Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದಲ್ಲಿ ‘ದಿವ್ಯದೃಷ್ಟಿಯ ಗಾಂಧಾರಿ’ ಕೃತಿ ಬಿಡುಗಡೆ ಸಮಾರಂಭ

    August 4, 2025

    ವಿಪ್ರ ವೇದಿಕೆಯ ದಶಮ ಸಂಭ್ರಮದ ಮೂರನೇ ಸರಣಿ ಕಾರ್ಯಕ್ರಮ

    August 4, 2025

    ಎಡನೀರಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮ

    August 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಸ್ಕರ್ ಕೊಗ್ಗ ಕಾಮತ್‌ರಿಗೆ ‘ಹೆರಿಟೇಜ್ ಪ್ರಶಸ್ತಿ’
    Awards

    ಭಾಸ್ಕರ್ ಕೊಗ್ಗ ಕಾಮತ್‌ರಿಗೆ ‘ಹೆರಿಟೇಜ್ ಪ್ರಶಸ್ತಿ’

    October 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ: ಗೊಂಬೆಯಾಟದ ಉಳಿವಿಗಾಗಿ ಶ್ರಮಿಸುತ್ತಿರುವ ಉಪ್ಪಿನಕುದ್ರು ‘ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ’ಯ ನೇತಾರ ಹಾಗೂ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಇವರು ಹೆರಿಟೇಜ್, ಮ್ಯೂಜಿಯಂ ಮತ್ತು ಡಾಕ್ಯೂಮೆಂಟೇಶನ್ ಸೆಂಟರ್ಸ್ ಕಮಿಷನ್ ಆಫ್ ಯುನಿಮಾ ಇಂಟರ್ನ್ಯಾಷನಲ್ ಇದರಿಂದ ಕೊಡಮಾಡುವ “ಹೆರಿಟೇಜ್ ಪ್ರಶಸ್ತಿ 2024’ಕ್ಕೆ ಭಾಜನರಾಗಿದ್ದಾರೆ. ಕರಾವಳಿ ಜಾನಪದ ರಂಗ ಕಲೆಗಳಲ್ಲಿ ಉಪ್ಪಿನಕುದ್ರು ಯಕ್ಷಗಾನ ಸೂತ್ರದ ಗೊಂಬೆಯಾಟ ಕಲೆ ಅತೀ ವಿಶೇಷ ಹಾಗೂ ವಿಶಿಷ್ಟವಾದದ್ದು. 350 ವರ್ಷದ ಹಿಂದೆ ಪ್ರಾರಂಭಗೊಂಡು ಇಂದಿಗೆ 6ನೇ ತಲೆಮಾರಿನಲ್ಲಿ ನಡೆಯುತ್ತಿರುವ ಈ ಕಲೆ ಭಾಸ್ಕರ ಕಾಮತ್ ಅವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.
    ಸರಕಾರದ ಯಾವುದೇ ಧನಸಹಾಯ ನಿರೀಕ್ಷಿಸದೇ ಮುಂದುವರಿಯುತ್ತಿರುವ ಈ ಜಾನಪದ ಕಲೆ ಅನೇಕ ಮಹತ್ತರ ಕಾರ್ಯಗಳನ್ನು ಮಾಡುವ ಮೂಲಕ ಕಲಾಸಕ್ತರ ಗಮನ ಸೆಳೆದಿದೆ. ಉಪ್ಪಿನಕುದ್ರು ಗ್ರಾಮದಲ್ಲಿ “ಗೊಂಬೆಯಾಟ ಅಕಾಡೆಮಿ” ಚಿಂತನೆಯಡಿ ನಿರಂತರವಾಗಿ ತನ್ನ ಸೇವೆಯನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಗೊಂಬೆಯಾಟ ಹೊರತುಪಡಿಸಿ ವಿವಿಧ ಕಲೆಗಳಿಗೂ ವೇದಿಕೆಯಾಗಿದ್ದು ಅದರ 100ನೇ ತಿಂಗಳ ಕಾರ್ಯಕ್ರಮದ ಹೊತ್ತಿನಲ್ಲಿಯೇ ಭಾಸ್ಕರ್ ಕಾಮತ್ ಅವರಿಗೆ ಹೆರಿಟೇಜ್ ಪ್ರಶಸ್ತಿ ದೊರೆತಿದೆ. ಹೆರಿಟೇಜ್ ಪ್ರಶಸ್ತಿ ಪ್ರದಾನ ಸಮಾರಂಭವು ಸೌತ್ ಕೊರಿಯಾದಲ್ಲಿ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ಹೊಸ ನಾಟಕ ತಯಾರಿ ಶಿಬಿರ’ದ ಉದ್ಘಾಟನಾ ಸಮಾರಂಭ
    Next Article ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಾ. ಕೆ. ಶಿವರಾಮಕಾರಂತರ 122ನೆಯ ಜನ್ಮದಿನಾಚರಣೆ
    roovari

    Add Comment Cancel Reply


    Related Posts

    ಪಂಚ ಸಾಧಕರಿಗೆ ‘ಕಲ್ಲಚ್ಚು ಪ್ರಕಾಶನ’ದ 2025ರ ‘ಕಲ್ಲಚ್ಚು ಪ್ರಶಸ್ತಿ’ | ಆಗಸ್ಟ್ 31

    August 4, 2025

    ಶ್ರೀ ಸುಬ್ರಹ್ಮಣ್ಯ ಮಠದ ಅನಿರುದ್ಧ ತೀರ್ಥ ವೇದಿಕೆಯಲ್ಲಿ ತಾಳಮದ್ದಳೆ

    August 4, 2025

    ಡಾ. ಸುರೇಶ ನೆಗಳಗುಳಿ ಇವರಿಗೆ ‘ನಮ್ಮ ವೈದ್ಯೋ ನಾರಾಯಣ’ ಪ್ರಶಸ್ತಿ

    August 2, 2025

    ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಯಕ್ಷಗಾನ ತರಗತಿಗಳ ಉದ್ಘಾಟನೆ

    August 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.