Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ
    Awards

    ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ

    July 11, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕೇಂದ್ರ, ಶಿವಪ್ರಭಾ, ಶ್ರೀವಾದಿರಾಜ ವನಂ, ಹಯಗ್ರೀವ ನಗರ, ಇಂದ್ರಾಳಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಉಜ್ವಲ್ ಡೆವಲಪರ್ಸ್ ಉಡುಪಿ ಇವರ ಸಹಯೋಗದಲ್ಲಿ ಕೊಡಮಾಡುವ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್(ರಿ.) ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ 2025ನೇ ಸಾಲಿನ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ವೇಷಧಾರಿ ಶ್ರೀಯುತ ವಿದ್ಯಾಧರ ರಾವ್ ಜಲವಳ್ಳಿ ಆಯ್ಕೆಯಾಗಿದ್ದಾರೆ.


    ಈ ಪ್ರಶಸ್ತಿಯು ರೂಪಾಯಿ 10,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ದಿನಾಂಕ 19 ಜುಲೈ 2025ರಂದು ಸಂಜೆ ಘಂಟೆ 3.00ಕ್ಕೆ ಉಡುಪಿ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಬಡಗುತಿಟ್ಟಿನ ಕಲಾವಿದರ ಕೂಡುವಿಕೆಯಿಂದ ‘ಕೃಷ್ಣಾರ್ಜುನ ಕಾಳಗ ಹಾಗೂ ರಾಜಾಭದ್ರಸೇನ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    ಜಲವಳ್ಳಿ ವಿದ್ಯಾಧರ ರಾವ್ :
    ಯಕ್ಷರಂಗದ ಡೈನಾಮಿಕ್ ಸ್ಟಾರ್ ಎಂದೇ ಹೆಸರಾದ ಅಭಿನಯ ಚಕ್ರವರ್ತಿ ಬಿರುದಾಂಕಿತ ಜಲವಳ್ಳಿ ವಿದ್ಯಾಧರ ರಾವ್ ಅವರು ಹೊನ್ನಾವರ ತಾಲೂಕು ಜಲವಳ್ಳಿಯಲ್ಲಿ, ಯಕ್ಷಕಲಾವಿದ ವೆಂಕಟೇಶ್ ರಾವ್ ಮತ್ತು ಕಲ್ಯಾಣಿ ದಂಪತಿಯ ಮಗನಾಗಿ 12 ಜುಲೈ 1972ರಲ್ಲಿ ಜನಿಸಿದರು. ಪ್ರೌಢ ಶಿಕ್ಷಣದ ಬಳಿಕ ತಂದೆಯವರಿಂದ ಯಕ್ಷ ಕಲಾಸಕ್ತಿಯನ್ನು ಮೈಗೂಡಿಸಿಕೊಂಡ ಇವರು, ನಂತರ ಯಕ್ಷಗಾನವನ್ನೇ ಬದುಕಾಗಿಸಿಕೊಂಡರು.

    ಆರಂಭಿಕ ಯಕ್ಷಯಾನದಲ್ಲಿ ಗುಂಡಬಾಳ, ಗೋಳಿಗರಡಿ, ಕಮಲಶಿಲೆ ಮೇಳಗಳಲ್ಲಿ ಕಾಣಿಸಿಕೊಂಡ ಇವರು, ನಂತರ ಸಾಲಿಗ್ರಾಮ, ಪೆರ್ಡೂರು ಮೇಳದ ಕಲಾವಿದನಾಗಿ ಅಪಾರ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ. ವಿದ್ಯಾಧರ ಅವರು ಯಕ್ಷಗಾನ ರಂಗದ ಅಪೂರ್ವ ಕಲಾವಿದರು. ಅವರ ನಿರ್ವಹಣೆ – ನಿರೂಪಣೆಯಲ್ಲಿ, ಪೌರಾಣಿಕ-ನೂತನ ಪ್ರಸಂಗಗಳ ಪಾತ್ರಗಳಲ್ಲಿ ಅವರದೇ ಆದ ಛಾಪು-ರೂಪು, ನಡೆ-ನುಡಿ, ಬೆರಗು-ಮೆರಗು ಸೃಷ್ಟಿಸಿ ಪಾತ್ರಗಳಿಗೆ ಜೀವ ತುಂಬುತ್ತಾರೆ. ಸುಧನ್ವ, ಅರ್ಜುನ, ಕೌರವ, ಮಾಗಧ, ಭಸ್ಮಾಸುರ, ದುಷ್ಟಬುದ್ಧಿ, ಕಂಸ, ಕರ್ಣ, ಕೀಚಕ, ವಿಶ್ವಾಮಿತ್ರ, ಬಲರಾಮ, ಭದ್ರಸೇನ, ವಾಲಿ ಮೊದಲಾದ ಪಾತ್ರಗಳಲ್ಲಿ ಅವರ ನಟನೆಯ ಶೈಲಿ ಅದ್ಭುತವಾದುದು.
    ಇವರ ಯಕ್ಷಲೋಕದ ಸಾಧನೆಗಾಗಿ ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ, ಸನ್ಮಾನ ನೀಡಿ ಗೌರವಿಸಿವೆ. ‘ಯಕ್ಷ ಕಲಾಧರ’ ಪ್ರಶಸ್ತಿ, ‘ಯಕ್ಷರಾಜ’ ಪ್ರಶಸ್ತಿಗಳು ಇವರಿಗೆ ಲಭಿಸಿವೆ.

    award baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ
    Next Article ವಿಶೇಷ ಲೇಖನ – ಸಂಗೀತ ಕಲಾ ಭೂಷಣ ವಿದುಷಿ ನೀಲಮ್ಮ ಕಡಾಂಬಿ
    roovari

    Add Comment Cancel Reply


    Related Posts

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.