Subscribe to Updates

    Get the latest creative news from FooBar about art, design and business.

    What's Hot

    ಆತ್ತಾವರದಲ್ಲಿ 109ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ | ಜುಲೈ 18

    July 16, 2025

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ನಿಧನ

    July 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ಹಾಡೊಂದು ಭಾವ ಹಲವು’ | ಜೂನ್ 23
    Bharathanatya

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ಹಾಡೊಂದು ಭಾವ ಹಲವು’ | ಜೂನ್ 23

    June 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ ಇದರ ತ್ರಿಂಶೋತ್ಸವದ ಅಂಗವಾಗಿ ಅರ್ಪಿಸುವ ‘ನೃತ್ಯಾಮೃತ -5’ ಸರಣಿ ನೃತ್ಯ ಕಾರ್ಯಕ್ರಮವು ದಿನಾಂಕ 23-06-2024ರಂದು ಸಂಜೆ 3-30 ಗಂಟೆಗೆ ಪುತ್ತೂರು ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ.

    ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿಯ ಸಹಕಾರದೊಂದಿಗೆ ಪುತ್ತೂರು ದರ್ಬೆಯ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಇವರ ‘ನೃತ್ಯಾಂತರಂಗ -112’ ಕಾರ್ಯಕ್ರಮದ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮವನ್ನು ಖ್ಯಾತ ವಾಸ್ತು ಇಂಜಿನಿಯರ್ ಮತ್ತು ಪುತ್ತೂರಿನ ನಗರ ಸಭಾ ಸದಸ್ಯರಾದ ಶ್ರೀ ಪಿ.ಜಿ. ಜಗನ್ನಿವಾಸ ರಾವ್ ಇವರು ಉದ್ಘಾಟಿಸಲಿದ್ದು, ಯಕ್ಷಗಾನ ಕಲಾವಿದ ಅರ್ಥಧಾರಿ ಶ್ರೀ ಹರೀಶ ಬಳಂತಿಮೊಗರು ಅವರ ಅಧ್ಯಕ್ಷತೆಯಲ್ಲಿ ‘ಹಾಡೊಂದು ಭಾವ ಹಲವು’ ಕಾರ್ಯಕ್ರಮ ಜರುಗಲಿದೆ.

    ಪುತ್ತೂರಿನ ವಿಶ್ವಕಲಾ ನಿಕೇತನ ನೃತ್ಯ ಶಾಲೆಯ ನಿರ್ದೇಶಕಿ ವಿದುಷಿ ನಯನ ವಿ. ರೈ, ನೃತ್ಯಾಂಜಲಿ ಜ್ಯೋತಿಗುಡ್ಡೆಯ ನಿರ್ದೇಶಕಿ ವಿದುಷಿ ಮಲ್ಲಿಕಾ ವೇಣುಗೋಪಾಲ್, ಕೃಷಿಕರಾದ ಶ್ರೀಮತಿ ಚಿತ್ರಾ ಭಿಡೆ ಹಾಗೂ ನಾಟ್ಯಾರಾಧನಾದ ಹಿರಿಯ ವಿದ್ಯಾರ್ಥಿ ವಿದ್ವಾನ್ ಶೋಧನ್ ಕುಮಾರ್ ಬಿ. ಇವರುಗಳು ಗೌರವ ಅಭ್ಯಾಗತರಾಗಿ ಆಗಮಿಸಲಿದ್ದಾರೆ.

    ಉದ್ಘಾಟನೆಯ ಬಳಿಕ ವಿದುಷಿ ಸುಮಂಗಲಾ ರತ್ನಾಕರ ರಾವ್,ಮಂಗಳೂರು, ವಿದ್ವಾನ್ ಬಿ. ದೀಪಕ್ ಕುಮಾರ್ ಪುತ್ತೂರು, ವಿದುಷಿ ಅನು ಧೀರಜ್ ಬೆಂಗಳೂರು, ವಿದುಷಿ ಅಕ್ಷತಾ ಕೆ. ಪುತ್ತೂರು ಹಾಗೂ ಕು. ಧರಿತ್ರಿ ಭಿಡೆ ಕಲ್ಮಂಜ ಇವರಿಂದ ಒಂದೇ ಸಾಹಿತ್ಯಕ್ಕೆ ವಿವಿಧ ಆಯಾಮಗಳಲ್ಲಿ ನಡೆಯುವ ಏಕವ್ಯಕ್ತಿ ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆಯೆಂದು ನಾಟ್ಯಾರಾಧನಾ ಕಲಾಕೇಂದ್ರದ ಟ್ರಷ್ಠಿಗಳಾದ ವಿದುಷಿ ಸುಮಂಗಲಾ ರತ್ನಾಕರ್ ರಾವ್, ಶ್ರೀ ರತ್ನಾಕರ ರಾವ್, ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಮತ್ತು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಶ್ರೀ ದೀಪಕ್ ಕುಮಾರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಲಲಿತ ಪ್ರಬಂಧಗಳ ಆಹ್ವಾನ | ಜುಲೈ 31
    Next Article ನಿಂಜೂರು ಘಟಕದ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ 
    roovari

    Add Comment Cancel Reply


    Related Posts

    ಅಂಬ್ಲಮೊಗರು ಸರಕಾರಿ ಪ್ರೌಢ ಶಾಲೆಯಲ್ಲಿ ‘ಕನ್ನಡ ನವೋದಯ ಸಂಭ್ರಮ’ | ಜುಲೈ 17

    July 16, 2025

    ಉಡುಪಿಯಲ್ಲಿ ‘ನೃತ್ಯ ರಂಗದಲ್ಲಿ ಬೆಳಕಿನ ವಿನ್ಯಾಸ’ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ | ಜುಲೈ 20

    July 16, 2025

    ಬೆಂಗಳೂರಿನಲ್ಲಿ ಯಕ್ಷಗಾನ ಪ್ರಸಂಗಕರ್ತ ದಿನೇಶ್ ಉಪ್ಪೂರ ಇವರಿಗೆ ಸನ್ಮಾನ

    July 16, 2025

    ವಿಶ್ವದಾಖಲೆ ಮೂಡಿಸಿರುವ ಗಾಯಕನಿಗೆ ‘ಯಶೋಭಿನಂದನೆ’ ಸನ್ಮಾನ ಸಮಾರಂಭ

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.