Subscribe to Updates

    Get the latest creative news from FooBar about art, design and business.

    What's Hot

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ಇವರಿಗೆ ‘ಕಯ್ಯಾರ’ ಪ್ರಶಸ್ತಿ

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ ಹಾಗೂ ತಾಳಮದ್ದಳೆ
    Yakshagana

    ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ ಹಾಗೂ ತಾಳಮದ್ದಳೆ

    May 27, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಮತ್ತು ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರಿಗೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬಿಲ್ವಶ್ರೀ’ ಸಭಾಂಗಣದಲ್ಲಿ ಕ್ಷೇತ್ರದ ಪತ್ತನಾಜೆ ಉತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘವು ಏರ್ಪಡಿಸಿದ ಹುಟ್ಟೂರ ಸಮ್ಮಾನ ಕಾರ್ಯಕ್ರಮವು ದಿನಾಂಕ 24-05-2024ರಂದು ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಯಕ್ಷಗಾನ ಅರ್ಥಧಾರಿ ಮತ್ತು ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರು ಮಾತನಾಡುತ್ತಾ “ವ್ಯಕ್ತಿಯೊಬ್ಬ ದೊಡ್ಡ ಶಕ್ತಿಯಾಗುವುದು ತನ್ನ ಸಾಧನೆಯ ಬಲದಿಂದ. ಭಾಸ್ಕರ ರೈ ಕುಕ್ಕುವಳ್ಳಿಯವರು ಕೇವಲ ಯಕ್ಷಗಾನಕ್ಕಾಗಿ ಸೀಮಿತರಾದವರಲ್ಲ. ಅವರು ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ, ಕವಿ – ಸಾಹಿತಿಯಾಗಿ, ಸಾಂಸ್ಕೃತಿಕ ಸಂಘಟಕರಾಗಿ ವಿಶೇಷ ಸಾಧನೆ ಮಾಡಿದ ಸಾಹಸಿ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸುಮಾರು 30 ಕೃತಿಗಳನ್ನು ಹೊರ ತಂದ ಪ್ರಬುದ್ಧ ಲೇಖಕ. ದೇಶ ವಿದೇಶಗಳ ಪ್ರಮುಖ ಕಾರ್ಯಕ್ರಮಗಳಲ್ಲಿ ಕರಾವಳಿಯ ಸಾಂಸ್ಕೃತಿಕ ಹರಿಕಾರರಾಗಿ ಭಾಗವಹಿಸಿ ಹಲವು ಪ್ರಶಸ್ತಿಗಳಿಗೆ ಭಾಜನರಾದ ಭಾಸ್ಕರ ರೈ ಅವರು ನಿರಂತರ ಕ್ರಿಯಾಶೀಲರಾಗಿರುವ ವಿಶಿಷ್ಟ ಪ್ರತಿಭಾವಂತ. ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಧೀಮಂತ” ಎಂದು ಶ್ಲಾಘಿಸಿದರು.

    ಅಭಿನಂದನಾ ಭಾಷಣ ಮಾಡಿದ ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎನ್. ಸಂಜೀವ ರೈ ಅವರು ಮಾತನಾಡಿ “ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ ಭದ್ರ ಅಡಿಪಾಯ ಹಾಕಿಕೊಟ್ಟಿರುವ ಭಾಸ್ಕರ ರೈಯವರು ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಮನೆತನದಲ್ಲಿ ಜನಿಸಿದವರು. ಆರಂಭದಲ್ಲಿ ಕೃಷಿಕನಾಗಿ, ಸ್ಥಳೀಯ ಸಂಸ್ಥೆಗಳಲ್ಲಿ ದುಡಿದು ಮುಂದೆ ಮಂಗಳೂರು ಸೇರಿ ಅಂಚೆ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳಲ್ಲಿ ಸರಕಾರಿ ಸೇವೆಯನ್ನು ಮಾಡುವುದರೊಂದಿಗೆ ಯಕ್ಷಗಾನದ ಪ್ರಸಿದ್ಧ ಅರ್ಥಧಾರಿಯಾಗಿ ಮತ್ತು ಬರಹಗಾರರಾಗಿ ಬೆಳೆದು ಹುಟ್ಟೂರಿಗೆ ಕೀರ್ತಿ ತಂದಿದ್ದಾರೆ” ಎಂದರು.

    ಪೂರ್ವಾಹ್ನ ಪುತ್ತೂರು ಶಿವ ಬ್ರಾಹ್ಮಣ ಸಮಾಜ ಸೇವಾ ಸಂಘದ ನಿರ್ದೇಶಕ ಬೆಟ್ಟಂಪಾಡಿ ಅಶೋಕ ಕುಮಾರ ಸಮಾರಂಭವನ್ನು ಉದ್ಘಾಟಿಸಿದರು. ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಪರ್ಲಡ್ಕದ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರೀಸರ್ಚ್ ಸೆಂಟರ್ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ ಇವರು ಶ್ರೀ ಭಾಸ್ಕರ ರೈ ಕುಕ್ಕುವಳ್ಳಿಯವರನ್ನು ಸನ್ಮಾನಿಸಿದರು.

    ಬೆಟ್ಟಂಪಾಡಿ ನವೋದಯ ವಿದ್ಯಾ ಸಮಿತಿ ಅಧ್ಯಕ್ಷ ಡಿ.ಎಂ. ಬಾಲಕೃಷ್ಣ ಭಟ್ ಘಾಟೆ ಮತ್ತು ಪ್ರಗತಿಪರ ಕೃಷಿಕ ಎಂ. ಮುತ್ತಣ್ಣ ಶೆಟ್ಟಿ ಚೆಲ್ಯಡ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕ ನಾರಾಯಣ ಭಟ್ ಕುಂಚಿನಡ್ಕ ಮತ್ತು ಕಲಾಪೋಷಕ ಜನಾರ್ಧನ ರಾವ್ ಬೆಟ್ಟಂಪಾಡಿ ಅವರನ್ನು ಸಪತ್ನೀಕರಾಗಿ ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಮತ್ತು ಹಿರಿಯ ಸದಸ್ಯ ಬಿ. ವಿಷ್ಣು ರಾವ್ ಸನ್ಮಾನ ಪತ್ರ ಓದಿದರು. ಶ್ರೀಕ್ಷೇತ್ರ ಬೆಟ್ಟಂಪಾಡಿಯ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೀಡು, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಸಂಘದ ಹಿರಿಯ ಸದಸ್ಯ ಬಿ.‌ವೆಂಕಟ್ರಾವ್, ಕೋಶಾಧಿಕಾರಿ ಶ್ಯಾಂಪ್ರಸಾದ ಎಂ. ಉಪಸ್ಥಿತರಿದ್ದರು. ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಐ. ಗೋಪಾಲಕೃಷ್ಣ ರಾವ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯದರ್ಶಿ ಪ್ರದೀಪ್ ರೈ ಕೇಕನಾಜೆ ವರದಿ ಮಂಡಿಸಿದರು. ಪತ್ರಕರ್ತ ಉಮೇಶ್ ಮಿತ್ತಡ್ಕ ವಂದಿಸಿದರು. ಕೃಷ್ಣಪ್ರಸಾದ್ ಬೆಟ್ಟಂಪಾಡಿ ನಿರೂಪಿಸಿದರು.

    ಸಮಾರಂಭಕ್ಕೂ ಮುನ್ನ ‘ಗುರು ಶಿಷ್ಯ ಸಂವಾದ’ ಯಕ್ಷಗಾನ ತಾಳಮದ್ದಳೆ ಜರಗಿತು. ಡಾ. ಎಂ. ಪ್ರಭಾಕರ ಜೋಶಿ (ಪರಶುರಾಮ) ಮತ್ತು ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ಭೀಷ್ಮ) ಅರ್ಥಧಾರಿಗಳಾಗಿದ್ದರು. ಪ್ರಶಾಂತ ರೈ ಪುತ್ತೂರು ಅವರ ಭಾಗವತಿಕೆಗೆ ಸಂಘದ ಕಲಾವಿದರು ಹಿಮ್ಮೇಳದಲ್ಲಿ ಸಹಕರಿಸಿದರು. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ 44ನೇ ವಾರ್ಷಿಕೋತ್ಸವದ ಪ್ರಯುಕ್ತ ಅಪರಾಹ್ನ ಗಂಟೆ 2-00ರಿಂದ ಸಂಘದ ಕಲಾವಿದರು ಮತ್ತು ಅತಿಥಿ ಕಲಾವಿದರ ಸಂಯೋಜನೆಯಲ್ಲಿ ‘ಮಹಾಶೂರ ಭೌಮಾಸುರ’ ಯಕ್ಷಗಾನ ಬಯಲಾಟ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಆಡುಮಾತಿನ ಕುಂದಗನ್ನಡದ ಜಾನಪದ ಕಥೆ ಹಾಗೂ ಹಾಡುಗಾರ್ತಿ ಕಾರ್ತಟ್ಟು ನಿವಾಸಿ ಕಮಲಾ ನಾಯರಿ ನಿಧನ
    Next Article  ಮೇ ಸಾಹಿತ್ಯ ಮೇಳ ಉದ್ಘಾಟನೆ
    roovari

    Add Comment Cancel Reply


    Related Posts

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.