Subscribe to Updates

    Get the latest creative news from FooBar about art, design and business.

    What's Hot

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025

    ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಸಾಧನೆ ಮಾಡಿದ ಗಗನ್ ಜಿ. ಗಾಂವ್ಕರ್

    September 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮ
    Kannada

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮ

    September 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಕ.ಸಾ.ಪ.ದ ಸದಸ್ಯರು ದಿನಾಂಕ 30 ಆಗಸ್ಟ್ 2025ರಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರ ಮನೆಗೆ ಭೇಟಿ ನೀಡಿದರು.

    ಸಂಮಾನ ಸ್ವೀಕರಿಸಿದ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ “ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು ಕೃತಿಗಳನ್ನು (ಸ್ವಂತ, ಅನುವಾದಿತ) ಬರೆಯಲು ಸಾಧ್ಯವಾಗಿದೆ. ಇದರಲ್ಲಿ ತಮ್ಮ ರಾಘವಯ್ಯನ ಮತ್ತು ಮಡದಿ ಕಾವೇರಿಯ ಪಾತ್ರ ಬಹಳ ದೊಡ್ಡದು. ನನ್ನ ಬರವಣಿಗೆಯನ್ನು ಓದಿ, ತಪ್ಪಿದ್ದರೆ ತಿಳಿಸುವುದನ್ನು ಮತ್ತು ಮುದ್ರಣದ ಅಂತಿಮ ಹಂತದವರೆಗೂ ಸಹಾಯ ಮಾಡುವುದನ್ನು ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಲೇಬೇಕು” ಎನ್ನುತ್ತಾ ಅಭಿಪ್ರಾಯ ವ್ಯಕ್ತಪಡಿಸಿದರು.

    ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣ್ಕರ್ ಲೇಖಕರನ್ನು ಸಂಮಾನಿಸಿ, ಇಂದು ಇಂತಹ ಸಜ್ಜನ ಬಂಧು, ಸಾಹಿತಿ, ಪಂಡಿತ ವಿದ್ವಾಂಸ ಮುಳಿಯ ತಿಮ್ಮಪ್ಪಯ್ಯನವರ ಸುಪುತ್ರರ ಮನೆಗೆ ಬಂದಿರುವುದು ನಮ್ಮ ಭಾಗ್ಯ ಎನ್ನುತ್ತಾ, ನೂರು ವರ್ಷ ಪೂರೈಸಿ ನೂರು ಕೃತಿಗಳೂ ಬರಲಿ ಎಂದು ಹಾರೈಸಿದರು.

    ಹೆಸರಾಂತ ವೈದ್ಯ ಸಾಹಿತಿ ಡಾ. ಮುರಲೀಮೋಹನ್ ಚೂಂತಾರು ಅಭಿನಂದನಾ ಮಾತುಗಳನ್ನಾಡಿ “ಇಂತಹ ಸಾಹಿತಿಗಳ ಕೃತಿಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದರಲ್ಲದೆ, ಲೇಖಕರ ಸಂಗ್ರಹದಲ್ಲಿರುವ ಹಳೆಯ ಮಹತ್ವದ ಗ್ರಂಥಗಳನ್ನು ಮರು ಪ್ರಕಟಿಸುವುದರಿಂದ ಸಾಹಿತ್ಯ ಲೋಕಕ್ಕೆ ಅಪಾರ ಲಾಭವಿದೆ” ಎಂದರು.

    ಗೋಪಾಲಕೃಷ್ಣ ಭಟ್ ಅವರ ಪತ್ನಿ ಕಾವೇರಿ ಅಮ್ಮ, ತಮ್ಮ ನಿವೃತ್ತ ವಿಜ್ಞಾನಿ ಮುಳಿಯ ರಾಘವಯ್ಯ, ಪುತ್ರಿಯರಾದ ದೇವಕಿ, ಡಾ. ಮಧುಮತಿ, ಅಳಿಯ ಭವಾನಿ ಶಂಕರ್, ಮೊಮ್ಮಗು ಪುಟಾಣಿ ಪ್ರಾಚಿ ಜೊತೆಗಿದ್ದರು. ಕ.ಸಾ.ಪ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸನತ್ ಕುಮಾರ್ ಜೈನ್, ಘಟಕದ ಡಾ. ಮೀನಾಕ್ಷಿ ರಾಮಚಂದ್ರ ಉಪಸ್ಥಿತರಿದ್ದರು. ರತ್ನಾವತಿ ಜೆ. ಬೈಕಾಡಿ ಪ್ರಾರ್ಥಿಸಿ, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ವಂದಿಸಿ, ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ನಿರೂಪಿಸಿದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ರಜತ ಮಹೋತ್ಸವ
    Next Article ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ 
    roovari

    Add Comment Cancel Reply


    Related Posts

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025

    ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಸಾಧನೆ ಮಾಡಿದ ಗಗನ್ ಜಿ. ಗಾಂವ್ಕರ್

    September 1, 2025

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ 

    September 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.