Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ಪುತ್ತೂರು ಬಡಗನ್ನೂರು ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -17
    Cultural

    ಕ.ಸಾ.ಪ. ಪುತ್ತೂರು ಬಡಗನ್ನೂರು ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -17

    October 24, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಬಡಗನ್ನೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡಗನ್ನೂರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-17 ಈ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2024ರ ಶನಿವಾರ ಬೆಳಿಗ್ಗೆ 9-30 ಗಂಟೆಗೆ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಸ.ಉ.ಹಿ.ಪ್ರಾ. ಶಾಲೆ ಬಡಗನ್ನೂರು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ವಿಸ್ಮಿತಾ ಎಂ.ರವರು ವಹಿಸಲಿದ್ದು, ಮಧ್ಯಾಹ್ನ 3-00 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಸರ್ವೋದಯ ಪ್ರೌಢ ಶಾಲೆ ಸುಳ್ಯಪದವು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಫಾತಿಮತ್ ರಮೀಸ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಹೋಬಳಿ ಘಟಕದ ಅಧ್ಯಕ್ಷರಾದ ಕಡಮಜಲು ಸುಭಾಷ್ ರೈ ಅಧ್ಯಕ್ಷತೆ ವಹಿಸಲಿದ್ದು, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ ಎಂ. ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಡಗನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಮೋನಪ್ಪ ಕೆ., ಬಡಗನ್ನೂರು ಸಿ.ಆರ್.ಪಿ. ಶ್ರೀಮತಿ ಶಶಿಕಲಾ ಬಿ., ಸ. ಉ. ಹಿ. ಪ್ರಾ ಶಾಲೆ ಬಡಗನ್ನೂರು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಬಾಬು ಮೂಲ್ಯ ಉಪಸ್ಥಿತರಿರುವರು.

    ಇದೇ ಸಂದರ್ಭದಲ್ಲಿ ಬಡಗನ್ನೂರು ಮತ್ತು ಪಡುವನ್ನೂರು ಗ್ರಾಮದ ವಿವಿಧ ಕ್ಷೇತ್ರದ ಸಾಧಕರಾದ ಶ್ರೀ ಕೆ.ಸಿ. ಪಾಟಾಳಿ, ಶ್ರೀ ಮಹಮ್ಮದ್ ಬಡಗನ್ನೂರು, ಡಾ. ರವೀಶ್ ಪಡುಮಲೆ, ಡಾ. ಹರಿಪ್ರಸಾದ್ ಎಸ್., ಶ್ರೀಮತಿ ಶಂಕರಿ ಪಟ್ಟೆ, ಶ್ರೀ ನಾಗಪ್ಪ ಪಡುಮಲೆ, ಶ್ರೀ ವಿಶ್ವನಾಥ ಪೂಜಾರಿ ಪೂಜಾರಿಮೂಲೆ, ವಿದುಷಿ ಕುದ್ಕಾಡಿ ನಯನ ವಿ. ರೈ, ಶ್ರೀಶಾವಾಸವಿ ತುಳುನಾಡ್ ಇವರುಗಳನ್ನು ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಗುರುಗಳಾದ ಶ್ರೀ ಕೆ. ರಾಮಣ್ಣ ಗೌಡ ಬಸವನಹಿತ್ತಿಲು ಅಭಿನಂದಿಸಲಿದ್ದಾರೆ.

    ವಿವಿಧ ಗೋಷ್ಠಿಗಳು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯುವ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವಿನೂತನ ಪ್ರಯೋಗಗಳನ್ನು ಹಮ್ಮಿಕೊಂಡಿದ್ದು ಯಶಸ್ವಿಯಾಗಿರುತ್ತದೆ. ಗೋಷ್ಠಿ -1 ಕನ್ನಡದಲ್ಲೂ ಐ.ಎ.ಎಸ್. ಬರೆಯಿರಿ ಅಭಿಯಾನದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ, ಗೋಷ್ಠಿ -2 ಬಾಲ ಕವಿಗೋಷ್ಠಿ, ಗೋಷ್ಠಿ-3 ಬಾಲ ಕಥಾಗೋಷ್ಠಿ, ಗೋಷ್ಠಿ -4 ಸಾಹಿತ್ಯ ಆಸಕ್ತಿ ಇಲ್ಲದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ‘ಪ್ರವಾಸ ಕಥನ’ ಲೇಖನ ವಾಚನ, ಗೋಷ್ಠಿ -5ರಲ್ಲಿ ‘ಮಕ್ಕಳನ್ನ ಸಾಹಿತ್ಯ ಮತ್ತು ಬರವಣಿಗೆ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ‘ನನ್ನ ಆಪ್ತಮಿತ್ರ ಲೇಖನ ವಾಚನ’ ಅಲ್ಲದೇ, ಈ ಬಾರಿ ಪ್ರಥಮ ಬಾರಿಗೆ ‘ನನ್ನ ನೆಚ್ಚಿನ ಶಿಕ್ಷಕ/ಶಿಕ್ಷಕಿ’ ಲೇಖನ ವಾಚನ’ ಗೋಷ್ಠಿಯನ್ನು ಅಳವಡಿಸಿಕೊಳ್ಳಲಾಗಿದೆ.

    ಸಭಾ ಕಾರ್ಯಕ್ರಮದ ಬಳಿಕ ಕನ್ನಡದಲ್ಲೂ ಐ.ಎ.ಎಸ್. ಬರೆಯಿರಿ ಕುರಿತು ಶ್ರೀ ಪ್ರಣವ್ ಭಟ್ ಉಪನ್ಯಾಸ ನೀಡಲಿದ್ದಾರೆ. ಬಡಗನ್ನೂರು ಮತ್ತು ಪಡುವನ್ನೂರು ಗ್ರಾಮಕ್ಕೆ ಸಂಬಂಧಪಟ್ಟ ಸ. ಉ. ಹಿ. ಪ್ರಾ. ಶಾಲೆ ಬಡಗನ್ನೂರು, ಸ.ಹಿ. ಪ್ರಾ. ಶಾಲೆ ಪಡುಮಲೆ, ಸ.ಹಿ.ಪ್ರಾ. ಶಾಲೆ ಕೊಯಿಲ, ಸ.ಹಿ.ಪ್ರಾ. ಶಾಲೆ ಸಜಂಕಾಡಿ, ಸರ್ವೋದಯ ಪ್ರೌಢಶಾಲೆ ಸುಳ್ಯಪದವು, ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯಪದವು, ಪ್ರತಿಭಾ ಅನುದಾನಿತ ಪ್ರೌಢ ಶಾಲೆ ಪಟ್ಟೆ, ಶ್ರೀಕೃಷ್ಣ ಅನುದಾನಿತ ಹಿ.ಪ್ರಾ. ಶಾಲೆ ಪಟ್ಟೆ ಇಲ್ಲಿನ ವಿದ್ಯಾರ್ಥಿಗಳು ವಿವಿಧ ಗೋಷ್ಠಿಗಳಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

    ಬೆಳಗ್ಗೆ 9-30 ಗಂಟೆಗೆ ಸರಿಯಾಗಿ ವಿದ್ಯಾರ್ಥಿ ಸರ್ವಾಧ್ಯಕ್ಷರನ್ನು ಗಣ್ಯರಿಂದ ಪೇಟ ತೊಡಿಸಿ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಕರೆತರಲಿದ್ದು, ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಸಂಜೆ ಗಂಟೆ 3-30ರ ತನಕ ಈ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ
    Next Article ಈ ಹೊತ್ತಿಗೆ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.