Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಿ.ಹಳ್ಳಾಡಿ ಸುಬ್ರಾಯ ಮಲ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 08
    Awards

    ದಿ.ಹಳ್ಳಾಡಿ ಸುಬ್ರಾಯ ಮಲ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 08

    February 2, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಸುಮುಖ ಕಲಾ ಕೇಂದ್ರ (ರಿ.) ಇದರ ಏಳನೇ ವಾರ್ಷಿಕೋತ್ಸವ ಮತ್ತು ದಿ.ಹಳ್ಳಾಡಿ ಸುಬ್ರಾಯ ಮಲ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 08 ಫೆಬ್ರವರಿ 2025ರ ಶನಿವಾರದಂದು ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆಯಲಿದೆ.
    ಸುಮುಖ ಕಲಾ ಕೇಂದ್ರದ ಅಧ್ಯಕ್ಷರಾದ ಎಂ. ಎಂ. ರವಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶಿವಮೊಗ್ಗದ ಸಲಹಾ ವೈದ್ಯರಾದ ಡಾ. ರತ್ನಾಕರ ಇವರು ಉದ್ಘಾಟಿಸಲಿದ್ದಾರೆ. ಭದ್ರಾವತಿಯ ಭದ್ರಾ ನರ್ಸಿಂಗ್ ಹೋಮ್ ಇದರ ಡಾ. ಟಿ. ನರೇಂದ್ರ ಭಟ್, ಕರ್ನಾಟಕ ಕೊಂಕಣಿ ಅಕಾಡಮಿಯ ಮಾಜಿ ಸದಸ್ಯರಾದ ಬಿ. ಎಸ್. ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆ. ಜಿ. ರಾಮರಾವ್ ಸಾಕೇಶ ಕಲಾವಿದರು ಕೆಳಮನೆ ಇವರಿಗೆ ದಿ. ಹಳ್ಳಾಡಿ ಸುಬ್ರಾಯ ಮಲ್ಯ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಭ್ಯುದಯ ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿ ಅಭಿನಂದನಾ ಭಾಷಣಗೈಯ್ಯಲ್ಲಿದ್ದಾರೆ.
    ಸಭಾಕಾರ್ಯಕ್ರಮದ ಬಳಿಕ ಶಿವಮೊಗ್ಗದ ಕಿರಣ ಆರ್. ಪೈ ಇವರ ನಿರ್ದೇಶನದಲ್ಲಿ ಮಕ್ಕಳಿಂದ ‘ದುಶ್ಯಾಸನ ವಧೆ-ವೃಷಸೇನ ಕಾಳಗ’ ಯಕ್ಷಗಾನ ಬಯಲಾಟ ನಡೆಯಲಿರುವುದು. ಪ್ರಸಂಗದ ಅರ್ಥ ಹಾಗೂ ಭಾಗವತಿಕೆಯನ್ನು ಐನಬೈಲು ಪರಮೇಶ್ವರ ಹೆಗಡೆ ನಿರ್ವಹಿಸಲಿದ್ದು, ಇವರಿಗೆ ಮದ್ದಳೆಯಲ್ಲಿ ಮಂಜುನಾಥ ಗುಡ್ಡದಿಂಬ, ಚಂಡೆಯಲ್ಲಿ ಎಚ್. ರಾಕೇಶ್ ಮಲ್ಯ ಹಳ್ಳಾಡಿ ಸಹಕರಿಸಲಿದ್ದಾರೆ. ಸಿದ್ದಾಪುರದ ಎಮ್. ಆರ್. ನಾಯಕ ಪ್ರಸಾಧನದಲ್ಲಿ ಸಹಕರಿಸಲಿದ್ದು, ಮುಮ್ಮೇಳದಲ್ಲಿ ಸೌಪರ್ಣಿಕಾ, ಶ್ರಾವಣಿ, ವಾರಿಧಿ, ಅನೂಷ, ಶೀತಲ್, ಅನನ್ಯ, ಮಣಿಕಂಠ, ಪ್ರೀತಂ , ಶ್ರೇಯಾ, ಸಂಜನಾ, ಯಾಮಿನಿ ಹಾಗೂ ಪರಿಣಿತಾ ಪಾತ್ರ ನಿರ್ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಸುಮುಖ ಕಲಾ ಕೇಂದ್ರ ಸರ್ವರನ್ನು ಸ್ವಾಗತಿಸುತ್ತಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನುಡಿನಮನ
    Next Article ಸಮಾರೋಪಗೊಂಡ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ’
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.