Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಚಿಕಿತ್ಸಕ ದೃಷ್ಟಿಕೋನದ ನಾಟಕ ಕೃತಿ ‘ಸುಳ್ಳೇ ನಮ್ಮನೆ ದೇವರು’

    December 23, 2025

    ಪ್ರಶಸ್ತಿಗೆ ಕಾದಂಬರಿ ಆಹ್ವಾನ | ಕೊನೆಯ ದಿನಾಂಕ ಜನವರಿ 30

    December 23, 2025

    ರಜತ ವರ್ಷದ ಪ್ರಯುಕ್ತ ‘ನೃತ್ಯ ಪರಂಪರಾ’ ಭರತನಾಟ್ಯ ಪ್ರಾತ್ಯಕ್ಷಿಕೆ

    December 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ
    Music

    ಕಾರ್ಕಳದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ

    December 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕಾಂತಾವರ ಕನ್ನಡ ಸಂಘದ 50ರ ಸಂಭ್ರಮದ ಪ್ರಯುಕ್ತ ಕಾರ್ಕಳದ ಶಾಸ್ತ್ರೀಯ ಸಂಗೀತ ಸಭಾದ ಸಹಯೋಗದಲ್ಲಿ ದಿನಾಂಕ 20 ಡಿಸೆಂಬರ್ 2025ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಭವನದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮವು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಕಲಾಶ್ರೀ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ನಿವೃತ್ತ ಉಡುಪಿಯ ಜಿಲ್ಲಾಧಿಕಾರಿಗಳೂ ಆಗಿರುವ ಡಾ. ಮುದ್ದು ಮೋಹನ್ ಇವರು ಮಾತನಾಡಿ “ಅವಿಭಜಿತ ದ.ಕ. ಜಿಲ್ಲೆಯ ಜನತೆಯೂ ಕಲೆ, ಸಂಸ್ಕೃತಿ, ಸಂಗೀತವನ್ನು ಆರಾಧಿಸುವವರಾಗಿದ್ದು ಕಲಾವಿದರಿಗೆ ಅವರು ನೀಡುವ ಗೌರವ, ಪ್ರೋತ್ಸಾಹ ಬೇರೆಲ್ಲೂ ಕಾಣಸಿಗದು. ಈ ಜಿಲ್ಲೆಯ ಜನರ ಪ್ರೀತಿ, ಹೃದಯ ಶ್ರೀಮಂತಿಕೆಗೆ ನಾನು ಮಾರುಹೋಗಿದ್ದೇನೆ” ಎಂದು ತಿಳಿಸಿದರು.

    ಶಾಸ್ತ್ರೀಯ ಸಂಗೀತ ಸಭಾ ಇದರ ಸ್ಥಾಪಕ ಕಾರ್ಯದರ್ಶಿಗಳಾದ ಡಾ. ಪ್ರಕಾಶ್ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಮುದ್ದು ಮೋಹನ್ ಇವರಿಗೆ ಸಹ ವಾದ್ಯ ಸಹಾಯಕರಾಗಿ ಹಾರ್ಮೋನಿಯಂನಲ್ಲಿ ಶ್ರೀ ಪಂಚಾಕ್ಷರಿ ಹಿರೇಮಠ, ತಬಲಾದಲ್ಲಿ ಶ್ರೀ ಕೇಶವ ಜೋಶಿ ಬೆಂಗಳೂರು, ವಯಲಿನ್‌ನಲ್ಲಿ ಟಿ. ರಂಗ ಪೈ, ತಂಬೂರಿಯಲ್ಲಿ ಉಡುಪಿಯ ಸಪ್ನಾರಾಜ್ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮುನ್ನ ಐದು ಕಲಾವಿದರನ್ನು ಕೂಡಾ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ದಿವಾಕರ್ ಕುಮಾರ್, ರತ್ನಾಕರ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿ, ಡಾ. ನಾ. ಮೊಗಸಾಲೆ ಸ್ವಾಗತಿಸಿ, ನಿತ್ಯಾನಂದ ಪೈ ವಂದಿಸಿದರು.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ಯಕ್ಷದೇಗುಲದ ವತಿಯಿಂದ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ | ಡಿಸೆಂಬರ್ 25
    Next Article ಬಿ.ಸಿ. ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ‘ರಾರಾ ಸಂಭ್ರಮ’ | ಡಿಸೆಂಬರ್ 25
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಚಿಕಿತ್ಸಕ ದೃಷ್ಟಿಕೋನದ ನಾಟಕ ಕೃತಿ ‘ಸುಳ್ಳೇ ನಮ್ಮನೆ ದೇವರು’

    December 23, 2025

    ಪ್ರಶಸ್ತಿಗೆ ಕಾದಂಬರಿ ಆಹ್ವಾನ | ಕೊನೆಯ ದಿನಾಂಕ ಜನವರಿ 30

    December 23, 2025

    ರಜತ ವರ್ಷದ ಪ್ರಯುಕ್ತ ‘ನೃತ್ಯ ಪರಂಪರಾ’ ಭರತನಾಟ್ಯ ಪ್ರಾತ್ಯಕ್ಷಿಕೆ

    December 23, 2025

    ರಾಜ್ಯಮಟ್ಟದ ಪುತ್ತರಿ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 25

    December 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.