Subscribe to Updates

    Get the latest creative news from FooBar about art, design and business.

    What's Hot

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ
    Commemoration

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಪ್ಪಳ : ಕುಷ್ಟಗಿ ರಸ್ತೆಯಲ್ಲಿರುವ ಪದಕಿ ಟೌನ್ ಶಿಪ್ ಪ್ರದೇಶದ ಶಾಂತಿ ನಿವಾಸದಲ್ಲಿ ದಿನಾಂಕ 15 ಜೂನ್ 2025ರಂದು ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಕೊಪ್ಪಳ ಇದರ ವತಿಯಿಂದ ಹಮ್ಮಿಕೊಂಡಿದ್ದ ಖ್ಯಾತ ಕವಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಇವರಿಗೆ ನುಡಿನಮನ ಹಾಗೂ ಜಿಲ್ಲಾ ಮಟ್ಟದ ಮುಂಗಾರು ಕಾವ್ಯೋತ್ಸವ (ಚುಟುಕು, ಕವಿತೆ, ಶಾಹಿರಿ ಹಾಗೂ ಗಜಲ್ ವಾಚನಗಳ ಝಲಕ್) ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.

    ಈ ಕಾರ್ಯಕ್ರಮದಲ್ಲಿ ಎಚ್.ಎಸ್.ವಿ.ಯವರ ‘ಬದುಕು ಬರಹ’ ಕುರಿತು ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ “ಭಾವಗೀತೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬರಹ ರೂಪದಲ್ಲಿ ಪ್ರಕಟಿಸಿದ ಶ್ರೇಯಸ್ಸು ಖ್ಯಾತ ಕವಿ ದಿವಂಗತ ಎಚ್.ಎಸ್. ವೆಂಕಟೇಶ ಮೂರ್ತಿಯವರಿಗೆ ಸಲ್ಲುತ್ತದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಯಾವುದೇ ಗುಂಪು ಪಂಗಡಕ್ಕೆ ಸೀಮಿತಗೊಳ್ಳದೆ ನಿರಂತರ ಅಧ್ಯಯನ ಸಾಹಿತ್ಯ ಕೃಷಿ ಮಾಡುತ್ತಾ ಸುಮಾರು ನೂರಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ, ಇಂತಹ ಸಾಹಿತ್ಯ ದಿಗ್ಗಜರ ಪರಂಪರೆಯನ್ನು ಯುವ ಪೀಳಿಗೆ ಸ್ಮರಿಸಿ ಗುಣಗಾನ ಮಾಡುತ್ತಿರುವುದು ಎಚ್.ಎಸ್.ವಿ.ಯವರ ಸಾರ್ಥಕ ಬದುಕಿಗೆ ನಿದರ್ಶನ” ಎಂದು ಅಭಿಪ್ರಾಯಪಟ್ಟರು.

    ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜಾಮದಾರ್ ಮಾತನಾಡಿ ಎಚ್.ಎಸ್.ವಿ. ಅವರೊಂದಿಗಿನ ಒಡನಾಟ ಸ್ಮರಿಸುತ್ತಾ “ನನ್ನ ಕೃತಿಗೆ ಎಚ್.ಎಸ್.ವಿ.ಯವರಿಂದ ಬೆನ್ನುಡಿ ಬರೆಸಬೇಕೆಂದು ನಿರೀಕ್ಷೆ ಮಾಡಿದ್ದೆ, ಅದು ಈಡೇರಲಿಲ್ಲ. ಬರುವ ದಿನಗಳಲ್ಲಿ ಚುಟುಕು ಸಾಹಿತ್ಯ ಪರಿಷತ್ ಹಾಗೂ ಚಲನಚಿತ್ರ ಆಕಾಡೆಮಿ ಸಹಯೋಗದಲ್ಲಿ ಎಚ್.ಎಸ್.ವಿ. ಸ್ಮರಣಾರ್ಥ ಕಾರ್ಯಕ್ರಮ ರೂಪಿಸಲಾಗುವುದು” ಎಂದು ತಿಳಿಸಿದರು.

    ಕನ್ನಡ ಪಂಡಿತ್ ಶಿಕ್ಷಕ ತೀರ್ಥಯ್ಯ ಮಠದ ಇವರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಶಿ.ಕಾ. ಬಡಿಗೇರ, ದೊಡ್ಡಯ್ಯ ಮಳಿಮಠ, ಕನ್ನಡ ಪರ ಚಿಂತಕ ಅಮೀನಸಾಬ್ ಮುಲ್ಲಾ, ಸ್ಪರ್ಧಾಸ್ಪೂರ್ತಿ ಸಂಪಾದಕ ಎಚ್.ಆರ್. ವಸ್ತ್ರದ ಉಪಸ್ಥಿತರಿದ್ದರು. ನಂತರ ನಡೆದ ‘ಮುಂಗಾರು ಕಾವ್ಯೋತ್ಸವ’ದಲ್ಲಿ ಕವಿಗಳಾದ ಎ.ಪಿ. ಅಂಗಡಿ, ಪುಷ್ಪಲತಾ ಯೋಳಭಾವಿ, ಶಿವಮ್ಮ ಗುರುಸ್ಥಳಮಠ, ಶಾರದಾ ಶ್ರಾವಣಸಿಂಗ್ ರಜಪೂತ, ಡಾ. ಪ್ರಕಾಶ್ ಹಳ್ಳಿಗುಡಿ, ಸುಮಂಗಲಾ ಹಂಚಿನಾಳ, ಪ್ರದೀಪ್ ಹದ್ದಣ್ಣವರ್, ಪೂಜಾ ವಣಗೇರಿ, ವೀರೇಶ ಇಂದರಗಿ, ಶಿವಪ್ರಸಾದ್ ಹಾದಿಮನಿ, ನಿಂಗಪ್ಪ ಕೆ., ಅಕ್ಕಮಹಾದೇವಿ ಅಂಗಡಿ, ಶರಭಯ್ಯಸ್ವಾಮಿ ಹಿರೇಮಠ ಮೊದಲಾದವರು ಕವಿತೆ ವಾಚಿಸಿದರು. ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರುದ್ರಪ್ಪ ಆರ್. ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಹಾದಿಮನಿ ನಿರೂಪಿಸಿ, ಪ್ರದೀಪ ಹದ್ದಣ್ಣವರ್ ವಂದಿಸಿದರು.

    baikady commemoration Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)
    Next Article ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.