Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಕ.ಸಾ.ಪ.ದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ
    Kannada

    ಪುತ್ತೂರಿನ ಕ.ಸಾ.ಪ.ದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ

    July 1, 2024No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ದಿನಾಂಕ 29-6-2024ರಂದು ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮವು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿ “ಗ್ರಾಮ ಮಟ್ಟದ ಸಾಹಿತಿಗಳನ್ನು ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ ಚಟುವಟಿಕೆಗಳನ್ನು ಆಯೋಜನೆ ಮಾಡುವುದರ ಮೂಲಕ ಉತ್ತಮ ಪರಿಣಾಮ ಬೀರಲು ಗ್ರಾಮ ಸಾಹಿತ್ಯ ಸಂಭ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ” ಎಂದು ಆಶಯ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ವಹಿಸಿದ ಕೊಡಿಪ್ಪಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಕುಮಾರಿ ಶಮಿತ ಮಾತನಾಡಿ “ಇದೊಂದು ಶಾಲಾ ಮಕ್ಕಳಿಗೆ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯಕ್ರಮವಾಗಿದ್ದು, ನಮ್ಮಲ್ಲಿರುವ ಪ್ರತಿಭೆಗೆ ಗ್ರಾಮ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೃತಜ್ಞತೆಗಳು’ ಎಂದು ಹೇಳಿದರು. ಸಮಾರಂಭದಲ್ಲಿ ಗ್ರಾಮ ಮಟ್ಟದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಶ್ರೀ ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ, ಶ್ರೀ ಮನ್ಮಥ ಶೆಟ್ಟಿ, ಶ್ರೀ ರವೀಂದ್ರ ಆಚಾರ್ಯ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಹಾಗೂ ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಇವರು ಅಭಿನಂದಿಸಿ ಅಭಿನಂದನಾ ನುಡಿಗಳನ್ನಾಡಿದರು. ಅಭಿನಂದನೆ ಸ್ವೀಕರಿಸಿದವರ ಪರವಾಗಿ ಶ್ರೀ ಮನ್ಮಥ ಶೆಟ್ಟಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯರಾದ ವಾರ್ತಾ ಭಾರತಿ ಪತ್ರಿಕೆಯ ಬೆಂಗಳೂರು ವರದಿಗಾರರಾದ ಶ್ರೀ ಇಬ್ರಾಹಿಂ ಖಲೀಲ್ ಇವರು ಪತ್ರಿಕಾ ವರದಿಯಲ್ಲಿ ಮಾಡಿರುವ ಸಾಧನೆಗಾಗಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಶರೀಫ್ ಇವರು “ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಗೆ ತರಲು ಇದೊಂದು ಒಳ್ಳೆಯ ಆಲೋಚನೆಯಾಗಿದೆ” ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ವಹಿಸಿ ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದ ಕೊಡಿಪ್ಪಾಡಿ ಗ್ರಾಮದ ಮಹಾಜನತೆಗೆ ಧನ್ಯವಾದ ತಿಳಿಸಿದರು.

    ಸಮಾರಂಭದಲ್ಲಿ ಶಿವಮಣಿ ಕಲಾ ತಂಡದ ಶ್ರೀ ಮನುಕುಮಾರ್ ಶಿವನಗರ ಇವರ ಡಿಜಿಟಲ್ ವಾರ ಪತ್ರಿಕೆ ‘ಶಿವಮಣಿ ಕಲಾರಂಗ’ವನ್ನು ಗ್ರಾಮ ಪಂಚಾಯತ್ ಪಿ.ಡಿ.ಒ. ಶ್ರೀ ಶರೀಫ್ ಅವರು ಬಿಡುಗಡೆಗೊಳಿಸಿದರು. ಪುತ್ತೂರಿನ ಉಪತಹಸಿಲ್ದಾರ್ ಕುಮಾರಿ ಸುಲೋಚನಾರವರು ಸಾಹಿತ್ಯ ಪರಿಷತ್ತಿಗೆ 500 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಚಿಗುರೆಲೆ ಸಾಹಿತ್ಯ ಬಳಗದ ಕುಮಾರಿ ಪ್ರತೀಕ್ಷಾ ಆರ್. ಕಾವು ಸ್ವಾಗತಿಸಿ, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ಶ್ರೀ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಂಧ್ಯಾ ಎಸ್. ರೈ ಕಾರ್ಯಕ್ರಮ ನಿರೂಪಿಸಿ, ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಸಾಹಿತ್ಯಕ್ಕೆ ಕೊಡಿಪ್ಪಾಡಿ ಗ್ರಾಮದ ಕೊಡುಗೆ ಕುರಿತು ಶ್ರೀ ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ ಹಾಗೂ ಕನ್ನಡದಲ್ಲೂ ಐ.ಎ.ಎಸ್. ಬರೆಯಿರಿ ಕುರಿತು ಉಪನ್ಯಾಸವನ್ನು ಶ್ರೀ ಪ್ರಣವ್ ಭಟ್ ನೆರವೇರಿಸಿದರು. ತದನಂತರ ಕೊಡಿಪ್ಪಾಡಿ ಮತ್ತು ಅರ್ಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಗಣೇಶ್ ಎಸ್. ಇವರ ಅಧ್ಯಕ್ಷತೆಯಲ್ಲಿ ಬಾಲಕವಿಗೋಷ್ಠಿ, ಶ್ರೀಮತಿ ಸುರೇಖಾ ರೈಯವರ ಅಧ್ಯಕ್ಷತೆಯಲ್ಲಿ ಬಾಲ ಕಥಾಗೋಷ್ಠಿ ಜರಗಿತು. ಉಭಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ನಂತರ ಕೊಡಿಪ್ಪಾಡಿ ಅಂಚೆ ಪಾಲಕರಾದ ಶ್ರೀಮತಿ ಸಹನಾ ಎಸ್.ಎಚ್. ಇವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ವಿಭಾಗದ ಯುವ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ ಯಶಸ್ವಿ ಗಣೇಶ್ ಸೋಮವಾರಪೇಟೆ, ದೇವಿಕಾ ಜೆ.ಜಿ. ಬನ್ನೂರು, ಉಮಾಶಂಕರಿ ಮರಿಕೆ, ಮನುಕುಮಾರ್ ಶಿವನಗರ, ವಿಂಧ್ಯಾ ಎಸ್. ರೈ, ರಶ್ಮಿತಾ ಸುರೇಶ್ ಜೋಗಿಬೆಟ್ಟು, ಗಿರೀಶ್ ಉಪ್ಪಿನಂಗಡಿ, ಅಕ್ಷತಾ ನಾಗನಕಜೆ ಭಾಗವಹಿಸಿದ್ದರು. ಸಮಾರೋಪ ಭಾಷಣದಲ್ಲಿ ಸ.ಹಿ.ಪ್ರಾ. ಶಾಲೆ ಅರ್ಕ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಅನ್ವಿತ ಮಾತನಾಡಿ “ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಸೂಕ್ತವಾದ ವೇದಿಕೆಯಾಗಿದೆ. ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡದ ಬಗ್ಗೆ ತಿಳಿದುಕೊಳ್ಳಬೇಕು. ಹಾಗಾಗಿ ಈ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದರು. ವೇದಿಕೆಯಲ್ಲಿ ಹಿರಿಯ ಸಾಹಿತಿಗಳು ಮಧು ಪ್ರಪಂಚ ಪತ್ರಿಕೆ ಸಂಪಾದಕರಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು. ವಿವಿಧ ಗೋಷ್ಠಿಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಿರಿಧರ್ ಗೌಡ, ಶ್ರೀಮತಿ ಸ್ಮಿತಾ ಪಿ. ಇವರುಗಳು ಗೌರವ ಉಪಸ್ಥಿತರಾಗಿ ಭಾಗವಹಿಸಿದ್ದರು. ಅಲ್ಲದೇ ಗ್ರಾಮ ಪಂಚಾಯತ್ ಕೊಡಿಪ್ಪಾಡಿಯ ಸಿಬ್ಬಂದಿಗಳಾದ ಶ್ರೀ ರವೀಂದ್ರ ಆಚಾರ್ಯ, ಕಿಶನ್ ಕುಮಾರ್ ಮತ್ತು ಶ್ರೀ ಪ್ರಶಾಂತ್ ಅರ್ಕ ಸಹಕರಿಸಿದ್ದರು. ಗೋಷ್ಠಿಗಳನ್ನು ರಶ್ಮಿತಾ ಸುರೇಶ್ ಜೋಗಿಬೆಟ್ಟು, ಅಪೂರ್ವ ಕಾರಂತ್, ಪ್ರತೀಕ್ಷಾ ಆರ್. ಕಾವು, ಅಕ್ಷತಾ ನಾಗನಕಜೆ ನಿರ್ವಹಿಸಿದರು. ಕಾರ್ಯಕ್ರಮ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈದು ನಾಡಗೀತೆಯೊಂದಿಗೆ ಆರಂಭಗೊಂಡು ರಾಷ್ಟ್ರಗೀತೆಯೊಂದಿಗೆ ಸಮಾಪನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಶಂಕರನಾರಾಯಣ ಸಾಮಗರ ಜೀವನ ದರ್ಶನ ಪರಿಚಯಿಸುವ ಕೃತಿ ಲೋಕಾರ್ಪಣೆ
    Next Article ಖ್ಯಾತ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ನಿಧನ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.