗಿನ ಕಥೆಗಾರ್ತಿ ಗೌರಮ್ಮ ಅವರ ಕಥೆಗಳ ಕುರಿತು ವಿವರಣೆ ನೀಡುತ್ತಾ, ಕೊಡಗಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಬರಹಗಾರರ ಸಂಖ್ಯೆ ವೃದ್ಧಿಸುತ್ತಿರುವುದು ಶ್ಲಾಘನೀಯವಾದುದು” ಎಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಎನ್.ಐ. ಮುನೀರ್ ಅಹ್ಮದ್, “ಮಹಿಳಾ ಬರಹಗಾರರ ಬರವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲಾ ಕ.ಸಾ.ಪ. ವತಿಯಿಂದ ನೀಡುವ ಕೊಡಗಿನ ಪ್ರತಿಷ್ಠಿತ ಪ್ರಶಸ್ತಿಯಾದ ಗೌರಮ್ಮ ದತ್ತಿ ಪ್ರಶಸ್ತಿ ಈ ಬಾರಿ ಕವಿಯಿತ್ರಿ ಕೆ.ಜಿ. ರಮ್ಯ ಅವರ ‘ದಾಹಗಳ ಮೈ ಸವರುತ್ತಾ’ ಎಂಬ ಕವನ ಸಂಕಲನಕ್ಕೆ ಲಭಿಸಿದೆ. ಸ್ವಾತಂತ್ರ್ಯ ಸಂಗ್ರಾಮದ ವೇಳೆಯಲ್ಲಿ ಮಹಾತ್ಮ ಗಾಂಧೀಜಿಯವರ ತತ್ವ, ಆದರ್ಶ ಮೈಗೂಡಿಸಿಕೊಂಡ ಕಥೆಗಾರ್ತಿ ಗೌರಮ್ಮ, ಪ್ರಗತಿಪರ ಚಿಂತನೆ ಮತ್ತು ಆಲೋಚನೆಗಳಿಂದ ತಮ್ಮ ಕಥೆಗಳಲ್ಲಿ ಮಹಿಳೆಯರ ಧ್ವನಿಯನ್ನು ಪ್ರತಿಬಿಂಬಿಸಿದ್ದಾರೆ” ಎಂದರು.

    ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಕೆ.ಜಿ. ರಮ್ಯ, ತಾವು ಕವನ ರಚಿಸಲು ತಮ್ಮ ಪರಿಸರದಲ್ಲಿ ಸಿಕ್ಕಿದ ಪ್ರೇರಣೆ ಹಾಗೂ ಸ್ನೇಹಿತರು ಮತ್ತು ಕುಟುಂಬದ ಸಹಕಾರವನ್ನು ಸ್ಮರಿಸಿದರು. ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಸುನಿಲ್ ಕುಮಾರ್ “ಇಂತಹ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಸಹಕಾರಿಯಾಗಿವೆ” ಎಂದರು.

    ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎಂ. ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪ್ರಶಸ್ತಿ ಪುರಸ್ಕೃತರಾದ ಕೆ.ಜಿ. ರಮ್ಯರವರ ಪರಿಚಯ ಮಾಡಿದರು. ಜಿಲ್ಲಾ ಕ.ಸಾ.ಪ. ಸಮಿತಿ ನಿರ್ದೇಶಕ ಮೆ.ನಾ. ವೆಂಕಟ ನಾಯಕ್, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ಕಡ್ಲೇರ ತುಳಸಿ, ಕುಶಾಲನಗರ ತಾಲೂಕು ಕ.ಸಾ.ಪ. ಅಧ್ಯಕ್ಷ ಕೆ.ಎಸ್. ನಾಗೇಶ್, ಕೋಶಾಧಿಕಾರಿ ಕೆ.ವಿ. ಉಮೇಶ್, ಹೆಬ್ಬಾಲೆ ಹೋಬಳಿ ಕ.ಸಾ.ಪ. ಅಧ್ಯಕ್ಷ ಎಂ.ಎನ್. ಮೂರ್ತಿ, ಕವಿಯಿತ್ರಿ ಅವರ ತಾಯಿ ಬೇಬಿ ಮತ್ತು ಅವರ ಪತಿ ಪ್ರವೀಣ್ ಸೂಡ ಸೇರಿದಂತೆ ಮಹಿಳಾ ಸಾಹಿತಿಗಳು, ಬರಹಗಾರರು, ಕ.ಸಾ.ಪ. ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಎಸ್.ಆರ್. ಚರಣರಾಜ್ ಸ್ವಾಗತಿಸಿ, ತಾಲೂಕು ಕ.ಸಾ.ಪ. ಅಧ್ಯಕ್ಷ ಕೆ.ಎಸ್.ನಾಗೇಶ್ ವಂದಿಸಿ, ಡಾ. ಎಸ್. ಸುನಿಲ್ ಕುಮಾರ್ ನಿರ್ವಹಿಸಿ, ಕವಿಯಿತ್ರಿ ರಮ್ಯ ಅವರ ಕವನಗಳನ್ನು ಸೌಮ್ಯ ಶೆಟ್ಟಿ ಮತ್ತು ಮಂಜುಳಾ ಚಿತ್ತಾಪುರ್ ವಾಚಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆಕರ್ಷ್’ – ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವ
    Next Article ಪರಿಚಯ ಲೇಖನ | ‘ಪ್ರತಿಭಾಪೂರ್ಣ ಚರಣ’ ಚರಣ್ ಗೌಡ ಕಾಣಿಯೂರು
    roovari

    Add Comment Cancel Reply


    Related Posts

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.