Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನರಿಮೊಗರು ಶಾಲೆಯಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -16
    Cultural

    ನರಿಮೊಗರು ಶಾಲೆಯಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -16

    August 21, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಗ್ರಾಮ ಪಂಚಾಯತ್ ನರಿಮೊಗರು ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ-16 ಈ ಕಾರ್ಯಕ್ರಮವು ಶತಸಂಭ್ರಮ ಆಡಿಟೋರಿಯಂ ನರಿಮೊಗರು ಶಾಲೆಯಲ್ಲಿ ದಿನಾಂಕ 24 ಆಗಸ್ಟ್ 2024ರ ಶನಿವಾರ ಬೆಳಿಗ್ಗೆ 9-30 ಗಂಟೆಯಿಂದ ನಡೆಯಲಿದೆ.

    ಈ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಸರಕಾರಿ ಉ. ಹಿ. ಪ್ರಾ. ಶಾಲೆ ನರಿಮೊಗರು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಪೂಜಾಶ್ರೀರವರು ವಹಿಸಲಿದ್ದಾರೆ. ಮಧ್ಯಾಹ್ನ 3-00 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಸ. ಹಿ. ಪ್ರಾ. ಶಾಲೆ ಶಾಂತಿಗೋಡು ಇಲ್ಲಿನ ವಿದ್ಯಾರ್ಥಿ ಧವನ್ ಕುಮಾರ್ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ಪಂಜಳ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ರವಿಚಂದ್ರ ಯು. 20ನೇ ಪುತ್ತೂರು ಕನ್ನಡ ಸಾಹಿತ್ಯ ಸಮ್ಮೇಳನದ ಆಶ್ರಯದಾತರು, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ಭಾಸ್ಕರ ಹಿಂದಾರು, ನರಿಮೊಗರು ಸಿ.ಆರ್.ಪಿ. ಶ್ರೀಮತಿ ಪರಮೇಶ್ವರಿ ಪ್ರಸಾದ್, ನರಿಮೊಗರು ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಕೃಷ್ಣರಾಜ ಜೈನ್. ಡಿ ಉಪಸ್ಥಿತರಿರುವರು.

    ನರಿಮೊಗರು ಮತ್ತು ಶಾಂತಿಗೋಡು ಗ್ರಾಮದ ವಿವಿಧ ಕ್ಷೇತ್ರದ ಸಾಧಕರಾದ ಶ್ರೀ ಅವಿನಾಶ್ ಕೊಡಂಕಿರಿ, ಶ್ರೀ ಪರೀಕ್ಷಿತ್ ತೋಳ್ಪಾಡಿ, ಶ್ರೀಮತಿ ಯಮುನಾ ಪೂಜಾರಿ, ಶ್ರೀ ಸುಧಾಕರ್ ಕುಲಾಲ್, ಶ್ರೀಮತಿ ಸವಿತಾ ಕುಮಾರಿ ಎಂ.ಡಿ , ವಿದ್ವಾನ್ ಗೋಪಾಲಕೃಷ್ಣ , ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ , ಶ್ರೀ. ಜಯರಾಮ ಕೆದಿಲಾಯ ಶಿಬರ, ಶ್ರೀ ಜಯಗುರು ಹಿಂದಾರು, ಶ್ರೀ ತಾರಾನಾಥ್. ಪಿ. ಸವಣೂರು ಇವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿಗಳಾದ ಶ್ರೀ ಲಕ್ಷ್ಮೀಶ್ ತೋಳ್ಪಾಡಿಯವರು ಅಭಿನಂದಿಸಲಿದ್ದಾರೆ.

    ವಿವಿಧ ಗೋಷ್ಠಿಗಳು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯುವ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವಿನೂತನ ಪ್ರಯೋಗಗಳನ್ನು ಹಮ್ಮಿಕೊಂಡಿದ್ದು ಯಶಸ್ವಿಯಾಗಿರುತ್ತದೆ. ಗೋಷ್ಠಿ -1ರಲ್ಲಿ ಕನ್ನಡದಲ್ಲೂ ಐ.ಎ.ಎಸ್. ಬರೆಯಿರಿ ಅಭಿಯಾನದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ, ಗೋಷ್ಠಿ -2ರಲ್ಲಿ ಬಾಲ ಕವಿಗೋಷ್ಠಿ, ಗೋಷ್ಠಿ- 3 ರಲ್ಲಿ ಬಾಲ ಕಥಾಗೋಷ್ಠಿ, ಗೋಷ್ಠಿ-4 ರಲ್ಲಿ ಸಾಹಿತ್ಯ ಆಸಕ್ತಿ ಇಲ್ಲದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ‘ಪ್ರವಾಸ ಕಥನ’ ವಾಚನ ಹಿಂದಿನ ಸಾಹಿತ್ಯ ಸಂಭ್ರಮದಲ್ಲಿ ಅಳವಡಿಸಲಾಗಿದ್ದು ಯಶಸ್ವಿಯಾಗಿದ್ದು ಜನ ಮೆಚ್ಚುಗೆಗೆ ಪಾತ್ರವಾಗಿದೆ, ಗೋಷ್ಠಿ -5ರಲ್ಲಿ ಮಕ್ಕಳನ್ನ ಸಾಹಿತ್ಯ ಮತ್ತು ಬರವಣಿಗೆ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ‘ನನ್ನ ಆಪ್ತ ಮಿತ್ರ’ ಲೇಖನ ವಾಚನ ಗೋಷ್ಠಿಯನ್ನು ಅಳವಡಿಸಿಕೊಳ್ಳಲಾಗಿದೆ.

    ಸಭಾ ಕಾರ್ಯಕ್ರಮದ ಬಳಿಕ ಕನ್ನಡದಲ್ಲೂ ಐ.ಎ.ಎಸ್. ಬರೆಯಿರಿ ಕುರಿತು ಶ್ರೀ ಪ್ರಣವ್ ಭಟ್ ಉಪನ್ಯಾಸ ನೀಡಲಿದ್ದಾರೆ. ನರಿಮೊಗರು ಗ್ರಾಮಕ್ಕೆ ಸಂಬಂಧ ಪಟ್ಟ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು , ಸ. ಉ. ಹಿ. ಪ್ರಾ. ಶಾಲೆ ಮುಕ್ವೆ, ಸ. ಹಿ. ಪ್ರಾ.ಶಾಲೆ ಶಾಂತಿಗೋಡು, ಸ. ಹಿ. ಪ್ರಾ. ಶಾಲೆ ಆನಡ್ಕ, ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು, ಸರಸ್ವತಿ ವಿದ್ಯಾಮಂದಿರ ಪುರುಷರಕಟ್ಟೆ,ಶಾಂತಿಗಿರಿ ವಿದ್ಯಾನಿಕೇತನ ಶಾಲೆ ಪಂಜಳ, ಪಿಎಂಶ್ರೀ ಸ. ಹಿ. ಪ್ರಾ. ಶಾಲೆ ವೀರಮಂಗಲ ಇಲ್ಲಿನ ವಿದ್ಯಾರ್ಥಿಗಳು ವಿವಿಧ ಗೋಷ್ಠಿಗಳಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
    ಬೆಳಗ್ಗೆ 9:30ಕ್ಕೆ ಸರಿಯಾಗಿ ವಿದ್ಯಾರ್ಥಿ ಸರ್ವಾಧ್ಯಕ್ಷರನ್ನು ಗಣ್ಯರಿಂದ ಪೇಟ ತೊಡಿಸಿ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಕರೆತರಲಿದ್ದು, ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಸಂಜೆ 3:30ರ ತನಕ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಅಸ್ಸಾಂನಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಹಾಗೂ ಎನ್. ದೆಬಾಶಿಷ್ ಇವರಿಂದ ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ 
    Next Article ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ | ಆಗಸ್ಟ್ 25
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.