Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಜಯಲಕ್ಷ್ಮಿ ಶಾನುಭಾಗ್ ರವರ ‘ಗೃಹಾವರಣ’ ಕೃತಿಯ ಲೋಕಾರ್ಪಣೆ
    Literature

    ವಿಜಯಲಕ್ಷ್ಮಿ ಶಾನುಭಾಗ್ ರವರ ‘ಗೃಹಾವರಣ’ ಕೃತಿಯ ಲೋಕಾರ್ಪಣೆ

    April 4, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    04 ಏಪ್ರಿಲ್ 2023, ಮಂಗಳೂರು: ದಿನಾಂಕ 01-04-23ರಂದು ಕರಾವಳಿ ಲೇಖಕಿಯರ-ವಾಚಕಿಯರ ಸಂಘದಲ್ಲಿ ಲೇಖಕಿ ವಿಜಯಲಕ್ಷ್ಮಿ ಶಾನುಭಾಗ್ ರವರ ‘ಗೃಹಾವರಣ’ ಎಂಬ ಕೃತಿಯ ಲೋಕಾರ್ಪಣೆಯ ಕಾರ್ಯಕ್ರಮ ನಡೆಯಿತು.

    ಬೆಸೆಂಟ್ ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ ಇವರು ಕೃತಿಯನ್ನು ಬಿಡುಗಡೆಗೊಳಿಸಿ, “ಗೃಹದೊಳಗಿನ ಹಲವು ಮುಖಗಳು ಕೃತಿಯಲ್ಲಿ ಅನಾವರಣಗೊಂಡಿವೆ. ಮನೆ ಎಂದರೆ ಅದು ಕಲ್ಲು ಕಟ್ಟಡದ ಭೌತಿಕ ಸ್ವರೂಪವಲ್ಲ. ಮನಸ್ಸುಗಳನ್ನು ಬೆಸೆಯುವ ಮೂಲಕ ಸಂಬಂಧಗಳನ್ನು ಹೆಣೆಯುವ ಆಶ್ರಯ ತಾಣ. ‘ಗೃಹಾವರಣ’ ಮನಸ್ಸುಗಳನ್ನು ಬೆಸೆಯುವ ಕಾಯಕ ಗೈದ ಪ್ರೀತಿಯ ಕೃತಿ” ಎಂದರು.

    ಸೈಂಟ್ ಆಗ್ನೆಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಶೈಲಜ ಕೆ. ಇವರು ಕೃತಿಯನ್ನು ಪರಿಚಯ ಮಾಡಿ “ಇವರ ಬರಹಗಳ ಲಾಲಿತ್ಯಮಯ ಶೈಲಿ ಓದುಗರನ್ನು ಸೆಳೆಯುತ್ತದೆ. ಗೃಹಿಣಿ ಗೃಹ ಮುಚ್ಯೆತೆ ಎಂದ ಪ್ರಾಜ್ಞರ ಮಾತನ್ನು ನೆನಪಿಸಿಕೊಂಡು ಗೃಹ ನಿರ್ವಹಣೆಯಲ್ಲಿ ಗೃಹಣಿಯ ಪಾತ್ರ ಮಹತ್ವದ್ದು. ಆಕೆಯ ಸಮಯ, ಶ್ರಮ, ಪ್ರೇಮ, ಮನೆಯೊಳಗಿನ ಭಾವಜಗತ್ತನ್ನು ಅವರಿಸಿಕೊಳ್ಳುತ್ತದೆ” ಎಂದರು.

    ಕೃತಿಯ ಲೇಖಕಿ ವಿಜಯಲಕ್ಷ್ಮಿ ಶಾನುಭಾಗ್ “ಇದು ಉದಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಅಂಕಣ ಬರಹಗಳ ಸಂಕಲಿತ ರೂಪ. ಇದರಿಂದ ಬರಹಗಳ ಅನನ್ಯತೆ ಸಾಧ್ಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳಾಯರು “ಅಡುಗೆ ಮನೆ ಅಧ್ಯಾತ್ಮ ಎಲ್ಲ ಲೇಖಕಿಯರನ್ನು ನಿರಂತರವಾಗಿ ಕಾಡಿದೆ. ಹಾಗಾಗಿ ಹೆಚ್ಚಿನ ಬರಹಗಾರ್ತಿಯರ ಮನೆ ಮತ್ತು ಅಡುಗೆ ಮನೆಯ ಕುರಿತಾದ ವಿಭಿನ್ನ ಸ್ವರೂಪ ಬರಹಗಳು ರಚನೆಗೊಂಡು ಸಾಹಿತ್ಯಲೋಕ ಶ್ರೀಮಂತಗೊಂಡಿದೆ. ಹೆಣ್ಣು ಅಡುಗೆ ಮನೆಯನ್ನು ದಾಟಿ, ಮನೆಯ ಹೊಸ್ತಿಲು ದಾಟಿ ಹೊರ ಜಗತ್ತಿಗೆ ಮುಖಾ ಮುಖಿಯಾದಾಗ ತನ್ನ ಶಕ್ತಿಯನ್ನು ಅರಿಯುತ್ತಾಳೆ. ಇದು ಹೆಣ್ಣಿನ ಶಕ್ತಿಯ ಆತ್ಮಾವಲೋಕನದ ಪರಿ” ಎಂದು ವಿವರಿಸಿದರು.

    ಲೇಖಕಿ ವಿದ್ಯಾ ಗಣೇಶ್ ರವರು ಶುಭಾಂಶಸನೆಗೈದರು. ಸ್ವಾಗತ ಮತ್ತು ಪ್ರಸ್ತಾವನೆ ಶ್ರೀಮತಿ ಅರುಣಾ ನಾಗರಾಜ್ ಇವರಿಂದ ನಡೆಯಿತು. ಶ್ರೀಮತಿ ರಶ್ಮಿ ಅರಸ್ ರವರು ಆಶಯ ಗೀತೆ ಹಾಡಿದರು. ಶ್ರೀಮತಿ ವಿಜಯಲಕ್ಷ್ಮಿ ಕಟೀಲು ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಗೈದರು. ಸಭೆಯಲ್ಲಿ ಕ.ಲೇ.ವಾ. ಸಂಘದ ಸದಸ್ಯರಲ್ಲದೆ ಆಗ್ನೇಸ್ ಕಾಲೇಜಿನ ಕನ್ನಡ ವಿದ್ಯಾರ್ಥಿಗಳೂ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ನಲ್ಲಿ 42ನೇ ‘ಉದಯರಾಗ‘
    Next Article ಪುತ್ತೂರಿನಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.