Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ ಹಾಗೂ ಸಂಘಟಕ ಸಿಕೇರಾಮ್ ಇವರಿಗೆ ನುಡಿನಮನ
    Literature

    ಸಾಹಿತಿ ಹಾಗೂ ಸಂಘಟಕ ಸಿಕೇರಾಮ್ ಇವರಿಗೆ ನುಡಿನಮನ

    June 8, 2024No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಇವರಿಗೆ ನುಡಿನಮನ ಕಾರ್ಯಕ್ರಮವು ಅವರ 70ನೇ ಜನ್ಮದಿನವಾದ 05-06-2024ರ ಬುಧವಾರ  ಸಂಜೆ ಮಂಗಳೂರಿನ ಬೆಂದೂರ್ ಮಿನಿ ಸಭಾಗೃಹದಲ್ಲಿ ನಡೆಯಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ  ಪುಟಾಣಿ ಜೊಅನ್ ನೈರಾ ಮೊರಾಸ್ ಭಾವಚಿತ್ರಕ್ಕೆ ಪುಷ್ಪಾರ್ಚನೆ   ಮಾಡುವುದರ ಮೂಲಕ ನುಡಿನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಸಿಕೇರಾಮ್ ಸುರತ್ಕಲ್ ಕಾವ್ಯನಾಮದಿಂದಲೇ ಖ್ಯಾತರಾಗಿರುವ ರೊನಾಲ್ಡ್ ಜೋಸೆಫ್ ಸಿಕ್ವೇರಾ ಇವರ ಬದುಕಿನ ಬಗ್ಗೆ ಶ್ರೀಮತಿ ಎವ್ಲಾಲಿಯಾ ಡಿ ಸೊಜಾ ಮಾತನಾಡಿ ಅವರ ಅಪರೂಪದ, ಜನಾನುರಾಗಿ – ಜೀವನೋತ್ಸಾಹಿ ವ್ಯಕ್ತಿತ್ವದ ವಿಭಿನ್ನಮಜಲುಗಳನ್ನು ತೆರೆದಿಟ್ಟರು. ” ರೊನಾಲ್ಡ್  ಹನ್ನೆರಡು ಭಾಷೆಗಳನ್ನು ಬಲ್ಲವರಾಗಿದ್ದು, ಕೊಂಕಣಿ – ಕನ್ನಡ ಮಾತ್ರವಲ್ಲ ಹಿಂದೀ ಗೀತೆಗಳ ಬಗ್ಗೆಯೂ ಅವರಿಗೆ ಅಪಾರ ಜ್ಞಾನವಿತ್ತು. ವಿಲ್ಪಿ ರೆಬಿಂಬಸ್ ಹಾಗೂ ಮೊಹಮ್ಮದ್ ರಫೀ ಹಾಡುಗಳೆಲ್ಲವೂ ಅವರಿಗೆ ಕಂಠಪಾಠ ಇದ್ದವು. ಇಳಿವಯಸ್ಸಿನಲ್ಲೂ ತಬ್ಲಾ ತರಗತಿಗೆ ಹಾಜರಾಗುತ್ತಿದ್ದರು. ಅಮೆಚೂರ್ ರೇಡಿಯೊ ಕ್ಲಬ್ ಸದಸ್ಯರಾಗಿದ್ದ ಅವರು ಹ್ಯಾಮ್ ರೇಡಿಯೊ ಹೊಂದಿದ್ದರು. ಇಂಟರ್‌ನ್ಯಾಶನಲ್ ಟೋಸ್ಟ್ ಮಾಸ್ಟರ್ ಕ್ಲಬ್ ಸದಸ್ಯರಾಗಿದ್ದರು. ಸದ್ದಿಲ್ಲದೇ ಎಷ್ಟೋ ಬಡವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತಿದ್ದರು. ಅವರ ಸಂಪರ್ಕಕ್ಕೆ ಬರುವ  ಪ್ರತೀಯೊಬ್ಬರ ಜನ್ಮದಿನ, ವಿವಾಹ ವಾರ್ಷಿಕೋತ್ಸವ ಮತ್ತು ಪ್ರತೀ ವಿಶೇಷ ದಿನವನ್ನು ನೆನಪಿಟ್ಟುಕೊಂಡು ತಪ್ಪದೇ ಮೊತ್ತ ಮೊದಲು ಶುಭಕೋರುತ್ತಿದ್ದರು” ಎಂದರು.

    ಸಿಕೇರಾಮ್ ಸುರತ್ಕಲ್ ಅವರ ಸಣ್ಣಕತೆ ಮತ್ತು ಲಲಿತ ಸಾಹಿತ್ಯದ ಬಗ್ಗೆ ‘ಆರ್ಸೊ’ ಪತ್ರಿಕೆಯ ಸಂಪಾದಕ ಕವಿ ವಿಲ್ಸನ್ ಕಟೀಲ್ ಮಾತನಾಡಿ “ಅವರ ಪ್ರತೀ ಸಣ್ಣಕತೆಯಲ್ಲಿ ಕೃಷಿಪ್ರಧಾನ ಕುಟುಂಬದ ಪುರುಷ ಹಾಗೂ ಮಹಿಳೆಯರೇ ಪ್ರಧಾನ ಪಾತ್ರವಾಗಿರುತ್ತಿದ್ದರು. ರೈತ ಉಳುಮೆಯ ಹೊತ್ತಿನಲ್ಲಿ ಉಪಯೋಗಿಸುವ ಬೆತ್ತವನ್ನೂ ಪ್ರತಿಮೆಯಾಗಿ ಬಳಸಿ ಕಥೆಯೊಳಗೂ ಕಾವ್ಯ ಕಟ್ಟುವ ಅಪರೂಪದ ಗುಣ ಅವರ ಬರವಣಿಗೆಯಲ್ಲಿತ್ತು. ಕಥೆ ಹಾಗೂ ಲಲಿತ ಬರಹಗಳ ತುಲನೆಯಲ್ಲಿ ಅವರು ಬರೆದ ಕವಿತೆಗಳ ಸಂಖ್ಯೆ ಕಡಿಮೆಯಾದರೂ, ಸಮಕಾಲೀನ ಕೊಂಕಣಿ ಕಾವ್ಯದ ಸಂದರ್ಭದಲ್ಲಿ ಗಮನಾರ್ಹ ಕವಿತೆಗಳನ್ನು ಅವರು ಬರೆದಿದ್ದಾರೆ.” ಎಂದರು.

    ಇದೇ ಸಂದರ್ಭದಲ್ಲಿ ವಿಲ್ಸನ್ ಕಟೀಲ್ ಸಂಪಾದಕತ್ವದಲ್ಲಿ ಸಿಕೇರಾಮ್ ಜೀವನ ಮತ್ತು ಸಾಹಿತ್ಯದ ಬಗ್ಗೆ ‘ಆರ್ಸೊ’ ಎಂಬ ವಿಶೇಷ ಸಂಚಿಕೆಯನ್ನು ಕವಿತಾ ಟ್ರಸ್ಟ್ ಇದರ ಅಧ್ಯಕ್ಷರಾದ ಕತೆಗಾರ ಕಿಶೂ ಬಾರ್ಕೂರ್ ಬಿಡುಗಡೆಗೊಳಿಸಿದರು. ಪತ್ರಿಕೆಯ ಪ್ರಕಾಶಕ ಎಚ್. ಎಮ್. ಪೆರ್ನಾಲ್, ವಿನ್ಯಾಸಕ ಎಡ್ಡಿ ಸಿಕ್ವೇರಾ, ಸಂಪಾದಕ ಮಂಡಳಿ ಸದಸ್ಯರಾದ ರೋಶು ಬಜ್ಪೆ, ಸ್ಟ್ಯಾನಿ ಬೇಳ ಮತ್ತು ಅಲ್ಪೋನ್ಸ್ ಮೆಂಡೋನ್ಸಾ ಹಾಜರಿದ್ದರು.

     

    ಮಂಗಳೂರು ಅಮೆಚೂರ್ ರೇಡಿಯೊ ಕ್ಲಬ್ ಪಧಾಧಿಕಾರಿ ಮತ್ತು ಸದಸ್ಯರು ಹಾಜರಿದ್ದು ಅಗಲಿದ ಕ್ಲಬ್ ಸದಸ್ಯ ರೊನಾಲ್ಡ್ ಸಿಕ್ವೇರಾ ಬರೆದ ‘ನಿನ್ನ ಕಾಣುವ ಹಂಬಲ’ ಗೀತೆಯನ್ನು ಎನ್. ಐ. ಟಿ. ಕೆ. ಇಲ್ಲಿನ ಪ್ರಾಧ್ಯಪಕ ಡಾ. ಲಕ್ಷ್ಮೀನಿಧಿ ರಾಗ ಸಂಯೋಜಿಸಿ ಹಾಡಿದರು. ರೇಡಿಯೊ ಕ್ಲಬ್ಬಿನ ಇನ್ನೋರ್ವ ಸದಸ್ಯ ಎನ್. ಐ. ಟಿ. ಕೆ.  ಪ್ರಾಧ್ಯಪಕ ಡಾ. ಕೆ. ವಿ. ಗಂಗಾಧರನ್ ಇವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಸುರತ್ಕಲ್ ಮತ್ತು ಮಣಿಪಾಲ ಹೀಗೆ ಮೂರೂ ಹ್ಯಾಮ್ ಅಮೆಚೂರ್ ರೇಡಿಯೊ ಕ್ಲಬ್‌ಗಳಲ್ಲಿ ರೊನಾಲ್ಡ್ ಸಿಕ್ವೇರಾ ಅವರ ಆತ್ಮೀಯ ಒಡನಾಟದ ಬಗ್ಗೆ ವಿವರಿಸಿದರು.

     

    ರೊನಾಲ್ಡ್ ಸಿಕ್ವೇರಾ ಸದಸ್ಯರಾಗಿದ್ದ ಕೊಂಕಣಿ ಇಂಟರ್‌ನ್ಯಾಶನಲ್ ಟೋಸ್ಟ್ ಮಾಸ್ಟರ್ ಕ್ಲಬ್ ಪರವಾಗಿ ಪದಾಧಿಕಾರಿ ಪೀಟರ್ ಆಲ್ವಿನ್ ಡಿ ಸೊಜಾ ಮಾತನಾಡಿ ನುಡಿನಮನ ಸಲ್ಲಿಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಸಿಕೇರಾಮ್ ಸುರತ್ಕಲ್ ಕುರಿತು ಬರೆಯಲಾದ ಕವಿತೆಯನ್ನು ವಾಚಿಸಿ ನುಡಿನಮನ ಸಲ್ಲಿಸಿದರು.

    ರೊನಾಲ್ಡ್ ಜೋಸೆಫ್ ಸಿಕ್ವೇರಾ ಅವರ ಧರ್ಮಪತ್ನಿ ಶ್ರೀಮತಿ ಗ್ರೇಸಿ ಮತ್ತು ಪುತ್ರಿ ಕು. ರೀಮಾ ಹಾಜರಿದ್ದು, ರೀಮಾ ಕುಟುಂಬದ ಪರವಾಗಿ ಮಾತನಾಡಿ “ರೊನಾಲ್ದ್ ಅವರ 70ನೇ ಜನ್ಮದಿನದಂದು ಈ ಕಾರ್ಯಕ್ರಮ ಆಯೋಜಿಸಿದ್ದು ಅರ್ಥಪೂರ್ಣ ಎಂದರು.

    ಎಂ. ಸಿ. ಸಿ. ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಎಡುಕೇರ್ ವಿದ್ಯಾನಿಧಿ ಯೋಜನೆಯ ಮುಖ್ಯಸ್ಥ ಸ್ಟೀಫನ್ ಪಿಂಟೊ, ಹಿರಿಯ ಲೆಕ್ಕ ಪರಿಶೋಧಕ ಆರ್. ಡಿ. ಶಾಸ್ತ್ರಿ, ಭಾಷಾತಜ್ಞೆ ಪ್ರೊ. ಡಾ. ಜೀತಾ ಲೊಬೊ, ಪ್ರಶಸ್ತಿ ವಿಜೇತ ಹಿರಿಯ ಕೊಂಕಣಿ ಸಾಹಿತಿ ರೋನ್ ರೋಚ್ ಕಾಸ್ಸಿಯಾ, ಸಮಾಜ ಸೇವಕ ಮಹೇಶ್ ಲೆಸ್ಟರ್, ಆರ್ಕಿಡ್ ಆರ್ಟ್ ಗ್ಯಾಲರಿ ಮಾಲಕ ಹಾಗೂ ಖ್ಯಾತ ಇಂಗ್ಲಿಷ್ ಲೇಖಕ ವಿಲಿಯಮ್ ಪಾಯ್ಸ್, ರೋಶನ್ ಮಾಡ್ತಾ, ಸೋನಿಯಾ ಕ್ರಾಸ್ತಾ, ರೋಬರ್ಟ್ ಮಡಂತ್ಯಾರ್ ಹಾಗೂ ಇತರ ಗಣ್ಯರು ಹಾಜರಿದ್ದರು.

    ಪತ್ರಕರ್ತ ಎಚ್. ಎಮ್. ಪೆರ್ನಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಎಡ್ಡಿ ಸಿಕ್ವೇರಾ ನಿರೂಪಿಸಿ, ಕವಿ ಹಾಗೂ ಚಿಂತಕ ಟೈಟಸ್ ನೊರೊನ್ಹಾ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಪದವರ್ಣಗಳ ವಿಶಿಷ್ಟ ಪ್ರಸ್ತುತಿ ‘ನೃತ್ಯಾಂತರಂಗ’ | ಜೂನ್ 9
    Next Article ವಿಶೇಷ ಲೇಖನ | ಕಯ್ಯಾರರ ‘ಬೇಡುವೆಂ ಚಂದ್ರವಂಶದ ಕುಡಿಯ ಕಾಪಾಡು’
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.