ಉಡುಪಿ : ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ಕಲಾತಂಡವು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಸಾರ್ವಜನಿಕ ಅರಿವು ಮತ್ತು ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ, ಕರ್ನಾಟಕ ರಾಜ್ಯ ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞರ ಸಂಘ, ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞರ ಸಂಘ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮಹಿಳಾ ವೇದಿಕೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಜೆ.ಸಿ.ಐ. ಉಡುಪಿ ಸಿಟಿ ಸಹಯೋಗದಲ್ಲಿ ಉಡುಪಿ ಜಿಲ್ಲೆಯ 30 ಕಡೆ ಯಶಸ್ವಿಯಾಗಿ ಪ್ರದರ್ಶಿಸಿದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟಕವು ದಿನಾಂಕ 23 ಡಿಸೆಂಬರ್ 2025ರಂದು ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.
ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ಗೌರವಾಧ್ಯಕ್ಷರಾದ ಶ್ರೀ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಹೆಚ್.ಪಿ., ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಉಡುಪಿಯ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಐ.ಎಂ.ಎ. ಉಡುಪಿ – ಕರಾವಳಿಯ ಅಧ್ಯಕ್ಷರಾದ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ, ಕೋಶಾಧಿಕಾರಿ ಡಾ. ಸನತ್ ರಾವ್, ಪೂರ್ವ ಅಧ್ಯಕ್ಷ ಡಾ. ರಾಜಲಕ್ಷ್ಮಿ, ಮಹಿಳಾ ವಿಭಾಗದ ಅಧ್ಯಕ್ಷೆ ಡಾ. ವಿಜಯ, ನಿರ್ದೇಶಕ ರಾಮಾಂಜಿ ನಮ್ಮಭೂಮಿ, ಕಲಾವಿದರಾದ ಪದ್ಮಾಸಿನಿ ಉದ್ಯಾವರ, ಕ.ಸಾ.ಪ. ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಸದಸ್ಯರಾದ ದೀಪಾ ಕರ್ಕಿ, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ, ಸುಮಿತ್ರ ಕೆರೇಮಠ, ಆರೋಗ್ಯ ಶುಶ್ರುಷಕಿ ಮಮತಾ, ಕಾಲೇಜಿನ ನಿರ್ದೇಶಕರಾದ ಶ್ರೀಮತಿ ಆಶಾ ಕುಮಾರಿ, ಪ್ರಾಚಾರ್ಯರಾದ ಪ್ರಭಾ ಕಾಮತ್, ಬೀದಿ ನಾಟಕದ ಸಂಯೋಜಕ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ.ಜಿ., ಉಪನ್ಯಾಸಕರಾದ ರಾಜೇಶ್ ಕುಮಾರ್, ಜೆ.ಸಿ.ಐ. ಉಡುಪಿ ಸಿಟಿ ಅಧ್ಯಕ್ಷ ಪಲ್ಲವಿ, ಕೊಡಗು ಮುಖ್ಯಸ್ಥರಾದ ಕಾವ್ಯವಾಣಿ, ಕೊಡಗು ರಫೀಕ್ ಖಾನ್, ಶಕೀರ್ ಅಹಮದ್, ಜಗದೀಶ್ ಶೆಟ್ಟಿ, ಬೀದಿನಾಟಕದ ವಿದ್ಯಾರ್ಥಿ ಸಂಚಾಲಕ ವಿನಾಯಕ, ಪ್ರಧಾನ್, ವಿದ್ಯಾರ್ಥಿ ಕಲಾವಿದರಾದ ಶ್ರೇಯಾ, ವಿನಾಯಕ್, ಕೃತಿಕಾ, ನಂದೀಶ್, ಸನ್ನಿಧಿ , ಶಿವಾಲಿಕ, ನೇಮಾಭಾರತಿ, ಅಚ್ಚುತ ಉಪಸ್ಥಿತರಿದ್ದರು.
